ಮುಂಗಾರು ಮುಗಿಯುವವರೆಗೂ ಮರಳುಗಾರಿಕೆ ಸ್ಥಗಿತಕ್ಕೆ ಶಿವಮೊಗ್ಗ ಡಿಸಿ ಸೂಚನೆ
ಶಿವಮೊಗ್ಗ, ಜೂನ್ 17: ಮುಂಗಾರು ಮುಗಿಯುವ ತನಕ ಜಿಲ್ಲೆಯಲ್ಲಿ ಮರಳುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Recommended Video
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ, ಮರಳು ಗಣಿಗಾರಿಕೆಯನ್ನು ಜೂನ್ 6ರಿಂದ ಮುಂಗಾರು ಮುಕ್ತಾಯವಾಗುವ ತನಕ ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸ್ಟಾಕ್ ವಾರ್ಡ್ ಗಳಲ್ಲಿರುವ ಮರಳನ್ನು ನಿಗದಿತ ಕಾಲಮಿತಿಯ ಒಳಗಾಗಿ ಸಾಗಾಣಿಕೆ ಮಾಡಲು ಅವಕಾಶ ನೀಡಲಾಗುವುದು. ಮುಂಗಾರಿನ ಅವಧಿಯಲ್ಲಿ ಮರಳುಗಾರಿಕೆ ನಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ತಾಲೂಕು ಮಟ್ಟದ ಸಮಿತಿಯು ಇದಕ್ಕೆ ಜವಾಬ್ದಾರಿಯಾಗಿರುವುದು ಎಂದು ಡಿಸಿ ತಿಳಿಸಿದ್ದಾರೆ.
ತಪಾಸಣೆ ತೀವ್ರಗೊಳಿಸಿ: ಪ್ರಸಕ್ತ ಸಾಲಿನಲ್ಲಿ ಮೇ ಅಂತ್ಯದವರೆಗೆ ಅಕ್ರಮ ಮರಳು ಸಾಗಾಣಿಕೆ ಸಂಬಂಧ 16 ವಾಹನಗಳನ್ನು ಜಪ್ತಿ ಮಾಡಲಾಗಿದೆ. 1.48ಲಕ್ಷ ರೂ. ದಂಡ ವಸೂಲು ಮಾಡಲಾಗಿದೆ. ಮರಳು ಸಾಗಾಣಿಕೆಯಿಂದ 24.23ಲಕ್ಷ ರೂ. ರಾಜಧನ ಸಂಗ್ರಹಿಸಲಾಗಿದೆ. ಹೆಚ್ಚುವರಿ ನಿಯತಕಾಲಿಕ ಪಾವತಿ ಮೊತ್ತ ರೂ.2.61ಕೋಟಿ ರೂ. ಸಂಗ್ರಹಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆಯಿಂದ 8ಲಕ್ಷ ರೂ. ರಾಜಧನ ದಂಡ ಪಡೆಯಲಾಗಿದೆ. ಕಟ್ಟಡ ಕಲ್ಲುಗಣಿಗಾರಿಕೆಯಿಂದ 8.78 ಲಕ್ಷ ರೂ. ರಾಜಧನ ಪಡೆಯಲಾಗಿದ್ದು, ಕಟ್ಟಡ ಕಲ್ಲು ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆಯಿಂದ 3.96ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಶ್ಮಿ ಮಾಹಿತಿ ನೀಡಿದರು.

ಅನಧಿಕೃತವಾಗಿ ಮರಳುಗಾರಿಕೆ, ಅಕ್ರಮ ಗಣಿಗಾರಿಕೆಯನ್ನು ತಡೆಯಲು ತಪಾಸಣೆಯನ್ನು ತೀವ್ರಗೊಳಿಸಬೇಕು ಮತ್ತು ಸರ್ಕಾರಿ ಆಸ್ತಿ ಕಳ್ಳತನದ ಮೊಕದ್ದಮೆಯನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಳ್ಳಕೊಳ್ಳದಿಂದ ಮರಳು ತೆಗೆಯಲು ಬ್ಲಾಕ್ ಗುರುತಿಸುವ ಕುರಿತು ತಾಲೂಕು ಮಟ್ಟದ ಸಮಿತಿಯಿಂದ ಶಿಫಾರಸು ಬಂದರೆ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಪರಿಶೀಲಿಸಿ ಅಧಿಸೂಚನೆ ಹೊರಡಿಸಲಿದೆ ಎಂದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications