105 ಕೋಟಿ ರೂ.ಗಳ ಮೂಗೂರು ಯೋಜನೆಗೆ ಸೊರಬದಲ್ಲಿ ಸಿಎಂ ಯಡಿಯೂರಪ್ಪ ಚಾಲನೆ
ಶಿವಮೊಗ್ಗ, ಮಾರ್ಚ್ 1: 105 ಕೋಟಿ ರೂ.ಗಳ ಮೂಗೂರು ಏತ ನೀರಾವರಿ ಯೋಜನೆಯಿಂದ ಸೊರಬ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಕುಡಿಯುವ ನೀರು, ಅಂತರ್ಜಲ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೊರಬ ತಾಲೂಕು ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಸಿಎಂ ಯಡಿಯೂರಪ್ಪ ಮಾತನಾಡಿದರು.
ಮೂಗೂರು ಏತ ನೀರಾವರಿ ಯೋಜನೆಯಿಂದ 31 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಇದರಿಂದ ಸೊರಬ ತಾಲೂಕಿನ ಬಹುಭಾಗಕ್ಕೆ ಕುಡಿಯುವ ನೀರು ಲಭಿಸಲಿದೆ ಎಂದರು.

ಸೊರಬ ತಾಲೂಕಿನಲ್ಲಿ ಹಲವು ಯೋಜನೆಗಳ ಜಾರಿಗೊಳಿಸಲಾಗುತ್ತಿದೆ. 9 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಭಾಗದ 15 ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳವಿ ಗ್ರಾಮದಲ್ಲಿ ನೂತನ ರೈತ ಸಂಪರ್ಕ ಕೇಂದ್ರ, ಗುಡವಿ ಗ್ರಾಮದಲ್ಲಿ ಆಯುರ್ವೇದ ಆಸ್ಪತ್ರೆ, ಭಾರಂಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ಲೋಕಾರ್ಪಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
71 ಗ್ರಾಮಗಳಲ್ಲಿ 13.40 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸುಮಾರು 54 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ, ವೇ ಬ್ರಿಡ್ಜ್, ಶಾಲಾ ಕೊಠಡಿ, ವಿದ್ಯುತ್ ಉಪಕೇಂದ್ರ ಸೇರಿದಂತೆ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

ಈ ಬಾರಿಯ ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಜೆಟ್ ನಲ್ಲಿ ಮಹಿಳೆಯರ ಅಭ್ಯುದಯಕ್ಕೂ ಹೆಚ್ಚಿನ ಒತ್ತು ನೀಡಲಾಗುವುದು. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಒತ್ತು ನೀಡಲಾಗುತ್ತದೆ. ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಿ ಅಭಿವೃದ್ಧಿ ಪಥದತ್ತ ದೃಢ ಹೆಜ್ಜೆ ಇಡಲಾಗುತ್ತಿದೆ ಎಂದರು.
ಲೋಕಸಭಾ ಸದಸ್ಯ ಬಿ.ವೈರಾಘವೇಂದ್ರ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶಾಸಕ ಕುಮಾರ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications