ವೈಯಕ್ತಿಕ ಸೌಲಭ್ಯಗಳನ್ನು ತಲುಪಿಸಲು ಆದ್ಯತೆ ನೀಡಿ: ಬಿ.ವೈ.ರಾಘವೇಂದ್ರ

ಶಿವಮೊಗ್ಗ, ನವೆಂಬರ್ 12: ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸವಿ ಫಲಾನುಭವಿಗಳ ಆಯ್ಕೆ ಸೇರಿದಂತೆ ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ಮಾತನಾಡಿದ ಅವರು, "ಸ್ಥಳೀಯವಾಗಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅನುಷ್ಠಾನದಲ್ಲಿ ಸಮಸ್ಯೆಗಳು ಉಂಟಾದರೆ ತಕ್ಷಣ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು" ಎಂದರು.

ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಗ್ರಾಮೀಣ ವಿದ್ಯುದೀಕರಣ, ಫೀಡರ್ ಬೇರ್ಪಡಿಸುವಿಕೆ ಮತ್ತು ಹೊಸ ಮೀಟರ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಮೀಟರ್ ಅಳವಡಿಸಲು ಹಣಕ್ಕೆ ಬೇಡಿಕೆ ಇಡುವಂತಹ ದೂರುಗಳು ಬರಬಾರದು. ಯೋಜನೆ ಅನುಷ್ಠಾನ ಪರಿಶೀಲಿಸಲು ಸಮಿತಿಯ ಸದಸ್ಯರು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

Shivamogga: BY Raghavendra Instructed Officials To Adequately Implement Social Security Schemes

ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ನಿರ್ಮಿಸಿರುವ ರಸ್ತೆಗಳ ನಿರ್ವಹಣೆಯನ್ನು 5 ವರ್ಷಗಳ ಕಾಲ ಗುತ್ತಿಗೆದಾರರು ನಿರ್ವಹಿಸಬೇಕಾಗಿದೆ. ಮರು ಡಾಂಬರೀಕರಣ ಸೇರಿದಂತೆ ನಿರ್ವಹಣೆಯನ್ನು ಸಮರ್ಪಕವಾಗಿ ನಡೆಸುವಂತೆ ಸೂಚಿಸಬೇಕು ಎಂದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಭಾಗದಲ್ಲಿ 5085 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, 4624 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ 1612 ಮನೆಗಳಿಗೆ ಅನುಮೋದನೆ ದೊರೆತಿದ್ದು 658 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮನೆಗಳ ನಿರ್ಮಾಣಕ್ಕಾಗಿ 2.48 ಕೋಟಿ ರೂ. ಬಿಡುಗಡೆಯಾಗಿದೆ. ಮನೆಗಳ ನಿರ್ಮಾಣ ಕಾರ್ಯ ಸಮರ್ಪಕವಾಗಿ ಅನುಷ್ಠಾನಗೊಳ್ಳುವಂತೆ ಖಾತ್ರಿಪಡಿಸಬೇಕು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+