ಮಹಾದಾಯಿ ವಿಚಾರವಾಗಿ ಗೋವಾ ಸಿಎಂ ಜೊತೆ ಮಾತಾಡುತ್ತೇನೆ: ಸಿಎಂ ಬಿಎಸ್ವೈ
ಶಿವಮೊಗ್ಗ, ನವೆಮಬರ್ 29: ಮಹಾದಾಯಿ ನದಿ ನೀರು ಹರಿವಿನ ಕುರಿತು ಗೋವಾ ಮುಖ್ಯಮಂತ್ರಿ ಜೊತೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಭಾನುವಾರದಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಹದಾಯಿ ನದಿ ನೀರಿನ ಕುರಿತು ಗೋವಾ ಕ್ಯಾತೆ ತೆಗೆದಿದ್ದು, ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ನೀಡಬಾರದು ಎಂದು ಗೋವಾ ಸಿಎಂ ಹೇಳಿದ್ದಾರೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಗೋವಾ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆಯಿಸಿ ಮಾತನಾಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಮಾತನಾಡುತ್ತಾ ಹೇಳಿದರು. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆಯನ್ನು ಸದ್ಯದಲ್ಲಿಯೇ ಮಾಡುವುದಾಗಿ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ಹಂತದ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಇದಕ್ಕೂ ಮುನ್ನ ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯುವ ವಿಶ್ವಾಸವಿದೆ ಎಂದಿದ್ದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಗೊಂದದವಿಲ್ಲದೆ, ಬೇಗ ಕ್ಲೀಯರ್ ಮಾಡಲು ಹೇಳುತ್ತೇನೆ ಎಂದ ಅವರು, ಚಿತ್ರದುರ್ಗದ ಸ್ಥಳೀಯ ಶಾಸಕರಾದ ಶಾಸಕಿ. ಕೆ.ಪೂರ್ಣಿಮಾ ಶ್ರೀನಿವಾಸ್, ಜಿ.ಎಚ್ ತಿಪ್ಪಾರೆಡ್ಡಿಗೆ ಮಂತ್ರಿಸ್ಥಾನ ನೀಡುವ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೆಹಲಿ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದು ಜಾರಿಕೊಂಡರು.

ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಆವರಣದಲ್ಲಿ ಮುರುಘಾ ಮ್ಯೂಸಿಯಂ ಘಟಕವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ್, ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಟಿ. ರಘುಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications