ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ಯಾಂಕುಗಳ ಕಂತು ಮರುಪಾವತಿ ಅವಧಿ ವಿಸ್ತರಣೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 6: ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ, ಸಹಕಾರ ಬ್ಯಾಂಕ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಶಿವಮೊಗ್ಗ ಹಾಗೂ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಲ್ಲಿ(ಪಿ.ಎಲ್.ಡಿ.ಬಿ) ರೈತ ಸದಸ್ಯರ 3 ಲಕ್ಷ ರೂ. ಗಳವರೆಗೆ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ವಿತರಿಸಿರುವ ಯೋಜನೆ, ಶೇ.3 ರ ಬಡ್ಡಿದರದಲ್ಲಿ 10 ಲಕ್ಷ ರುಪಾಯಿಗಳವರೆಗೆ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಸಂಬಂಧಿತ ಸಾಲಗಳ ಮರುಪಾವತಿ ಅವಧಿ ವಿಸ್ತರಿಸಲಾಗಿದೆ.

Recommended Video

BSY 1610 ಕೋಟಿ ಪ್ಯಾಕೇಜ್ ಘೋಷಣೆ , ಕೊರೊನ ಪರಿಹಾರದಲ್ಲಿ ರಾಜ್ಯವೇ ನಂಬರ್ ಒನ್ | Yediyurappa | Karnataka

ಸ್ವಸಹಾಯ ಗುಂಪಿನ ಕಾಯಕ ಯೋಜನೆಯ ಸದಸ್ಯರುಗಳು 2020 ರ ಮಾರ್ಚ್ 31 ರವರೆಗೆ ಪಾವತಿಸಬೇಕಾದ ಕಂತುಗಳ ಮರುಪಾವತಿ ಅವಧಿಯನ್ನು 2020 ಜೂನ್ 30 ರವರೆಗೆ ವಿಸ್ತರಿಸಲಾಗಿದೆ.

Extension Of Banks Installment Repayment Period

ರೈತ ಸದಸ್ಯರುಗಳು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

Extension Of Banks Installment Repayment Period

ರಾಜ್ಯದಲ್ಲಿ ಕೋವಿಡ್-19 ವೈರಸ್ ಸೋಂಕಿನ ಪರಿಣಾಮದಿಂದ ಉಂಟಾಗಿರುವ ಪ್ರತಿಕೂಲ ಪರಿಸ್ಥಿತಿಯಲ್ಲಿ ಕರ್ನಾಟಕ ಲೇವಾದೇವಿದಾರರ ಕಾಯ್ದೆ ಹಾಗೂ ಕರ್ನಾಟಕ ಪಾನ್ ಬ್ರೋಕರ್ಸ್ ಅಧಿನಿಯಮ 1961 ಹಾಗೂ 1982 ರ ಚೀಟಿ ನಿಧಿ ಕಾಯ್ದೆಯಡಿಯಲ್ಲಿ ನೀಡಿರುವ ಸಾಲ/ ಕಂತುಗಳ ವಸೂಲಿಯ ಬಗ್ಗೆ ಕಿರುಕುಳ ಅಥವಾ ತೊಂದರೆ ನೀಡಬಾರದೆಂದು ಹಾಗೂ ಹೆಚ್ಚಿನ ಬಡ್ಡಿದರವನ್ನು ವಸೂಲು ಮಾಡಬಾರದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Extension Of Banks Installment Repayment Period In Shivamogga District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X