ವಿಚಿತ್ರ: ತೀರ್ಥಹಳ್ಳಿಯ ಸ್ಮಶಾನದಿಂದ ಅಂತ್ಯಕ್ರಿಯೆಯ ಬೂದಿ ಕಳ್ಳತನ
ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಕಳ್ಳತನ ಪ್ರಕರಣವೊಂದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಸ್ಮಶಾನದಲ್ಲಿ ಶವ ಸಂಸ್ಕಾರ ಮಾಡಿದ ಬೂದಿಯನ್ನೇ ಖದೀಮರು ಕಳ್ಳತನ ಮಾಡಿರುವ ವಿಚಿತ್ರ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹೊರಬೈಲು ಗ್ರಾಮದಲ್ಲಿ ಸಂಭವಿಸಿದೆ.
ಶಿವಮೊಗ್ಗ, ಫೆಬ್ರವರಿ 2: ಕೇವಲ ಶಿವಮೊಗ್ಗ ಮಾತ್ರವಲ್ಲದೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಳ್ಳತನ ಪ್ರಕರಣಗಳು ಹೆಚ್ಚುತ್ತಲೇ ಇದೆ. ಬೈಕ್ ಕಳ್ಳತನ, ಚಿನ್ನಾಭರಣ ಕಳ್ಳತನ, ಮೊಬೈಲ್ ಕಳ್ಳತನ ಹೀಗೆ ಹಲವಾರು ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದು, ಇಂತಹ ಕಳ್ಳತನ ಸಾಮಾನ್ಯವಾಗಿದೆ. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಕಳ್ಳತನ ಪ್ರಕರಣ ಎಲ್ಲರನ್ನೂ ಅಚ್ಚರಿಗೊಳಿಸಿದೆ.
ಸ್ಮಶಾನದಲ್ಲಿ ಶವ ಸಂಸ್ಕಾರ ಮಾಡಿದ ಬೂದಿಯನ್ನೇ ಖದೀಮರು ಕಳ್ಳತನ ಮಾಡಿರುವ ವಿಚಿತ್ರ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹೊರಬೈಲು ಗ್ರಾಮದಲ್ಲಿ ಸಂಭವಿಸಿದೆ.
ತೀರ್ಥಹಳ್ಳಿಯ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರಬೈಲು ಗ್ರಾಮದ ಗಂಗಾಧರೇಶ್ವರ ಸ್ಮಶಾನದಲ್ಲಿ ಈ ಘಟನೆ ಸಂಭವಿಸಿದ್ದು, ಬುಧವಾರ ಬೂದಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರಬೈಲು ಗ್ರಾಮದ ಮಹಿಳೆಯೊಬ್ಬರು ನಿಧನರಾಗಿದ್ದರು. ತುಂಗಾ ನದಿ ದಡದ ಮೇಲಿರುವ ಗಂಗಾಧರೇಶ್ವರ ಸ್ಮಶಾನದಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಮೂರು ದಿನದ ಬಳಿಕ ಮುಂದಿನ ಕಾರ್ಯಕ್ಕಾಗಿ ಬೂದಿ ಸಂಗ್ರಹಿಸಲು ಮೃತ ಮಹಿಳೆಯ ಕುಟುಂಬಸ್ಥರು ಸ್ಮಶಾನಕ್ಕೆ ಬಂದಿದ್ದರು. ಈ ವೇಳೆ ಕುಟುಂಬಸ್ಥರು ಶಾಕ್ ಆಗುವ ಘಟನೆ ನಡೆದಿದ್ದು, ಅಂತ್ಯ ಸಂಸ್ಕಾರ ನೆರವೇರಿಸಿದ್ದ ಜಾಗದಲ್ಲಿ ಬೂದಿ ಇಲ್ಲದಿರುವುದನ್ನು ಕಂಡು ಚಕಿತಗೊಂಡಿದ್ದಾರೆ.
ಗಂಗಾಧರೇಶ್ವರ ಸ್ಮಶಾನಕ್ಕೆ ನುಗ್ಗಿದ್ದ ಖದೀಮರು ಅಂತ್ಯ ಸಂಸ್ಕಾರ ಮಾಡಿದ ಜಾಗದಲ್ಲಿ ಒಂದೇ ಒಂದು ಚೂರು ಬೂದಿಯನ್ನು ಬಿಡದೇ ಕಳ್ಳತನ ಮಾಡಿದ್ದಾರೆ. ನೆಲಸಮವಾಗಿ ಬೂದಿಯನ್ನು ದೋಚಿರುವ ಕಳ್ಳರು ಮೂರು ಎಲುಬು ಮೂಳೆಯನ್ನು ಅಂತ್ಯ ಸಂಸ್ಕಾರ ಮಾಡಿದ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ. ಬೂದಿ ಇಲ್ಲದೇ ಇರುವುದನ್ನು ಕಂಡು ಅಚ್ಚರಿಗೊಂಡ ಮೃತ ಮಹಿಳೆಯ ಕುಟುಂಬಸ್ಥರು, ಕಳ್ಳರು ಬಿಟ್ಟು ಹೋಗಿದ್ದ ಮೂರು ಎಲುಬುಗಳನ್ನು ತೆಗೆದುಕೊಂಡು ಹೋಗಿ ಮುಂದಿನ ಕಾರ್ಯ ನೆರವೇರಿಸಿದ್ದಾರೆ.

ಅಂತ್ಯ ಸಂಸ್ಕಾರ ಮಾಡಿದ್ದ ಬೂದಿಯನ್ನು ಯಾರು ತಗೆದುಕೊಂಡು ಹೋಗಿರಬಹುದು ಎನ್ನುವ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದ್ದು, ಕುಟುಂಬಸ್ಥರು ಅಂತ್ಯ ಸಂಸ್ಕಾರದ ಮಹಿಳೆ ಮೇಲೆ ಚಿನ್ನ ಅಥವಾ ಬೆಳ್ಳಿಯ ಒಡೆವೆಗಳನ್ನು ಹಾಕಿರಬಹುದು. ಹೀಗಾಗಿ ಈ ವಸ್ತುಗಳಿಗಾಗಿ ಖದೀಮರು ಬೂದಿಯನ್ನೇ ಕಳ್ಳತನ ಮಾಡಿರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications