ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪಘಾತದಲ್ಲಿ ವ್ಯಕ್ತಿ ಸಾವು; ಲೋಕ ಅದಾಲತ್‌ನಲ್ಲಿ 80 ಲಕ್ಷ ಪರಿಹಾರ

|
Google Oneindia Kannada News

ಶಿವಮೊಗ್ಗ, ಡಿಸೆಂಬರ್ 21: ಬಸ್ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡಿದ್ದ ಮಹಿಳೆಗೆ ಲೋಕ ಅದಾಲತ್‌ನಲ್ಲಿ 80 ಲಕ್ಷ ರೂ. ಪರಿಹಾರವನ್ನು ಕೊಡಿಸಲಾಗಿದೆ. ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಅತಿ ಹೆಚ್ಚು ಮೊತ್ತದ ಪರಿಹಾರ ಸಿಕ್ಕಿದ ವಿಶೇಷ ಪ್ರಕರಣ ಇದಾಗಿದೆ.

ಶಿವಮೊಗ್ಗ ಮೂಲದ ಸಹನಾ ತಮ್ಮ ಕುಟುಂಬದೊಂದಿಗೆ ಮೂಡಿಗೆರೆಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬಸ್ ಅಪಘಾತಕ್ಕೊಳಗಾಗಿ ತಮ್ಮ ಪತಿಯನ್ನು ಕಳೆದುಕೊಂಡಿದ್ದರು.

ಬೆಂಗಳೂರಿನ ರಸ್ತೆ ಗುಂಡಿಗೆ ಬಿದ್ದವರಿಗೆ 15,000 ರೂಪಾಯಿ ಪರಿಹಾರ! ಬೆಂಗಳೂರಿನ ರಸ್ತೆ ಗುಂಡಿಗೆ ಬಿದ್ದವರಿಗೆ 15,000 ರೂಪಾಯಿ ಪರಿಹಾರ!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣವನ್ನು ಲೋಕ ಅದಾಲತ್‌ನಲ್ಲಿ ದೂರುದಾರರು ಹಾಗೂ ವಿಮಾ ಕಂಪನಿಗಳ ಮುಖ್ಯಸ್ಥರನ್ನು ಕರೆದು ನ್ಯಾಯಾಧೀಶರು ವಿಚಾರಣೆ ನಡೆಸಿದರು. ವಿಮಾ ಕಂಪನಿಯು 80 ಲಕ್ಷ ರೂ. ಗಳ ಪರಿಹಾರ ಧನವನ್ನು ನೀಡಲು ನ್ಯಾಯಾಲ ಆದೇಶ ನೀಡಿತು.

ಮಂಗಳೂರು ಬೋಟ್ ದುರಂತ: ಮೃತರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ ಮಂಗಳೂರು ಬೋಟ್ ದುರಂತ: ಮೃತರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ

Bus Accident Women Get 80 Lakh In Lok Adalat

ಲೋಕ ಅದಾಲತ್‌ನಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. "ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಅತಿ ಹೆಚ್ಚು ಮೊತ್ತ ಘೋಷಿಸಿದ ರಾಜ್ಯದಲ್ಲಿಯೇ ವಿಶೇಷ ಪ್ರಕರಣ ಇದಾಗಿದೆ. ಪ್ರಕರಣದಲ್ಲಿ ದೂರು ದಾರರು ವಿಮಾ ಕಂಪನಿಯವರಿಂದ 1.20 ಕೋಟಿ ರೂ.ಗಳ ಪರಿಹಾರ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು" ಎಂದರು.

ಸುನಾಮಿಯಿಂದಾಗಿ ಆಶ್ರಯ ಪಡೆದಿದ್ದ ಪರಿಹಾರ ಕೇಂದ್ರಕ್ಕೆ ಮತ್ತೆ ಬಂದ ದಂಪತಿ ಸುನಾಮಿಯಿಂದಾಗಿ ಆಶ್ರಯ ಪಡೆದಿದ್ದ ಪರಿಹಾರ ಕೇಂದ್ರಕ್ಕೆ ಮತ್ತೆ ಬಂದ ದಂಪತಿ

ಲೋಕ ಅದಾಲತ್‌ನಲ್ಲಿ ಮೋಟಾರು ವಾಹನಗಳ ಒಟ್ಟು 1,800 ಪ್ರಕರಣಗಳಲ್ಲಿ 595 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಅವುಗಳಲ್ಲಿ ಸುಮಾರು 125ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಂಡಿವೆ.

ನ್ಯಾಯಾಲಯದ ವಿವಿಧ ಶಾಖೆಗಳಲ್ಲಿ ಇದುವರೆಗೂ ದಾಖಲಾಗಿರುವ ಮೊಕದ್ದಮೆಗಳಲ್ಲಿ ರಾಜೀಸಂಧಾನದ ಮೂಲಕ ಇತ್ಯರ್ಥಪಡಿಸಬಹುದಾದ ಪ್ರಕರಣಗಳನ್ನು ಗುರುತಿಸಿ ಅಂತಹವುಗಳನ್ನು ಲೋಕ ಅದಾಲತ್‍ನಲ್ಲಿ ಉಭಯ ಪಕ್ಷಗಳ ಕಕ್ಷಿದಾರರ ಅಪೇಕ್ಷೆಯಂತೆ ಇತ್ಯರ್ಥಪಡಿಸಲಾಗುತ್ತದೆ.

"ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಕರಣಗಳನ್ನು ಕೈಗೆತ್ತಿಕೊಂಡು ನ್ಯಾಯವಾದಿಗಳು ಹಾಗೂ ನ್ಯಾಯಾಧೀಶರ ಸಹಕಾರದೊಂದಿಗೆ ಇತ್ಯರ್ಥಪಡಿಸುವ ಆಶಯ ತಮಗಿರುವುದಾಗಿ" ನ್ಯಾಯಾಧೀಶ ಮುಸ್ತಫಾ ಹುಸೇನ್ ತಿಳಿಸಿದ್ದಾರೆ.

English summary
Shivamogga base women lost husband in bus accident. Case solved in the lok adalat and insurance company agreed to pay 80 lakh for victim family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X