ಶಿವಮೊಗ್ಗದಲ್ಲಿ ಆಯುಷ್ ಫಾರ್ಮ, ವೆಲ್ ನೆಸ್ ಕ್ಲಸ್ಟರ್ ಸ್ಥಾಪನೆ: ಬಿಎಸ್ವೈ
ಬೆಂಗಳೂರು ಸೆಪ್ಟೆಂಬರ್ 15: ಮಾನ್ಯ ಮುಖ್ಯಮಂತ್ರಿ ಗಳು ಇಂದು ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಯುಷ್ ಫಾರ್ಮಾ, ಬಯೋ ಫಾರ್ಮಾ, ಆರೋಗ್ಯ ಸೇವೆಗಳ (ವೆಲ್ ನೆಸ್) ಕ್ಲಸ್ಟರ್ ಸ್ಥಾಪನೆಗೆ ಅವಕಾಶವಿದೆ ಎಂದು ವಿವರಿಸಿದರು. ಈ ಕುರಿತು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರು ರಾಜ್ಯದಲ್ಲಿ ಸ್ಥಾಪಿಸಲಾಗುತ್ತಿರುವ 9 ಕೈಗಾರಿಕಾ ಕ್ಲಸ್ಟರ್ ಗಳ ಕುರಿತು ಮಾಹಿತಿ ನೀಡಿದರು.
ಕೊಪ್ಪಳದಲ್ಲಿ ಆಟಿಕೆಗಳ ಕೈಗಾರಿಕೆ ಸ್ಥಾಪನೆ ಹಾಗೂ ಬಳ್ಳಾರಿಯಲ್ಲಿ ಜವಳಿ ಮತ್ತು ವಸ್ತ್ರೋದ್ಯಮ ಸ್ಥಾಪನೆಗೆ ಹಲವು ಕಂಪೆನಿಗಳು ಸಿದ್ಧತೆ ನಡೆಸಿದ್ದು, ವಸ್ತ್ರೋದ್ಯಮದಿಂದ ಮಹಿಳೆಯರಿಗೆ ಹೆಚ್ಚಿನ ಅವಕಾಶ ದೊರೆಯತ್ತದೆ ಎಂದು ವಿವರಿಸಿದರು.

ಚಿಕ್ಕಬಳ್ಳಾಪುರದಲ್ಲಿ, ಮೊಬೈಲ್ ಫೋನ್ ಮತ್ತು ಇತರ ಇಲೆಕ್ಟ್ರಾನಿಕ್ ಉತ್ಪನ್ನಗಳು, ಚಿತ್ರದುರ್ಗದಲ್ಲಿ ಎಲ್ ಇ ಡಿ ಉಪಕರಣಗಳ ಕ್ಲಸ್ಟರ್, ಹಾಸನದಲ್ಲಿ ಟೈಲ್ಸ್ ಮತ್ತು ಸ್ಯಾನಿಟರಿ ವೇರ್, ತುಮಕೂರಿನಲ್ಲಿ ಕ್ರೀಡೆ ಮತ್ತು ವ್ಯಾಯಾಮ ಸಲಕರಣೆಗಳ ತಯಾರಿಕೆಯ ಉದ್ಯಮ ಸ್ಥಾಪನೆಗೆ ಹಲವು ಕಂಪೆನಿಗಳು ಉತ್ಸುಕತೆ ತೋರಿವೆ. ಮಾತುಕತೆ ವಿವಿಧ ಹಂತದಲ್ಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಯುವಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೈಗಾರಿಕಾ ಕ್ಲಸ್ಟರುಗಳ ಸ್ಥಾಪನೆಯನ್ನು ಆದ್ಯತೆಯ ಮೇರೆಗೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಈಸಭೆಯಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.












Click it and Unblock the Notifications