ಕೊಲ್ಲೂರು-ಕೊಡಚಾದ್ರಿ ನಡುವೆ ಕೇಬಲ್ ಕಾರ್ ಸಂಪರ್ಕ..!
ಶಿವಮೊಗ್ಗ, ಜನವರಿ 21: ಮಲೆನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿಶ್ವವಿಖ್ಯಾತ ಕೊಡಚಾದ್ರಿ ಬೆಟ್ಟದಿಂದ ಸುಕ್ಷೇತ್ರ ಕೊಲ್ಲೂರಿಗೆ ಕೇಬಲ್ ಕಾರು ಸಂಪರ್ಕ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಇತ್ತಿಚೀಗೆ ನಡೆದ ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಕೈಗೊಳ್ಳಬಹುದಾದ ಯೋಜನೆಗಳು ಹಾಗೂ ಸಾಧ್ಯತೆ, ಸವಾಲುಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಮಾಲೋಚನೆ ಸಭೆಯಲ್ಲಿ ಸಂಸದ ರಾಘವೇಂದ್ರ ಕೇಬಲ್ ಕಾರ್ ಕುರಿತು ಮಾತನಾಡಿದರು.
ಕೊಲ್ಲೂರು ಮತ್ತು ಕೊಡಚಾದ್ರಿ ನಡುವೆ ರಸ್ತೆ ಮಾರ್ಗ 32 ಕಿ.ಮೀ ದೂರದ ಅಂತರವಿದ್ದು, 11ಕಿ.ಮೀ ಕೇಬಲ್ ಕಾರ್ ಸಂಪರ್ಕ ಅಳವಡಿಸುವುದರಿಂದ ಪ್ರಯಾಣದ ಅಂತರ ಕಡಿಮೆಯಾಗಲಿದೆ ಜತೆಗೆ ಸಮಯದ ಉಳಿತಾಯವಾಗಲಿದೆ ಎಂದು ತಿಳಿಸಿದರು.

ಮಲೆನಾಡಿನ ಪ್ರಾಕೃತಿಕ ಸೌಂದರ್ಯಕ್ಕೆ ಯಾವುದೇ ತೊಂದರೆ ಆಗದಂತೆ ಹಾಗೂ ಇರುವ ಪ್ರಕೃತಿ ಸೌಂದರ್ಯ ಉಳಿಸಿಕೊಂಡು ಅಭಿವೃದ್ಧಿ ಪಡಿಸಬಹುದಾದ ವಿಧಾನಗಳ ಕುರಿತು ಸಮೀಕ್ಷೆ ಮಾಡಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಅದನ್ನು ಪರಿಶೀಲಿಸಿ ಪರಿಸರ ಅರಣ್ಯ ಇಲಾಖೆಗಳಿಂದ ನಿರಾಪೇಕ್ಷಣ ಪತ್ರ ಪಡೆಯಲು ಹಾಗೂ ಕೇಂದ್ರ ಸರಕಾರದಿಂದ ಅನುಮತಿ ಕೊಡಿಸುವ ಬಗ್ಗೆ ಆಲೋಚಿಸಲಾಗುವುದು ಎಂದರು.

ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ಸರಕಾರವು 20 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಿದೆ. ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ ಇದೇ ಮಾದರಿಯಲ್ಲಿ ಜೋಗ ಅಭಿವೃದ್ಧಿಗೂ ಗಮನಹರಿಸುವ ಅಗತ್ಯತೆಗಳ ಬಗ್ಗೆ ಕ್ರಮ ವಹಿಸುವುದಾಗಿ ಬಿ.ವೈ. ತಿಳಿಸಿದರು.

ಇದೇ ಮಾದರಿಯಲ್ಲಿ ಮೈಸೂರು ಚಾಮುಂಡಿ ಬೆಟ್ಟಕ್ಕೆ ರೂಪ್ ವೇ ನಿರ್ಮಿಸಲು ಸಮ್ಮತಿ ಸೂಚಿಸಲಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಅನೇಕ ಪ್ರವಾಸಿ ತಾಣಗಳು ಇವೆ. ಅವುಗಳಿಗೆ ಪ್ರವಾಸಿಗರನ್ನು ಸೆಳೆಯಲು ಚಿಂತನೆ ನಡೆಸಲಾಗಿದೆ. ಆದರೆ ಪ್ರಾಕೃತಿಕ ಸೌಂದರ್ಯ ಹಾಳು ಮಾಡದಂತೆ ಮಾಡಲಿ ಎಂಬುದು ಪರಿಸರ ಪ್ರೇಮಿಗಳ ಆಶಯ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications