ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ.8 ರಂದು ಶಿವಮೊಗ್ಗಕ್ಕೆ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಆಗಮನ

|
Google Oneindia Kannada News

ಶಿವಮೊಗ್ಗ, ನವೆಂಬರ್ 6: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರು ನ.8 ರಂದು ಒಂದೇ ದಿನ ಇಬ್ಬರೂ ಪ್ರತ್ಯೇಕವಾಗಿ ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ.

ನ.8 ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 9.50ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11ಕ್ಕೆ ಶಿವಮೊಗ್ಗ ಸರ್ಕ್ಯೂಟ್ ಹೌಸ್ ನಲ್ಲಿ ಖಾಸಗಿ ಸುದ್ದಿ ವಾಹಿನಿ ಹಾಗೂ ರೋಟರಿ ಸಂಸ್ಥೆಯ ವತಿಯಿಂದ ಆಯೋಜಿಸಿರುವ ಜ್ಞಾನದೀವಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.

ಶಿವಮೊಗ್ಗ: ನಿವೇಶನ ಅರ್ಜಿ ಸಲ್ಲಿಸಿದವರು ಡಿ.31 ರೊಳಗೆ ವಂತಿಕೆ ಹಣ ಪಾವತಿಸಬೇಕುಶಿವಮೊಗ್ಗ: ನಿವೇಶನ ಅರ್ಜಿ ಸಲ್ಲಿಸಿದವರು ಡಿ.31 ರೊಳಗೆ ವಂತಿಕೆ ಹಣ ಪಾವತಿಸಬೇಕು

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಶಾಲಾ ಮಕ್ಕಳಿಗೆ ಟ್ಯಾಬ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಹಾಗೂ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.

CM Yediyurappa And Siddaramaiah To Arrive In Shivamogga on November 8th

ಮಧ್ಯಾಹ್ನ 3ಕ್ಕೆ ಸರ್ಕ್ಯೂಟ್ ಹೌಸ್ ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾನುವಾರ (ನ.8) ದಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಾ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಮಧ್ಯಾಹ್ನ ೧೨ ಗಂಟೆಗೆ ಶಿವಮೊಗ್ಗದ ಸರ್ಕ್ಯೂಟ್ ಹೌಸ್ (ಐಬಿ)ಯಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಾರೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಕಟಣೆ ಹೊರಡಿಸಿದೆ.

English summary
Chief Minister BS Yeddyurappa and former CM Siddaramaiah will be touring Shivamogga on the same day on November 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X