Shivamogga: ಶಿವಮೊಗ್ಗದಲ್ಲಿ ಕೆಲ ಮುಸ್ಲಿಮರಿಂದ ಕೋಮು ಸೌಹಾರ್ದತೆಗೆ ಧಕ್ಕೆ: ಕೆಎಸ್ ಈಶ್ವರಪ್ಪ

ಕೆಎಸ್ ಈಶ್ವರಪ್ಪ ಅವರು ಮಂಗಳೂರಿನಲ್ಲಿ ಅಜಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಮಾರ್ಚ್ 17ರಂದು ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಜಾನ್ ಪಠಿಸಿದ್ದರು.

ಶಿವಮೊಗ್ಗ, ಮಾರ್ಚ್‌ 20: ಶಿವಮೊಗ್ಗ ನಗರದಲ್ಲಿ ಕೆಲ ಮುಸ್ಲಿಮರು ಕೋಮು ಸೌಹಾರ್ದತೆಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ ಎಂದು ಶಾಸಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸೋಮವಾರ ಹೇಳಿದ್ದಾರೆ.

ಕೆಎಸ್ ಈಶ್ವರಪ್ಪ ಅವರು ಮಂಗಳೂರಿನಲ್ಲಿ ಅಜಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಮಾರ್ಚ್ 17ರಂದು ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಜಾನ್ ಪಠಿಸಿದ್ದರು. ಆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವರು ಅವರ ಕೃತ್ಯವನ್ನು ದೇಶದ್ರೋಹ ಎಂದು ಕರೆದಿದ್ದರು.

Communal harmony threatened by some Muslims in shivamogga: KS Eshwarappa

ವಿಧಾನಸೌಧದಲ್ಲಿಯೂ ಮಾಡುವುದಾಗಿ ಆ ವ್ಯಕ್ತಿ ಹೇಳಿಕೊಂಡಿದ್ದಾನೆ. ಅವರ ಹೇಳಿಕೆಯನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರ ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಸಂದರ್ಭದಲ್ಲೂ ಅಲ್ಲಾನನ್ನು ಅವಮಾನಿಸಿಲ್ಲ. ಅವರು ಯಾವಾಗ ಬೇಕಾದರೂ ಅಜಾನ್ ಪಠಿಸಿದರೆ ಅಲ್ಲಾಹನು ಸಂತೋಷಪಡುತ್ತಾನೆಯೇ ಎಂದು ನಾನು ತಿಳಿಯಲು ಬಯಸುತ್ತೇನೆ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.

ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಅವರು ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇವಲ ಎಚ್ಚರಿಕೆ ನೀಡಿ ಅವರನ್ನು ಮನೆಗೆ ಕಳುಹಿಸುವುದು ಹೇಗೆ? ನಮಗೆ ಪೊಲೀಸರು ಏಕೆ ಬೇಕು?" ಎಂದು ಪ್ರಶ್ನಿಸಿದ ಅವರು, ಆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಒತ್ತಾಯಿಸುವುದಾಗಿ ಹೇಳಿದರು.

