"ಗಾಂಧಿಯನ್ನು ಗೋಡ್ಸೆ ಒಂದು ಬಾರಿ ಕೊಂದರೆ, ಕಾಂಗ್ರೆಸ್ ಪ್ರತಿದಿನ ಕೊಲ್ಲುತ್ತಿದೆ"
ಶಿವಮೊಗ್ಗ, ಅಕ್ಟೋಬರ್ 21: "ಗಾಂಧೀಜಿಯನ್ನು ಗೋಡ್ಸೆ ಒಂದು ಬಾರಿ ಕೊಂದರು, ಆದರೆ ಈ ಕಾಂಗ್ರೆಸ್ ಗಾಂಧಿಯವರನ್ನು ಪ್ರತಿನಿತ್ಯ ಕೊಲ್ಲುತ್ತಿದೆ" ಎಂದು ಕಿಡಿಕಾರಿದ್ದಾರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗದಲ್ಲಿ ಗಾಂಧಿಸಂಕಲ್ಪ ಪಾದಯಾತ್ರೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, "ಮಹಾತ್ಮಾ ಗಾಂಧೀಜಿಯವರನ್ನು ನಾಥೂರಾಮ್ ಗೋಡ್ಸೆ ಕೊಂದರು ಎಂದು ಹೇಳಲಾಗುತ್ತದೆ. ಗೋಹತ್ಯೆ ನಿಷೇಧ ಗಾಂಧೀಜಿ ಅವರ ಕನಸು. ಆದರೆ ಕೇಂದ್ರ ಮತ್ತು ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡಲು ಕಾಂಗ್ರೆಸ್ ನವರು ಬಿಡುತ್ತಿಲ್ಲ. ಅಖಂಡ ಭಾರತ ಒಂದು ಎಂಬುದು ಗಾಂಧೀ ಕನಸಾಗಿತ್ತು. ಆ ಕನಸು ನನಸು ಮಾಡಲು ಕಾಂಗ್ರೆಸ್ ನವರು ಬಿಡುತ್ತಿಲ್ಲ. ಗಾಂಧೀಜಿಯವರನ್ನು ಕಾಂಗ್ರೆಸ್ ನವರು ಈ ಮೂಲಕ ಪ್ರತಿನಿತ್ಯ ಕೊಲ್ಲುತ್ತಿದ್ದಾರೆ" ಎಂದು ಆರೋಪಿಸಿದರು.

"ಕಳೆದ 70 ವರ್ಷದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿಕೊಂಡು ಬಂದರೂ ಗಾಂಧೀಜಿ ಅವರ ಶೌಚಾಲಯ ಮುಕ್ತ ಭಾರತದ ಕನಸು ನನಸು ಮಾಡಲು ಆಗಿಲ್ಲ. ಇದಕ್ಕೆ ಪ್ರಧಾನಿಯಗಿರುವ ಮೋದಿಯವರೇ ಬರಬೇಕಾಯಿತು. ಸ್ವಚ್ಛ ಭಾರತ್ ಸೇರಿದಂತೆ ಅನೇಕ ಯೋಜನೆಗಳಿಗೆ ಮೋದಿಯವರು ಚಾಲನೆ ನೀಡಿದ್ದಾರೆ. ಗಾಂಧೀಜಿ ಅವರ ಕನಸು, ಚಿಂತನೆ, ತತ್ವ ಸಿದ್ಧಾಂತಗಳಿಗೆ ನಿಜವಾದ ಗೌರವ ನೀಡುತ್ತಿರುವುದು ನಮ್ಮ ಬಿಜೆಪಿ. ಕಾಂಗ್ರೆಸ್ ನವರು ಚುನಾವಣೆಗಾಗಿ, ಅಧಿಕಾರಕ್ಕಾಗಿ ಗಾಂಧಿ ಅವರ ಹೆಸರನ್ನು ಬಳಸಿಕೊಂಡಿದ್ದಾರೆ" ಎಂದು ಕಾಂಗ್ರೇಸ್ ನ ವಿರುದ್ಧ ಕಿಡಿಕಾರಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications