ಕಿಮ್ಮನೆ ರತ್ನಾಕರ್ ಅವರಿಗೆ ಪಕ್ಷದಲ್ಲಿ ಉಜ್ವಲ ಭವಿಷ್ಯವಿದೆ: ಸಿಎಂ
ಶಿವಮೊಗ್ಗ, ಜನವರಿ 06: ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್ ಅವರನ್ನು ಹಾಡಿ ಹೊಗಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಮ್ಮನೆ ರತ್ನಾಕರ್ ಅವರಂತಹಾ ಸಜ್ಜನ ರಾಜಕಾರಣಿ ರಾಜ್ಯದಲ್ಲಿ ಬಹಳ ಕಡಿಮೆ ಎಂದರು.
ಶಿವಮೊಗ್ಗದ ತೀರ್ಥಹಳ್ಳಿ ಕ್ಷೇತ್ರದಲ್ಲಿ 200 ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಮಾಡಿದ ಅವರು ಸಮಾವೇಶ ಉದ್ದೇಶಿಸಿ ಮಾತನಾಡಿದರು.
ಕಿಮ್ಮನೆ ರತ್ನಾಕರ್ ಅವರನ್ನು ಅನಿವಾರ್ಯವಾಗಿ ಮಂತ್ರಿ ಮಂಡಲದಿಂದ ಕೈಬಿಡಬೇಕಾಯಿತು, ಆದರೆ ಅವರಿಗೆ ಮುಂದೆ ಇನ್ನೂ ಉತ್ತಮ ಭವಿಷ್ಯ ಇದೆ ಎಂದ ಸಿದ್ದರಾಮಯ್ಯ ಅವರು ಮುಂದಿನ ಕಾಂಗ್ರೆಸ್ ಮತ್ತೆ ಬಾರಿ ಅಧಿಕಾರಕ್ಕೆ ಬಂದರೆ ರತ್ನಾಕರ್ ಅವರಿಗೆ ಮಂತ್ರಿಗಿರಿ ಕೊಡಲಾಗುವುದು ಎಂಬುದನ್ನು ಸೂಚ್ಯವಾಗಿ ತಿಳಿಸಿದರು.
ರತ್ನಾಕರ್ ಅವರಂತಹಾ ಸಜ್ಜನ ರಾಜಕಾರಣಿಯನ್ನು ನಾನು ನೋಡಿಲ್ಲ ಎಂದ ಅವರು, ಮಂತ್ರಿ ಮಂಡಲದಿಂದ ಕೈಬಿಟ್ಟಾಗಲೂ ಅವರು ಅದನ್ನೂ ಸಂತೋಷದಿಂದಲೇ ಸ್ವೀಕರಿಸಿದರು, ನನ್ನೊಂದಿಗೆ ವಾಗ್ವಾದ ಸಹ ಮಾಡಲಿಲ್ಲ ಎಂದು ನೆನೆಸಿಕೊಂಡರು.

ಕೇಂದ್ರಕ್ಕೆ ಶಿಫಾರಸು
ರಾಜ್ಯದಲ್ಲಿ ಶಾಂತಿ ಕದಡಲು ಮುಂದಾಗುವ ಸಂಘಟನೆಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದರ ಜೊತೆಗೆ ಅಂತಹ ಸಂಘಟನೆಗಳನ್ನು ನಿಷೇಧ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರಾವಳಿ ಪ್ರದೇಶದಲ್ಲಿ ಬಿಜೆಪಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಆದುದರಿಂದ ಶಾಂತಿ ಕದಡುವ ಸಂಘಟನೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಆದರೆ ಸಂಘಟನೆಗಳ ಹೆಸರು ಹೇಳುವ ಗೋಜಿಗೆ ಅವರು ಹೋಗಲಿಲ್ಲ.

ಆರ್ಎಸ್ಎಸ್ ಐಡಿಯಾಲಜಿಗೆ ಸ್ಥಾನ ಇಲ್ಲ
ಗೌರಿಹಂತಕರ ಸುಳಿವು ಸಿಕ್ಕಿದೆ ಎಂದ ಮುಖ್ಯಮಂತ್ರಿಗಳು ಪೂರ್ಣ ಸಾಕ್ಷಿಗಳು ದೊರೆತ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಪಕ್ಷಕ್ಕೆ ಬರಲು ಹಲವು ಶಾಸಕರು ತಯಾರಿದ್ದಾರೆ ಎಂದ ಅವರು ಕಾಂಗ್ರೆಸ್ ಪಕ್ಷಕ್ಕೆ ಬರಲು ಅನ್ಯ ಪಕ್ಷಗಳ ಹಲವು ಶಾಸಕರು ಸಿದ್ಧರಿದ್ದಾರೆ. ಆದರೆ ಆರ್.ಎಸ್.ಎಸ್. ಐಡಿಯಾಲಜಿ ಹಿನ್ನೆಲೆ ಇರುವವರನ್ನು ಸೇರಿಸಿಕೊಳ್ಳುವುದಿಲ್ಲ ಎಂದರು.

ನಮ್ಮ ಸರ್ಕಾರವೇ ಹೆಚ್ಚು ಹಣ ಕೊಟ್ಟಿದ್ದೇವೆ
ಈ ಬಾರಿ ತೀರ್ಥಹಳ್ಳಿಗೆ ಅನುದಾನ ವಿತರಣೆ ಕಡಿಮೆ ಆಗಿದೆ ಎಂದು ಒಪ್ಪಿಕೊಂಡ ಸಿದ್ದರಾಮಯ್ಯ ಅವರು ತೀರ್ಥಹಳ್ಳಿಯ ರಸ್ತೆ ಅಭಿವೃದ್ಧಿಗೆ ಸರ್ಕಾರ ಹಣ ನೀಡಲಿದೆ ಎಂದು ಹೇಳಿದರು. ಎಲ್ಲಾ ಕ್ಷೇತ್ರಗಳಿಗೂ ನಮ್ಮ ಸರ್ಕಾರ ಕೊಟ್ಟಷ್ಟು ಹಣವನ್ನು ಈವರೆಗೆ ಯಾವ ಸರ್ಕಾರವೂ ನೀಡರಲಿಲ್ಲ ಎಂದು ಅವರು ಹೇಳಿದರು.

ಸರ್ವ ಭಾಗಕ್ಕೂ ಅನ್ವಯವಾಗುವ ಪ್ರಣಾಳಿಕೆ
ರಾಜ್ಯದ ಎಲ್ಲಾ ಭಾಗಕ್ಕೂ ಲಾಭವಾಗುವಂತಹಾ ಪ್ರಣಾಳಿಕೆಯನ್ನು ಈ ಬಾರಿ ಸಿದ್ಧಮಾಡಲಾಗುವುದು ಮತ್ತು ಸರ್ಕಾರದಿಂದ ‘ವಿಷನ್-2025' ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ. ಇವೆರಡನ್ನು ಆಧರಿಸಿ ಹೊಸ ಕಾರ್ಯಕ್ರಮ, ಯೋಜನೆ ರೂಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಹೇಳಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications