ಜೋಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಿ.ಟಿ.ರವಿ ಭರವಸೆ
ಶಿವಮೊಗ್ಗ, ಸೆಪ್ಟೆಂಬರ್ 13: "ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೊಸ ನೀತಿಯನ್ನು ರೂಪಿಸಲಾಗುವುದು" ಎಂದು ಪ್ರವಾಸ್ಯೋದ್ಯಮ ಸಚಿವ ಸಿ.ಟಿ. ರವಿ ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಸಂಬಂಧಪಟ್ಟಂತೆ ಜೋಗಕ್ಕೆ ಭೇಟಿ ನೀಡಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಇದು ತಕ್ಷಣವೇ ಪರಿಹಾರ ಕಲ್ಪಿಸಲು ಕೈಗೊಂಡಿರುವ ಭೇಟಿ ಅಲ್ಲ. ಸಮಸ್ಯೆಗಳನ್ನು ಅರಿತು ನಂತರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಧಾರ್ಮಿಕ, ಪ್ರಕೃತಿ ಸೌಂದರ್ಯ ಹೀಗೆ ಪ್ರವಾಸೋದ್ಯಮವನ್ನು ಪ್ರತ್ಯೇಕಿಸಿ ಸ್ಥಳಗಳಿಗೆ ಭೇಟಿ ನೀಡಲಾಗುತ್ತಿದೆ. ರಾಜ್ಯದಲ್ಲಿ 319 ಪ್ರವಾಸೋದ್ಯಮದ ಪ್ರಮುಖ ಕೇಂದ್ರಗಳಿವೆ. 1500 ಪುರಾತತ್ವ ಇಲಾಖೆಯ ಪ್ರಮುಖ ಜಾಗಗಳಿವೆ. ಜಾಗತಿಕ ಮಟ್ಟದ 40 ಪ್ರವಾಸ ಕೇಂದ್ರಗಳನ್ನು ಗುರುತಿಸಲಾಗುವುದು" ಎಂದು ಮಾಹಿತಿ ನೀಡಿದರು.
ಪಶ್ಚಿಮ ಘಟ್ಟದಲ್ಲಿನ ಪ್ರವಾಸೋದ್ಯಮ, ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ಎಂದು ಪ್ರತ್ಯೇಕಿಸಿ, ಅಲ್ಪಾವಧಿ, ದೀರ್ಘಾವಧಿ ಯೋಜನೆಗಳನ್ನು ರೂಪಿಸುವ ಜೊತೆಗೆ ಸಮಸ್ಯೆಗಳ ಚರ್ಚೆ ನಂತರ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಹೊಸ ನೀತಿ ರೂಪಿಸುವುದಾಗಿ ತಿಳಿಸಿದರು.

ಜೋಗದ ಅಭಿವೃದ್ಧಿ ಕುರಿತು ಜೋಗ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ ನಂತರ ಗ್ರಾಮಸ್ಥರ ಅಹವಾಲು ಸ್ವೀಕರಿಸಿದ ಅವರು, "ಶೌಚಾಲಯದ ಸಮಸ್ಯೆಗಳೇ ಹೆಚ್ಚಾಗಿವೆ, ಜೊತೆಗೆ ಜೋಗ್ ನಿಂದ ಸಾಗರಕ್ಕೆ ಕೆಎಸ್ಆರ್ ಟಿಸಿ ಬಸ್ ಬಿಡುವ ಬಗ್ಗೆ, ಪ್ರವೇಶದ ಶುಲ್ಕ ಕಡಿಮೆಗೊಳಿಸುವಂತೆ ಅಹವಾಲಿನಲ್ಲಿ ಕೇಳಿಬಂದವು. ಈ ವಿಷಯಗಳ ಕುರಿತು ಶೀಘ್ರದಲ್ಲಿ ಪರಿಹಾರ ಒದಗಿಸಲಾಗುವುದು" ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹರತಾಳ ಹಾಲಪ್ಪ ಇದ್ದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications