ಓಟ ನಿಲ್ಲಿಸಿದ 'ಈಸೂರು ದಂಗೆ': ಅಂತಿಮ ದರ್ಶನಕ್ಕೆ ಜನಸಾಗರ, ರಾಷ್ಟ್ರಗೀತೆ ಹೇಳಿ ಅಂತ್ಯ ಸಂಸ್ಕಾರ
ಶಿವಮೊಗ್ಗ, ಮಾರ್ಚ್ 6: ಸೋಲಿಲ್ಲದ ಸರದಾರ ಎಂಬ ಖ್ಯಾತಿ ಹೊಂದಿದ್ದ ಈಸೂರು ದಂಗೆ ಹೋರಿ ಮೃತಪಟ್ಟಿದೆ. ವಯೋಸಹಜ ಕಾರಣದಿಂದ ಹೋರಿ ಕೊನೆಯುಸಿರೆಳೆದಿದೆ. ಈಸೂರು ಗ್ರಾಮದಲ್ಲಿ ಈಸೂರು ದಂಗೆಯ ಅಂತಿಮ ಯಾತ್ರೆ ನಡೆಯಿತು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ "ಈಸೂರು ದಂಗೆ' ಯ ಅಂತಿಮ ದರ್ಶನಕ್ಕೆ ಬೃಹತ್ ಸಂಖ್ಯೆಯಲ್ಲಿ ಜನರು ಬಂದಿದ್ದರು. ಟ್ರಾಕ್ಟರ್ ಮೇಲೆ ಹೋರಿಯನ್ನು ಇರಿಸಿ ಮೆರವಣಿಗೆ ನಡೆಸಲಾಯಿತು. ಗ್ರಾಮದಲ್ಲಿ ದೊಡ್ಡ ಸಂಖ್ಯೆಯ ಜನರು ಸೇರಿ, ಹೋರಿಗೆ ಅಂತಿಮ ನಮನ ಸಲ್ಲಿಸಿದರು. ಅಶೋಕ ಚಕ್ರವಿಲ್ಲದ ತ್ರಿವರ್ಣ ಹೊದಿಸಿ, ರಾಷ್ಟ್ರಗೀತೆ ಹಾಡಿ ಗ್ರಾಮದಲ್ಲಿಯೇ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ದಶಕಕ್ಕೂ ಹೆಚ್ಚು ಕಾಲದಿಂದ ಸ್ಪರ್ಧೆ
ಈಸೂರಿನ ಡಾ.ಪ್ರಶಾಂತ್ ಎಂಬುವರು ಈಸೂರು ದಂಗೆ ಹೋರಿಯನ್ನು ಸಾಕಿದ್ದರು. ಈ ಹೋರಿ ಶಿವಮೊಗ್ಗ, ಹಾವೇರಿ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯಲ್ಲಿ ಭಾರೀ ಹೆಸರು ಗಳಿಸಿತ್ತು. ಪಕ್ಕದ ತಮಿಳುನಾಡಿನಲ್ಲೂ ಈಸೂರು ದಂಗೆಗೆ ಅಭಿಮಾನಿಗಳಿದ್ದಾರೆ. ಹತ್ತು ವರ್ಷಕ್ಕೂ ಹೆಚ್ಚು ಕಾಲದಿಂದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗವಹಿಸಿತ್ತು. ಈಸೂರು ದಂಗೆ ಹೋರಿಯನ್ನು ನೋಡಲೆಂದೇ ಹೋರಿಹಬ್ಬಕ್ಕೆ ಅಭಿಮಾನಿಗಳು ಹರಿದುಬರುತ್ತಿದ್ದರು.

