ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಬಿದ ಅಂಜನಾಪುರ ಜಲಾಶಯ; ಬಾಗಿನ ಅರ್ಪಿಸಿದ ಬಿ.ವೈ.ರಾಘವೇಂದ್ರ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 21: ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಜೀವಜಲ ಅಂಜನಾಪುರ ಜಲಾಶಯ ಭರ್ತಿಯಾಗಿದ್ದು, ಇಂದು ಸಂಸದ ಬಿ.ವೈ. ರಾಘವೇಂದ್ರ ಅವರು ಕುಟುಂಬ ಸಮೇತ ಜಲಾಶಯದ ಗಂಗೆಗೆ ವಿಷೇಶ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಈ ಸಂದರ್ಭ ಮಾತನಾಡಿದ ಅವರು, "ಅಂಜನಾಪುರ ಜಲಾಶಯ ನಮ್ಮ ತಾಲೂಕಿನ ರೈತರ ಪಾಲಿನ ಜೀವನಾಡಿ. ಸಾಧಾರಣ ಮಳೆಯಿಂದಲೇ ಈ ಜಲಾಶಯ ಭರ್ತಿಯಾಗಿದ್ದು, ಸಾಂಕೇತಿಕವಾಗಿ ಸರಳ ರೀತಿಯಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೇವೆ. ಪ್ರತಿವರ್ಷ ಅಂಜನಾಪುರ ಜಲಾಶಯ ಭರ್ತಿಯಾದಾಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಗಮಿಸಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸುತ್ತಿದ್ದರು. ಈ ವರ್ಷ ಕೊರೊನಾ ಸಂಕಷ್ಟ ಇರುವುದರಿಂದ ಸಾಧ್ಯವಾಗಿಲ್ಲ" ಎಂದು ತಿಳಿಸಿದರು.

ಶಿವಮೊಗ್ಗ ನಗರದ ವಿವಿಧ ವಾರ್ಡ್‌ಗಳು ಸಂಪೂರ್ಣ ಲಾಕ್ ಡೌನ್ಶಿವಮೊಗ್ಗ ನಗರದ ವಿವಿಧ ವಾರ್ಡ್‌ಗಳು ಸಂಪೂರ್ಣ ಲಾಕ್ ಡೌನ್

ತಾಲೂಕಿನಲ್ಲಿ ನೀರಾವರಿ ಯೋಜನೆ‌ ಕಾರ್ಯಗಳು ಆರಂಭವಾಗಿವೆ. ಶಾಶ್ವತ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಈ ವೇಳೆ ಅಂಜನಾಪುರ ಜಲಾಶಯದ ಮೇಲ್ದಂಡೆ ಮೇಲೆ ನಿರ್ಮಿಸಿರುವ ಉದ್ಯಾನವನ್ನು ವೀಕ್ಷಿಸಿದರು ಹಾಗೂ ಕಾರ್ಯಕರ್ತರೊಂದಿಗೆ ಪಾರ್ಕ್ ನಲ್ಲಿ ಸ್ವಲ್ಪ ಕಾಲ ವಿಶ್ರಾಂತಿಸಿದರು.

BY Raghavendra Offer Bagina For Shivamogga Anjanapura Reservoir

ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ರೇವಣ್ಣಪ್ಪ, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಅಧಿಕಾರಿಗಳು ಭಾಗಿಯಾಗಿದ್ದರು.

English summary
Anjanapura reservoir in shikaripura of shivamogga filled by rain. MP B.Y. Raghavendra offered a special puja with the family to the reservoir,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X