ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್'ಟಿಓ ಅಧಿಕಾರಿಗೆ ಚಪ್ಪಲಿ ತೋರಿಸಿದ ಶಿವಮೊಗ್ಗ ಪಾಲಿಕೆ ಸದಸ್ಯನ ವಿರುದ್ಧ ದೂರು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಫೆಬ್ರವರಿ 19: ನಗರದ ಆರ್​ಟಿಒ ಕಚೇರಿಯಲ್ಲಿ ಅಧಿಕಾರಿ ಶ್ರೀನಿವಾಸಯ್ಯ ಅವರಿಗೆ ಪಾಲಿಕೆಯ ಸದಸ್ಯ, ಆರ್​ಟಿಒ ಏಜೆಂಟ್ ವಿಶ್ವಾಸ್ ಚಪ್ಪಲಿ ತೋರಿಸಿ ದರ್ಪ ತೋರಿದ್ದಾರೆ ಎಂಬ ಆರೋಪಿಸಲಾಗಿದೆ.

ಶಿವಮೊಗ್ಗದ ಹೊಸ ಆರ್​ಟಿಒ ಆಗಿ ಶ್ರೀನಿವಾಸಯ್ಯ ಅವರು ನೇಮಕವಾಗಿದ್ದು , ಕಚೇರಿಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ದೃಷ್ಟಿಯಿಂದ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಶ್ರೀನಿವಾಸಯ್ಯ ಅವರು ಕೆಲಸವನ್ನು ವಿಳಂಬ ಮಾಡಿಸುತ್ತಿದ್ದಾರೆ.

ಚಾಮರಾಜನಗರ ಆರ್ ಟಿಓ ಕಚೇರಿ ಮೇಲೆ ಎಸಿಬಿ ದಾಳಿ:1.12 ಲಕ್ಷ ರೂ.ವಶಚಾಮರಾಜನಗರ ಆರ್ ಟಿಓ ಕಚೇರಿ ಮೇಲೆ ಎಸಿಬಿ ದಾಳಿ:1.12 ಲಕ್ಷ ರೂ.ವಶ

ಆದರೆ ಶನಿವಾರ ಪಾಲಿಕೆಯ ಬಿಜೆಪಿ ಸದಸ್ಯ ಮತ್ತು ಆರ್​ಟಿಒ ಏಜೆಂಟ್ ಆಗಿರುವ ವಿಶ್ವಾಸ್ ಇತರೆ ಏಜೆಂಟ್ ಜೊತೆಗೂಡಿ ಬಂದು ಶ್ರೀನಿವಾಸಯ್ಯಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಮಾಡಲಾಗಿದೆ.

Complained against RTO agent in Sivammogga Jayanagar police station

ಈ ಬಗ್ಗೆ ಸರ್ಕಾರಿ ನೌಕರರ ಸಂಘದವರು ಸೋಮವಾರ (ಫೆ.18) ಸಭೆ ನಡೆಸಿ, ಸರ್ಕಾರಿ ನೌಕರರ ಮೇಲೆ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಮಾಡಲಾಗಿದೆ ಎಂದು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Complained against RTO agent in Sivammogga Jayanagar police station

ಆರ್'ಟಿಓ ಕಛೇರಿಯಲ್ಲಿ ನಡೆಯುತ್ತಿದ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಜನಸಾಮಾನ್ಯರಿಗೆ ಉತ್ತಮ‌ ಸೇವೆ ಒದಗಿಸುವ ಕ್ರಮಕ್ಕೆ ಮುಂದಾಗಿದ್ದಕ್ಕೆ ನನಗೆ ಈ ರೀತಿ ಚಪ್ಪಲಿ ತೋರಿಸಿದ್ದಾರೆ ಎಂದು ಶ್ರೀನಿವಾಸ ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ.

English summary
RTO agent showned the slipper to the RTO officer in Shivamogga. On this reason Government Employees Association has complained against RTO agent in Jayanagar police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X