ಎಲ್ಲಿಯೇ ಹೋದರೂ ಬಹುಮಾನ ಫಿಕ್ಸ್
ಯಾವುದೇ ಹೋರಿ ಬೆದರಿಸುವ ಸ್ಪರ್ಧೆಗೆ ಹೋದರೂ ಈಸೂರು ದಂಗೆ ಹೋರಿಗೆ ಬಹುಮಾನ ಕಟ್ಟಿಟ್ಟ ಬುತ್ತಿ. ಎಷ್ಟೇ ಜನರು ಅಡ್ಡಗಟ್ಟಿದರೂ, ಯಾರ ಕೈಗೂ ಸಿಗದೆ ತಪ್ಪಿಸಿಕೊಳ್ಳುತ್ತಿತ್ತು. ನೂರಾರು ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಹಿಸಿದ್ದರೂ, ಈತನಕ ಯಾರೊಬ್ಬರು ಈಸೂರು ದಂಗೆ ಹೋರಿಯನ್ನು ಹಿಡಿದು, ಕೊಬ್ಬರಿ ಹರಿಯಲು ಸಾದ್ಯವಾಗಿಲ್ಲ. ಈ ಹೋರಿಯು ಮಿಂಚಿನ ವೇಗದಲ್ಲಿ ಓಡುವ ಶಕ್ತಿ ಹೊಂದಿತ್ತು. 7 ಬೈಕ್, 15 ಫ್ರಿಡ್ಜ್ , 15 ಟಿವಿ, ಎತ್ತಿನಗಾಡಿ, ಬಂಗಾರದ ಬಳೆ, 10ಕ್ಕೂ ಹೆಚ್ಚು ಬಂಗಾರದ ಬಹುಮಾನಗಳು ಸೇರಿದಂತೆ ನೂರಾರು ಬಹುಮಾನಗಳನ್ನು ಈ ಹೋರಿ ಗಳಿಸಿದೆ.

ರಾಜ್ಯಾದ್ಯಂತ ಇದ್ದಾರೆ ಅಭಿಮಾನಿಗಳು
ಈಸೂರು ದಂಗೆ ಹೋರಿಗೆ ರಾಜ್ಯಾದ್ಯಂತ ಅಭಿಮಾನಿಗಳಿದ್ದಾರೆ. ಹೋರಿ ಬೆದರಿಸುವ ಸ್ಪರ್ಧೆಯ ಬಗ್ಗೆ ಆಸಕ್ತಿ ಹೊಂದಿರುವವರಿಗೆಲ್ಲ ಈ ಹೋರಿ ಪರಿಚಿತ. ಈ ಹೋರಿಗಾಗಿಯೇ ಸ್ಪರ್ಧೆಗೆ ಬರುವವರಿದ್ದರು. ಪ್ರತಿ ಸ್ಪರ್ಧೆಯಲ್ಲೂ ಈಸೂರು ದಂಗೆಯನ್ನು ಹಿಡಿದು ನಿಲ್ಲಿಸಬೇಕು ಎಂದು ಅಖಾಡಕ್ಕೆ ಇಳಿಯುವವರಿದ್ದರು.

ಟ್ಯಾಟೋ ಹಾಕಿಸಿಕೊಳ್ಳುತ್ತಿದ್ದರು
ಈಸೂರು ದಂಗೆ ಹೋರಿ ಅದೆಷ್ಟು ಫೇಮಸ್ ಅಂದರೆ, ಇದರೊಟ್ಟಿಗೆ ಫೋಟೋ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬೀಳುತ್ತಿದ್ದರು. ಹೋರಿ ಬೆದರಿಸುವ ಸ್ಪರ್ಧೆಗೆ ಮೊದಲು ಮತ್ತು ಆನಂತರ ಈಸೂರು ದಂಗೆ ಜೊತೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳಲು ನೂಕಾಟ, ತಳ್ಳಾಟವಾಗುತ್ತಿತ್ತು. ಇನ್ನು, ನೂರಾರು ಮಂದಿ ಈಸೂರು ದಂಗೆ ಹೋರಿಯ ಹಚ್ಚೆ ಅಥವಾ ಟ್ಯಾಟೋಗಳನ್ನು ಹಾಕಿಸಿಕೊಂಡು, ಅಭಿಮಾನ ಪ್ರದರ್ಶಿಸುತ್ತಿದ್ದರು.
ಇಷ್ಟೊಂದು ಖ್ಯಾತಿಯ ಪಡೆದಿದ್ದ ಈಸೂರು ದಂಗೆ ಹೋರಿ, ತನ್ನ ಮಿಂಚಿನ ಓಟ ನಿಲ್ಲಿಸಿದೆ. ಅದನ್ನು ಸಾಕಿದವರು, ಗ್ರಾಮಸ್ಥರು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಸಾವಿರಾರು ಮಂದಿ ಪೋಸ್ಟ್ ಪ್ರಕಟಿಸಿ, ಈಸೂರು ದಂಗೆಗೆ ಅಂತಿಮ ನಮನ ಸಲ್ಲಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications