ಸಾಗರದಲ್ಲಿ ಪರಿವರ್ತನಾ ಯಾತ್ರೆ : ಅಭ್ಯರ್ಥಿ ಬಗ್ಗೆ ಇನ್ನೂ ಗುಟ್ಟು!
ಶಿವಮೊಗ್ಗ, ಡಿಸೆಂಬರ್ 28 : 2018ರ ಚುನಾವಣೆಗೆ ಸಾಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಇಂದು ಕ್ಷೇತ್ರದಲ್ಲಿ ಪರಿವರ್ತನಾ ಯಾತ್ರೆ ನಡೆಯಿತು. ಆದರೆ, ಅಭ್ಯರ್ಥಿ ಬಗ್ಗೆ ಯಡಿಯೂರಪ್ಪ ಗುಟ್ಟು ಬಿಟ್ಟುಕೊಡಲಿಲ್ಲ.
ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದಲ್ಲಿ ಗುರುವಾರ ಕರ್ನಾಟಕ ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾವೇಶ ನಡೆಯಿತು. ತವರು ಜಿಲ್ಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ ಸಿಕ್ಕಿತು.
ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಾಗರ-ಹೊಸನಗರ ಕ್ಷೇತ್ರದ ಅಭಿವೃದ್ಧಿಗೆ ತಂದಿರುವ ಯೋಜನೆಗಳ ವಿವರ ನೀಡಿದರು.
ತಮ್ಮ ಭಾಷಣದ ಕೊನೆಗೆ ಯಡಿಯೂರಪ್ಪ ಅವರು, 'ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದಿಂದ ಗಣೇಶ್ ಕಾರ್ಣಿಕ್ ಅವರನ್ನು ಗೆಲ್ಲಿಸಿ' ಕಳುಹಿಸಿ ಎಂದು ಜನರಲ್ಲಿ ಮನವಿ ಮಾಡಿದರು.
ಸಾಗರ ಕ್ಷೇತ್ರದಲ್ಲಿ 2018ರ ಚುನಾವಣೆ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತಗೊಂಡಿಲ್ಲ. ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೆಸರು ಕೇಳಿಬರುತ್ತಿದೆ. ಸಮಾವೇಶದಲ್ಲಿ ಯಡಿಯೂರಪ್ಪ ಅವರು ಗುಟ್ಟು ಬಿಟ್ಟು ಕೊಟ್ಟಿಲ್ಲ...

ಸಾಗರದಲ್ಲಿ ಬಿಜೆಪಿ ಗೆಲುವು ಖಚಿತ
ಸಮಾವೇಶದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, 'ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂದು ಚಿಂತೆ ಮಾಡುವ ಅಗತ್ಯವಿಲ್ಲ. 150 ಸ್ಥಾನ ಗೆಲ್ಲಬೇಕು, ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರೆ ಸಾಗರ ಕ್ಷೇತ್ರದಲ್ಲಿ ಪಕ್ಷ ಗೆಲ್ಲಲೇಬೇಕು' ಎಂದರು.

ಅಭ್ಯರ್ಥಿ ಗೆಲ್ಲಿಸುವ ಜವಾಬ್ದಾರಿ ತೆಗೆದುಕೊಳ್ಳಿ
'ಯುವಕರು ಮತ್ತು ಕ್ಷೇತ್ರದ ನಾಯಕರು ಬೂತ್ಗಳನ್ನು ಬಲಪಡಿಸಿ. ಯಾರೇ ಅಭ್ಯರ್ಥಿಯಾಗಲಿ, ಅವರನ್ನು ಗೆಲ್ಲಿಸಲೇಬೇಕು ಎಂಬ ಜವಾಬ್ದಾರಿಯನ್ನು ತೆಗೆದುಕೊಳ್ಳಿ' ಎಂದು ಯಡಿಯೂರಪ್ಪ ಕರೆ ನೀಡಿದರು.

ಬೇಳೂರು v/s ಹಾಲಪ್ಪ
ಸಾಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತಗೊಂಡಿಲ್ಲ. ಇಂದಿನ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಸಹ ಯಡಿಯೂರಪ್ಪ ಈ ಬಗ್ಗೆ ಗುಟ್ಟು ಬಿಟ್ಟು ಕೊಟ್ಟಿಲ್ಲ. ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೆಸರು ಕೇಳಿಬರುತ್ತಿದೆ.

ಕಳೆದ ಬಾರಿ ಬಿಜೆಪಿಗೆ ಸೋಲಾಗಿತ್ತು
2013ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕ್ಷೇತ್ರದಲ್ಲಿ ಸೋಲು ಉಂಟಾಗಿತ್ತು. ಬೇಳೂರು ಗೋಪಾಲಕೃಷ್ಣ ಅವರು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಿಜೆಪಿಯಿಂದ ಕಣಕ್ಕಿಳಿದಿದ್ದ ಶರಾವತಿ ಸಿ.ಆರ್. ಅವರು ಸಹ 4ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು.

ಸಚಿವರ ಕ್ಷೇತ್ರ ಸಾಗರ
ಸಾಗರ ಕ್ಷೇತ್ರದ ಶಾಸಕರು ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ. ಸಿದ್ದರಾಮಯ್ಯ ಸಂಪುಟದಲ್ಲಿ ಅವರು ಕಂದಾಯ ಸಚಿವರು. ಈ ಬಾರಿಯ ಚುನಾವಣೆಗೆ ಅವರು ಸ್ಪರ್ಧಿಸುವುದಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.

2013ರ ಚುನಾವಣೆ ಫಲಿತಾಂಶ
* ಕಾಗೋಡು ತಿಮ್ಮಪ್ಪ - 71,960 ಮತ
* ಬಿ.ಆರ್.ಜಯಂತ್ - 30,712 ಮತ (ಕೆಜೆಪಿ)
* ಬೇಳೂರು ಗೋಪಾಲಕೃಷ್ಣ - 23,217 ಮತ (ಜೆಡಿಎಸ್)
* ಶರಾವತಿ ಸಿ.ರಾವ್ - 5,355 ಮತ (ಬಿಜೆಪಿ)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications