ಬಿಜೆಪಿ ಶಾಸಕ ಶೇಖರ್ ಆತ್ಮಾಹುತಿಗೆ ಯತ್ನ, ಯಡಿಯೂರಪ್ಪ ಹೇಳಿದ್ದೇನು?

Recommended Video

      ಆತ್ಮಾಹುತಿಗೆ ಪ್ರಯತ್ನಪಟ್ಟ ಶಾಸಕನ ಬಗ್ಗೆ ಯಡಿಯೂರಪ್ಪ ಮಾತು | Oneindia Kannada

      ಶಿವಮೊಗ್ಗ, ಜನವರಿ 7: ಅದೃಷ್ಟ ಚೆನ್ನಾಗಿತ್ತು ಗೂಳಿಹಟ್ಟಿ ಶೇಖರ್ ಅಪಾಯದಿಂದ ಪಾರಾಗಿದ್ದಾರೆ, ಶಾಸಕರಿಗೆ ಹೀಗಾದರೆ ಸಾಮಾನ್ಯರ ಗತಿ ಏನು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

      ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಮರಳು ದಂಧೆಯನ್ನು ತಡೆಯಲು ಹೋದ ಗೂಳಿ ಹಟ್ಟಿ ಶೇಖರ್‌ಗೆ ಈ ರೀತಿ ತೊಂದರೆಯಾಗಿದೆ. ವೈದ್ಯರು ಶಾಸಕರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

      ಪೆಟ್ರೋಲ್ ಕಣ್ಣಿನ ಭಾಗಕ್ಕೆ ತಾಗಿದ್ದರಿಂದ ಸ್ವಲ್ಪ ತೊಂದರೆಯಾಗಿದೆ ಆದರೆ ಅದೃಷ್ಟ ಚೆನ್ನಾಗಿತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.

      BSY meets MLA Shekhar and enquire his health

      ಅಕ್ರಮ ಮರಳು ಸಾಗಣೆ ಹೆಸರಲ್ಲಿ ಪೊಲೀಸರು ಅಮಾಯಕರನ್ನು ಬಂಧಿಸುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಗೂಳಿಹಟ್ಟಿ ಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಾಹುತಿಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.

      ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪೊಲೀಸ್ ಠಾಣೆ ಮುಂಭಾಗವೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತಕ್ಷಣವೇ ಸ್ಥಳದಲ್ಲಿದ್ದವರು ಬೆಂಕಿ ನಂದಿಸಿದ್ದು, ಗೂಳಿಹಟ್ಟಿಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಣಾಪಾಯದಿಂದ ಪಾರಾಗಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಮುಂದುವರೆದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+