BY Vijayendra Nomination: ಪುತ್ರನ ನಾಮಪತ್ರ ಸಲ್ಲಿಸಲು ತನ್ನ ಹಳೆಯ ಅಂಬಾಸಿಡಾರ್ ಕಾರು ಹತ್ತಿ ಹೊರಟ ಬಿಎಸ್ ಯಡಿಯೂರಪ್ಪ
ಶಿಕಾರಿಪುರ, ಏಪ್ರಿಲ್ 19: ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿವೈ ವಿಜಯೇಂದ್ರ ಅವರ ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಲಿರುವ ಅವರ ತಂದೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ತಮ್ಮ ಹಳೆಯ ಅಂಬಾಸಿಡಾರ್ ಕಾರು ಹತ್ತಿ ಹೊರಟರು.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಬುಧವಾರ ನಾಮಪತ್ರ ಸಲ್ಲಿಸಲಿರುವ ಅವರು ಬೆಳಗ್ಗೆ ತಮ್ಮ ತಂದೆಯ ಆಶೀರ್ವಾದ ಪಡೆದುಕೊಂಡರು. ಈ ವೇಳೆ ವಿಜಯೇಂದ್ರ ಅವರ ಪತ್ನಿ ಕೂಡ ಜೊತೆಗಿದ್ದರು.

ಬಿಎಸ್ ಯಡಿಯೂರಪ್ಪ ಅವರು ಆಸ್ತಿಕರಾಗಿದ್ದು, ಪ್ರತಿ ಒಳ್ಳೆಯ ಕೆಲಸಗಳನ್ನು ಆರಂಭಿಸುವ ಮುನ್ನ ತಮ್ಮ ಇಷ್ಟ ದೇವರನ್ನು ನೆನೆಯುವುದು, ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುವುದು ಅವರ ಆದ್ಯತೆಯ ಕೆಲಸಗಳಾಗಿರುತ್ತದೆ. ಹೀಗಾಗಿ ಇಂದು ತಮ್ಮ ಪುತ್ರನ ನಾಮಪತ್ರ ಸಲ್ಲಿಕೆಗಾಗಿ ಶಿಕಾರಿಪುರಕ್ಕೆ ಬಂದಿದ್ದ ಅವರು ತಮ್ಮ ಹಳೆಯ ಅಂಬಾಸಿಡಾರ್ ಕಾರಿನಲ್ಲಿ ಹೊರಟಿದ್ದು ಎಲ್ಲರಲ್ಲು ಆಶ್ಚರ್ಯ ಮೂಡಿಸಿತು.
ತನಗೆ ಇಷ್ಟವಾದ ಲಕ್ಕಿ ಕಾರಿನಲ್ಲಿ ಅವರು ಹೊರಟಿದ್ದು, ಅವರಿಗೆ ಹೆಚ್ಚು ಇಷ್ಟವಾಯಿತು ಎಂದು ಅವರ ಮತ್ತೋರ್ವ ಪುತ್ರ, ಸಂಸದ ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ, ಬಿಎಸ್ ಯಡಿಯೂರಪ್ಪ ಅವರು ತಮ್ಮ ಇಂದು ಮನೆಯಿಂದ ತಮ್ಮ ನೆಚ್ಚಿನ ಅಂಬಾಸಿಡರ್ ಕಾರ್ ಸಿಕೆಆರ್ 45ರಲ್ಲಿ ಬಿಜೆಪಿ ಕಚೇರಿಗೆ ಪ್ರಯಾಣ ಬೆಳೆಸಿದರು ಎಂದು ಬಿವೈ ರಾಘವೇಂದ್ರ ಅವರು ಟ್ವೀಟ್ ಮಾಡಿದ್ದಾರೆ.
Old is gold. Legacies always live.
— B Y Raghavendra (@BYRBJP) April 19, 2023
Former @CMofKarnataka Shri @BSYBJP travelled to the BJP office today in his favourite Ambassador car CKR 45 from his house.@BJP4India @BJP4Karnataka @narendramodi @narendramodi_in @AmitShah @JPNadda pic.twitter.com/S6vrQ9gzr6
ಬಿಎಸ್ ಯಡಿಯೂರಪ್ಪ ಅವರು ತಮ್ಮ ಇಷ್ಟ ವಸ್ತುಗಳನ್ನು ತಮಗೆ ಶ್ರೇಷ್ಟ ಎಂದು ಭಾವಿಸುತ್ತಾರೆ. ಅದನ್ನು ಅವರು ತಮ್ಮ ಲಕ್ಕಿ ಎಂದು ಕೂಡ ಭಾವಿಸಿ ಬಳಸುತ್ತಾರೆ. ಇಂದು ಪುತ್ರನ ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ಹಳೆಯ ಕಾರು ಹತ್ತಿ ಮನೆಯಿಂದ ಹೊರಟ ಅವರು ಖುಷಿಯಿಂದ ಕಾರಿನಲ್ಲಿ ಕುಳಿತಿದ್ದರು, ಅವರು ಹಿಂಬದಿಯ ಸೀಟಿನಲ್ಲಿ ಪುತ್ರ, ಸಂಸದ ಬಿವೈ ರಾಘವೇಂದ್ರ ಅವರು ಕುಳಿತಿದ್ದರು.
ದಾರಿಯುದ್ದಕ್ಕೂ ಅವರಿಗೆ ರಾಜ್ಯ ಭದ್ರತಾ ಪಡೆ ಹಿಂದೆ ಮುಂದೆ ಸಾಗುತ್ತಿದ್ದವು. ಯಡಿಯೂರಪ್ಪ ಅವರು ಮಧ್ಯೆ ತಮ್ಮ ಅಂಬಾಸಿಡಾರ್ ಕಾರಿನಲ್ಲಿ ಕುಳಿತು ಪ್ರಯಾಣಿಸಿದರು. ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಬಿವೈ ವಿಜಯೇಂದ್ರ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ ಮಲ್ಲೇಶ್ ಅವರು ಕಣಕ್ಕೆ ಇಳಿಸಿದ್ದಾರೆ. ಇನ್ನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಟರಾಜ್ ಗೌಡ ಅವರು ಟಿಕೆಟ್ ಸಿಗದಿದ್ದರೂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.
ನಟರಾಜ್ ಗೌಡ ಅವರು ಮಂಗಳವಾರ ನಾಮಪತ್ರ ಸಲ್ಲಿಸುವ ವೇಳೆ 2,000 ಅಧಿಕ ಮಂದಿ ಸೇರಿದ್ದರು. ಇಂದು ಬುಧವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆಗೆ ಹೋಗಿರುವ ಯಡಿಯೂರಪ್ಪ ಅವರ ಜೊತೆ ಸಾವಿರಾರು ಜನರು ಕೂಡ ಪಾಲ್ಗೊಂಡಿರುವುದು ಕಂಡು ಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications