ತೀರ್ಥಹಳ್ಳಿ; ಕೋವಿಡ್ ಲಸಿಕೆ ವಿಚಾರಕ್ಕೆ ಮಾರಾಮಾರಿ

ಶಿವಮೊಗ್ಗ, ಜುಲೈ 06; ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೊರೊನಾ ಲಸಿಕೆ ವಿಚಾರಕ್ಕೆ ನಡೆದ ಮಾತಿನ ಚಕಮಕಿ ಬಳಿಕ ಗಲಾಟೆ ನಡೆದಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾಂಗ್ರೆಸ್‌ನ ಇಬ್ಬರು, ಬಿಜೆಪಿಯ ಮೂವರು ಮಾರಾಮಾರಿಯಲ್ಲಿ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾರೆ. ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ತೀರ್ಥಹಳ್ಳಿಯ ಸೀಬಿನಕೆರೆ ಶಾಲೆಯಲ್ಲಿ ಕೋವಿಡ್ ಲಸಿಕೆ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದಿದೆ. ಈ ಗದ್ದಲ ಬಳಿಕ ಹೊಡೆದಾಟಕ್ಕೆ ಕಾರಣವಾಗಿದ್ದು, ಬಿಜೆಪಿ ಕಾರ್ಯಕರ್ತರಾದ ವಿಶ್ವನಾಥ್ ಗಾಣಿಗ ಮತ್ತು ನಮೃತ್ ಗಾಯಗೊಂಡಿದ್ದಾರೆ.

Corona Vaccine Issue BJP And Congress Activists Clash At Thirthahalli

ಈ ಘಟನೆ ಬಳಿಕ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದಾಗ ಮತ್ತೆ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಕಾಂಗ್ರೆಸ್‌ನ ಸುಭಾಷ್ ಕುಲಾಲ್, ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತಗೆ ಗಾಯಗಳಾಗಿವೆ.

ಕಿಮ್ಮನೆ ಪ್ರತಿಭಟನೆ; ಈ ಘಟನೆ ಬಳಿಕ ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.

ಬಿಜೆಪಿ ಮುಖಂಡ ಸೊಪ್ಪುಗುಡ್ಡೆ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಸಹ ಪ್ರತಿಭಟನೆ ನಡೆಸಿತು. ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಕೋವಿಡ್ ಸಮಯದಲ್ಲಿ ಬಡವರಿಗೆ ಸಹಕಾರಿಯಾಗಲು ಕಾಂಗ್ರೆಸ್ ತೀರ್ಥಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಈ ಕಾರ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿವೆ. ಇಂತಹ ಸಮಯದಲ್ಲಿಯೇ ಮಾರಾಮಾರಿ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+