ಕೊಲ್ಲೂರು-ಕೊಡಚಾದ್ರಿ ನಡುವೆ ಕೇಬಲ್ ಕಾರ್ ಸಂಪರ್ಕ..!
ಶಿವಮೊಗ್ಗ, ಜನವರಿ 21: ಮಲೆನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿಶ್ವವಿಖ್ಯಾತ ಕೊಡಚಾದ್ರಿ ಬೆಟ್ಟದಿಂದ ಸುಕ್ಷೇತ್ರ ಕೊಲ್ಲೂರಿಗೆ ಕೇಬಲ್ ಕಾರು ಸಂಪರ್ಕ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಇತ್ತಿಚೀಗೆ ನಡೆದ ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಕೈಗೊಳ್ಳಬಹುದಾದ ಯೋಜನೆಗಳು ಹಾಗೂ ಸಾಧ್ಯತೆ, ಸವಾಲುಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಮಾಲೋಚನೆ ಸಭೆಯಲ್ಲಿ ಸಂಸದ ರಾಘವೇಂದ್ರ ಕೇಬಲ್ ಕಾರ್ ಕುರಿತು ಮಾತನಾಡಿದರು.
ಕೊಲ್ಲೂರು ಮತ್ತು ಕೊಡಚಾದ್ರಿ ನಡುವೆ ರಸ್ತೆ ಮಾರ್ಗ 32 ಕಿ.ಮೀ ದೂರದ ಅಂತರವಿದ್ದು, 11ಕಿ.ಮೀ ಕೇಬಲ್ ಕಾರ್ ಸಂಪರ್ಕ ಅಳವಡಿಸುವುದರಿಂದ ಪ್ರಯಾಣದ ಅಂತರ ಕಡಿಮೆಯಾಗಲಿದೆ ಜತೆಗೆ ಸಮಯದ ಉಳಿತಾಯವಾಗಲಿದೆ ಎಂದು ತಿಳಿಸಿದರು.

ಮಲೆನಾಡಿನ ಪ್ರಾಕೃತಿಕ ಸೌಂದರ್ಯಕ್ಕೆ ಯಾವುದೇ ತೊಂದರೆ ಆಗದಂತೆ ಹಾಗೂ ಇರುವ ಪ್ರಕೃತಿ ಸೌಂದರ್ಯ ಉಳಿಸಿಕೊಂಡು ಅಭಿವೃದ್ಧಿ ಪಡಿಸಬಹುದಾದ ವಿಧಾನಗಳ ಕುರಿತು ಸಮೀಕ್ಷೆ ಮಾಡಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಅದನ್ನು ಪರಿಶೀಲಿಸಿ ಪರಿಸರ ಅರಣ್ಯ ಇಲಾಖೆಗಳಿಂದ ನಿರಾಪೇಕ್ಷಣ ಪತ್ರ ಪಡೆಯಲು ಹಾಗೂ ಕೇಂದ್ರ ಸರಕಾರದಿಂದ ಅನುಮತಿ ಕೊಡಿಸುವ ಬಗ್ಗೆ ಆಲೋಚಿಸಲಾಗುವುದು ಎಂದರು.

ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ಸರಕಾರವು 20 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಿದೆ. ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ ಇದೇ ಮಾದರಿಯಲ್ಲಿ ಜೋಗ ಅಭಿವೃದ್ಧಿಗೂ ಗಮನಹರಿಸುವ ಅಗತ್ಯತೆಗಳ ಬಗ್ಗೆ ಕ್ರಮ ವಹಿಸುವುದಾಗಿ ಬಿ.ವೈ. ತಿಳಿಸಿದರು.

ಇದೇ ಮಾದರಿಯಲ್ಲಿ ಮೈಸೂರು ಚಾಮುಂಡಿ ಬೆಟ್ಟಕ್ಕೆ ರೂಪ್ ವೇ ನಿರ್ಮಿಸಲು ಸಮ್ಮತಿ ಸೂಚಿಸಲಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಅನೇಕ ಪ್ರವಾಸಿ ತಾಣಗಳು ಇವೆ. ಅವುಗಳಿಗೆ ಪ್ರವಾಸಿಗರನ್ನು ಸೆಳೆಯಲು ಚಿಂತನೆ ನಡೆಸಲಾಗಿದೆ. ಆದರೆ ಪ್ರಾಕೃತಿಕ ಸೌಂದರ್ಯ ಹಾಳು ಮಾಡದಂತೆ ಮಾಡಲಿ ಎಂಬುದು ಪರಿಸರ ಪ್ರೇಮಿಗಳ ಆಶಯ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications