ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನ ಹಾಗೂ ದರ್ಗಾ ಬಂದ್
ಶಿವಮೊಗ್ಗ, ಮಾರ್ಚ್ 21: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತೆ ಕ್ರಮವಾಗಿ ರಾಜ್ಯದ ಎಲ್ಲ ದೇವಾಲಯಗಳನ್ನು ಬಂದ್ ಮಾಡುವಂತೆ ಸರ್ಕಾರ ಆದೇಶ ನೀಡಿದೆ. ಅದರಂತೆ, ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನ ಹಾಗೂ ದರ್ಗಾ ಬಂದ್ ಮಾಡಲಾಗಿದೆ.
ಹಣಗೆರೆಕಟ್ಟೆಯ ಈ ಸ್ಥಳ ಸರ್ವ ಧರ್ಮ ಸಮನ್ವಯದ ಧಾರ್ಮಿಕ ಕ್ಷೇತ್ರ. ಇಲ್ಲಿ ದೇವಸ್ಥಾನ ಹಾಗೂ ದರ್ಗಾ ಎರಡು ಒಂದೇ ಕಡೆ ಇದೆ. ಚೌಡೇಶ್ವರಿ, ಭೂತರಾಯ ಮತ್ತು ಹಜರ್ ಸೈಯದ್ ಸಾದತ್ ಅಲಿ ದರ್ಗಾದ ದರ್ಶನಕ್ಕೆ ಬಹುಸಂಖ್ಯಾತರು ಆಗಮಿಸಿ, ದರ್ಶನ ಪಡೆದು ತೆರಳುತ್ತಿದ್ದರು. ಹಿಂದೂ ದೇವಸ್ಥಾನ ಹಾಗೂ ಮುಸ್ಲಿಂ ದರ್ಗಾ ಎರಡು ಒಂದೇ ಸ್ಥಳದಲ್ಲಿ ಇದ್ದು, ವಿಶೇಷ ಕ್ಷೇತ್ರ ಎನಿಸಿಕೊಂಡಿದೆ. ಕೊರೊನಾ ವೈರಸ್ ಭೀತಿಯಿಂದ ದೇವಾಲಯ ಹಾಗೂ ದರ್ಗಾದಲ್ಲಿ ಭಕ್ತರಿಗೆ ನಿಷೇಧ ಏರಲಾಗಿದೆ.
ಕೊರೊನಾ ವೈರಸ್ನಿಂದ ಸರ್ಕಾರಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಳ್ಳುವ ನಿರ್ಣಯಗಳಿಗೆ ಸಾರ್ವಜನಿಕರು ಸ್ಪಂದಿಸುವ ಅಗತ್ಯವಿದೆ ಎಂದು ತೀರ್ಥಹಳ್ಳಿಯ ತಹಶೀಲ್ದಾರ್ ಡಾ ಶ್ರೀ ಪಾದ ಎಸ್.ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ರಾಜ್ಯದ ಬಹುತೇಕ ಎಲ್ಲ ದೇವಾಲಯಗಳು ಕೊರೊನಾ ವೈರಸ್ ನಿಂದ ಬಂದ್ ಆಗಿದೆ. ನಂಜನಗೂಡು ನಂಜುಂಡೇಶ್ವರ, ಕುಕ್ಕೆ, ಅಂಜನಾದ್ರಿ, ಮಲೆ ಮಹದೇಶ್ವರ, ಮೂಕಾಂಬಿಕಾ, ಆದಿಚುಂಚನಗಿರಿ, ಮಂತ್ರಾಲಯ, ತಿರುಪತಿ ದೇವಸ್ಥಾನಗಳು ಭಕ್ತರಿಗೆ ನಿರ್ಬಂಧ ಹೇರಿವೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications