ಬಿಜೆಪಿ ಗೆಲುವಿಗೆ ಸಿಎಂ ತವರು ಜಿಲ್ಲೆಯಲ್ಲಿ ಸಂಭ್ರಮಾಚರಣೆ
ಶಿವಮೊಗ್ಗ, ಡಿಸೆಂಬರ್ 9: ಬಿಜೆಪಿ ಗೆಲುವಿಗೆ ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ವಿನೋಬಾ ನಗರದಲ್ಲಿನ ಸಿಎಂ ನಿವಾಸದ ಮುಂದೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ಸಿಎಂ ಸ್ವಕ್ಷೇತ್ರ ಶಿಕಾರಿಪುರದಲ್ಲೂ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸ ಮಾಳೇರಕೇರಿಯಲ್ಲಿ ಪಟಾಕಿ ಸಿಡಿಸಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಜೈಕಾರ ಹಾಕುತ್ತ ಬಸ್ ನಿಲ್ದಾಣ ಸುತ್ತ ಮೆರವಣಿಗೆ ನಡೆಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.
ಕೆಆರ್ ಪೇಟೆ: ಕಳೆದ ಬಾರಿ ಠೇವಣಿ ಕಳೆದುಕೊಂಡಿದ್ದ ಬಿಜೆಪಿ ಕೊಟ್ಟ ಶಾಕ್
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಸಂಭ್ರಮಾಚರಣೆಯಲ್ಲಿ ಶಾಸಕರಾದ ಮಂಜುನಾಥ್, ಎಸ್.ರುದ್ರೇಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್ ಭಾಗಿಯಾಗಿದ್ದರು.
Comments
English summary
BJP Activists celebrated BJP's victory infront of CM's home in shivamogga district,
Story first published: Monday, December 9, 2019, 13:54 [IST]