Communal harmony threatened by some Muslims in shivamogga: KS Eshwarappa

ಡಿಸಿ ಕಚೇರಿ ಮುಂದೆ ಆಜಾನ್ ಕೂಗಿರುವುದು ಅಕ್ಷಮ್ಯ ಅಪರಾಧ. ಕೇವಲ ಸಿಆರ್‌ಪಿಸಿ 107 ಸೆಕ್ಷನ್ ಹಾಕಿ ಅವನನ್ನು ಬಿಡಬಾರದು. ಆತನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ವಿಧಾನಸೌಧದಲ್ಲಿ ಅಜಾನ್‌ ಕೂಗುತ್ತೇನೆ ಎಂದಿದ್ದು ಕೂಡ ರಾಷ್ಟ್ರದ್ರೋಹ. ಆತ ಪಿ.ಎಫ್.ಐ. ನಲ್ಲಾದರೂ ಇರಲಿ, ಎಸ್.ಡಿ.ಪಿ.ಐ. ಮತ್ತೊಂದು ಸಂಘಟನೆಯಲ್ಲಾದರಲ್ಲೂ ಇರಲಿ. ಪೊಲೀಸರು ಈ ಬಗ್ಗೆ ಬಿಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಪೊಲೀಸರು ಕ್ರಮ ತೆಗೆದುಕೊಳ್ಳದೇ ಇರುವುದನ್ನು ಕೂಡ ನಾನು ಉಲ್ಲೇಖಿತ್ತೇನೆ. ಅಲ್ಲಾರಿಗೆ ಅಪಮಾನ ಮಾಡುತ್ತಿರುವವರೇ ಅವರು. ಮೈಕ್‌ನಲ್ಲಿ ಅಲ್ಲಾ ಎಂದು ಕೂಗಿ ಅಪಮಾನ ಮಾಡುತ್ತಿದ್ದಾರೆ. ನಾಲ್ಕು ಮೈಕ್ ಹಾಕಿಕೊಂಡು ಕೂಗುತ್ತಾರೆ. ಕೇವಲ ಮೈಕ್‌ನಲ್ಲಿ ಕೂಗಿದರೆ ಮಾತ್ರನಾ ಅಲ್ಲಾನಿಗೆ ತೃಪ್ತಿಯಾಗುತ್ತಾ, ಇವರು ಸುಪ್ರೀಂ ಕೋರ್ಟ್ ಆದೇಶ ಬಂದ ಸಂದರ್ಭದಲ್ಲಿ ಮಾತ್ರ ಬಿಗಿ ಕ್ರಮ ತೆಗೆದುಕೊಳ್ಳುತ್ತಾರೆ. ಇ-ವರಿಗೆ ಬಾಕಿ ಸಂದರ್ಭದಲ್ಲೂ ಬಿಗಿ ಕ್ರಮವಾಗಬೇಕು. ಈ ಬಗ್ಗೆ ಕೇಂದ್ರ ಗೃಹ ಸಚಿವರಿಗೆ, ಪ್ರಧಾನಮಂತ್ರಿಗಳಿಗೆ, ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಈ ಬಗ್ಗೆ ಬಿಗಿ ಕ್ರಮ ತೆಗೆದುಕೊಳ್ಳಬೇಕು ಎಂದರು.

ನಾನು ಎಲ್ಲ ಮುಸಲ್ಮಾನರೂ ಕೆಟ್ಟವರಲ್ಲ, ಒಳ್ಳೆಯ ಮುಸಲ್ಮಾನರೂ ಇದ್ದಾರೆ. ಕೆಲ ಕೆಟ್ಟ ಮುಸಲ್ಮಾನರು, ಒಳ್ಳೆಯ ಮುಸಲ್ಮಾನರನ್ನು ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಒಳ್ಳೆಯ ಮುಸಲ್ಮಾನರು ಎಚ್ಚರದಿಂದಿರಬೇಕು ಎಂದು ಹೇಳಿದ್ದೇನೆ. ಹೀಗೆ ನಾನು ಹೇಳಿದ್ದು ತಪ್ಪಾ? ಎಂದು ಪ್ರಶ್ನಿಸಿದರು. ಕೆ.ಎಸ್ ಈಶ್ವರಪ್ಪ ಅವರು ಆಜಾನ್ ಕುರಿತು ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಈಶ್ವರಪ್ಪನವರ ವಿರುದ್ಧ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಈಶ್ವರಪ್ಪನವರ ವಿರುದ್ಧ ಜೋರಾಗಿ ಘೋಷಣೆಗಳು ಮೊಳಗಿದ್ದವು.

ಕೆ.ಎಸ್‌.ಈಶ್ವರಪ್ಪ ನಮ್ಮ ತಂದೆ-ತಾಯಿಗೆ ವಿರುದ್ಧವಾಗಿ ಮಾತನಾಡಿದರೂ ಬಿಡಬಹುದು. ಆದರೆ ಅಲ್ಲಾ- ಆಜಾನ್ ಬಗ್ಗೆ ಮಾತನಾಡಿದ್ದಾರೆ. ಬೇಕಾದರೆ ನಾವು ವಿಧಾನಸೌಧದ ಮುಂದೆಯೂ ನಾವೆಲ್ಲ ಮುಸ್ಲಿಂರು ಆಜಾನ್ ಹೇಳುತ್ತೇವೆ. ನಾವೇನು ಹೇಡಿಗಳಲ್ಲ" ಎಂದು ಡಿಸಿ ಕಚೇರಿಯ ಹೊರಗೆ ನಿಂತಿದ್ದ ವ್ಯಕ್ತಿಯೊಬ್ಬ ಪ್ರತಿಕ್ರಿಯಿಸಿದ್ದನು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+