Breaking; ಶಿವಮೊಗ್ಗದ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ ಕೊಟ್ಟ ಡಿಸಿ
ಶಿವಮೊಗ್ಗ, ಡಿಸೆಂಬರ್ 13; ಶಿವಮೊಗ್ಗದ ರೈಲು ಪ್ರಯಾಣಿಕರಿಗೆ ಜಿಲ್ಲಾಧಿಕಾರಿಗಳು ಸಿಹಿಸುದ್ದಿ ನೀಡಿದ್ದಾರೆ. ಹಲವು ವರ್ಷಗಳ ಬೇಡಿಕೆಗೆ ಅವರು ಒಪ್ಪಿಗೆ ನೀಡಿದ್ದು, ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ ನಗರದ ವಿವಿಧ ಪ್ರದೇಶಗಳಿಗೆ ನಗರ ಸಾರಿಗೆ ಬಸ್ ಸೇವೆ ಆರಂಭಿಸಲು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಒಪ್ಪಿಗೆ ನೀಡಿದ್ದಾರೆ. ರೈಲು ನಿಲ್ದಾಣದಿಂದ ನಗರದೊಳಗೆ ಹೋಗಲು ಆಟೋ, ಖಾಸಗಿ ವಾಹನಗಳನ್ನು ಬಳಸುವುದು ತಪ್ಪಲಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ರೈಲ್ವೆ ನಿಲ್ದಾಣದಿಂದ ನಗರದ ವಿವಿಧ ಪ್ರದೇಶಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ನಗರ ಸಾರಿಗೆ ಬಸ್ ನಿಯೋಜನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ರೈಲು ನಿಲ್ದಾಣದಿಂದ ನಗರಕ್ಕೆ ನಗರ ಸಾರಿಗೆ ಬಸ್ ಸೌಲಭ್ಯ ಆರಂಭಿಸುವಂತೆ ವಿವಿಧ ಸಂಘಟನೆಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದವು. ಈ ಬೇಡಿಕೆಗೆ ಈಗ ಜಿಲ್ಲಾಡಳಿತ ಒಪ್ಪಿಗೆ ಕೊಟ್ಟಿದೆ.ಶಿವಮೊಗ್ಗ ನಗರಕ್ಕೆ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ನಗರಗಳಿಂದ ರೈಲು ಸಂಪರ್ಕವಿದೆ. ನಗರಕ್ಕೆ ರೈಲುಗಳು ಬರುವ, ಹೊರಡುವ ಸಮಯಕ್ಕೆ ಸರಿಯಾಗಿ ನಗರ ಸಾರಿಗೆ ಬಸ್ ಓಡಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿದ್ದವು.
ಜೆನರ್ಮ್ ಯೋಜನೆಯಡಿ ಶಿವಮೊಗ್ಗ-ಭದ್ರಾವತಿ ನಗರಗಳಿಗೆ 100 ಬಸ್ ಬಸ್ಗಳು ಮಂಜೂರಾಗಿವೆ. ಅವಳಿ ನಗರಗಳ ನಡುವೆ ನಗರ ಸಾರಿಗೆ ಬಸ್ಗಳು ಸಂಚಾರ ನಡೆಸುತ್ತಿವೆ. 36 ಬಸ್ಗಳು ನಗರದೊಳಗೆ ಸಂಚಾರ ನಡೆಸಬೇಕು ಎಂಬ ನಿಯಮವಿದೆ. ಇದರ ಅನ್ವಯ ರೈಲು ನಿಲ್ದಾಣಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿತ್ತು.
ಶಿವಮೊಗ್ಗ ರೈಲು ನಿಲ್ದಾಣದಿಂದ ನಗರಕ್ಕೆ ಸಾಗಲು ಆಟೋಗಳನ್ನು ಬಳಸಬೇಕು. ಆದರೆ ಅವರು ದುಬಾರಿ ಹಣ ವಸೂಲು ಮಾಡುತ್ತಾರೆ ಎಂಬುದು ಆರೋಪವಾಗಿದೆ. ಈಗ ನಗರ ಸಾರಿಗೆ ಬಸ್ಗಳು ಆರಂಭವಾದರೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲಿದೆ.
-
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?











Click it and Unblock the Notifications