ಶಿವಮೊಗ್ಗ: ಒಡೆದ ಭದ್ರಾ ಎಡದಂಡೆ ಕಾಲುವೆ ತಡೆಗೋಡೆ, ಬೆಳೆಗಳು ಜಲಾವೃತ
ಶಿವಮೊಗ್ಗ, ಆಗಸ್ಟ್, 30: ಭದ್ರಾವತಿ ತಾಲೂಕಿನ ಹೊಸೂರು ತಾಂಡದ ಬಳಿ ಸೋಮವಾರ ರಾತ್ರಿ ವರುಣ ಆರ್ಭಟಿಸಿದ್ದಾನೆ. ಪರಿಣಾಮ ಭದ್ರಾ ಎಡದಂಡೆ ಕಾಲುವೆ ತಡೆಗೋಡೆ ಒಡೆದು ಹೋಗಿದ್ದು, ನೂರಾರು ಎಕರೆ ತೋಟ, ಗದ್ದೆಗಳಿಗೆ ನೀರು ನುಗ್ಗಿ ಬೆಳೆಗಳು ಜಲಾವೃತವಾಗಿದೆ.
ಭದ್ರಾವತಿ ತಾಲೂಕು ಹೊಸೂರು ತಾಂಡದ ಬಳಿ ಈ ಘಟನೆ ಸಂಭವಿಸಿದೆ. ರಾತ್ರಿ ಸುರಿದ ಭಾರೀ ಮಳೆಗೆ ಭದ್ರಾ ಎಡದಂಡೆ ಕಾಲುವೆಯ ತಡೆಗೋಡೆ ಕುಸಿದಿದೆ. 1955ರಲ್ಲಿ ಈ ಕಾಲುವೆಯ ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ಗೌಣದ ಕೆರೆ, ಗುರುವಿಕಟ್ಟೆ, ಅಸಲಿಕಟ್ಟೆ ಕೋಡಿಬಿದ್ದ ಪರಿಣಾಮ ಕಾಲುವೆ ತಡೆಗೋಡೆ ಒಡೆದಿದೆ ಎಂದು ಅಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ.
ತೋಟ, ಗದ್ದೆಗಳಿಗೆ ನುಗ್ಗಿದ ನೀರು; ಕಾಲುವೆ ತಡೆಗೋಡೆ ಒಡೆದು ಹೋಗಿರುವುದರಿಂದ ಹೊಸೂರು ತಾಂಡದ ನೂರಾರು ಎಕರೆ ತೋಟ, ಗದ್ದೆಗಳಿಗೆ ನೀರು ನುಗ್ಗಿದೆ. ನೀರಿನ ರಭಸಕ್ಕೆ ಭತ್ತದ ಸಸಿಗಳು ಕೊಚ್ಚಿ ಹೋಗಿವೆ. ಅಡಕೆ ತೋಟಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಲೇ ಇದ್ದು, ಇದರಿಂದ ಅಲ್ಲಿನ ರೈತರು ಆತಂಕಕ್ಕೀಡಾಗಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು ಎಂದು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೋಡಿ ಬಿದ್ದ ಜನ್ನಾಪುರ ಕೆರೆ; ಭಾರೀ ಮಳೆ ಸುರಿದ ಕಾರಣ ಜನ್ನಾಪುರ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ. ರಸ್ತೆಯ ಮೇಲೆ ನೀರು ಹರಿದು ಪಕ್ಕದ ಜಮೀನಿಗೆ ನುಗ್ಗಿದೆ. ಇದರಿಂದ ಜನ್ನಾಪುರ ಮತ್ತು ಭದ್ರಾವತಿ ನಡುವಿನ ರಸ್ತೆ ಚರಂಡಿಯಂತೆ ಆಗಿದೆ. ಇನ್ನು ಜನ್ನಾಪುರ ಕೆರೆ ನೀರು ಪಕ್ಕದ ಜಮೀನುಗಳಿಗೆ ಹರಿದು ಹೋಗುತ್ತಿದೆ. ಇದರಿಂದ ಪಕ್ಕದ ಜಮೀನುಗಳಲ್ಲಿ ಬೆಳೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮತ್ತೊಂದೆಡೆ ಕೆರೆ ಕೋಡಿ ಬಿದ್ದಿದ್ದರಿಂದ ಮೀನುಗಳು ರಸ್ತೆಗೆ ಹರಿದು ಬರುತ್ತಿದ್ದು, ಜನರು ಮೀನುಗಳನ್ನು ಹಿಡಿದು ಕೊಂಡೊಯ್ಯುತ್ತಿದ್ದಾರೆ.

ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದು, ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿಯೂ ಮಳೆರಾಯ ಅಬ್ಬರಸಿ ಬೊಬ್ಬೆರೆಯುತ್ತಿದ್ದಾನೆ. ಮಳೆ ಆರ್ಭಟದಿಂದ ನದಿ, ಕೊಳ್ಳಗಳು ತುಂಬಿ ಹರಿಯುತ್ತಿದ್ದು ಅಲ್ಲಿನ ಸುತ್ತಮುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಭದ್ರಾವತಿಯಲ್ಲಿ ಒಂದೇ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ಜಲಾವೃತವಾಗಿವೆ. ಇನ್ನು ತೋಟಗಳಲ್ಲಿಯೂ ಸಹ ಮಳೆ ನೀರು ನದಿಯಂತೆ ಹರಿಯುತ್ತಿದೆ. ಬೆಳೆಗಳೆಲ್ಲ ನೀರುಪಾಲಾಗಿದ್ದು, ಅಲ್ಲಿನ ಜನರು ಅಕ್ಷರಸಃ ತತ್ತರಿಸಿ ಹೋಗಿದ್ದಾರೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications