ಮುಂಗಾರು ಮುಗಿಯುವವರೆಗೂ ಮರಳುಗಾರಿಕೆ ಸ್ಥಗಿತಕ್ಕೆ ಶಿವಮೊಗ್ಗ ಡಿಸಿ ಸೂಚನೆ
ಶಿವಮೊಗ್ಗ, ಜೂನ್ 17: ಮುಂಗಾರು ಮುಗಿಯುವ ತನಕ ಜಿಲ್ಲೆಯಲ್ಲಿ ಮರಳುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Recommended Video
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ, ಮರಳು ಗಣಿಗಾರಿಕೆಯನ್ನು ಜೂನ್ 6ರಿಂದ ಮುಂಗಾರು ಮುಕ್ತಾಯವಾಗುವ ತನಕ ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸ್ಟಾಕ್ ವಾರ್ಡ್ ಗಳಲ್ಲಿರುವ ಮರಳನ್ನು ನಿಗದಿತ ಕಾಲಮಿತಿಯ ಒಳಗಾಗಿ ಸಾಗಾಣಿಕೆ ಮಾಡಲು ಅವಕಾಶ ನೀಡಲಾಗುವುದು. ಮುಂಗಾರಿನ ಅವಧಿಯಲ್ಲಿ ಮರಳುಗಾರಿಕೆ ನಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ತಾಲೂಕು ಮಟ್ಟದ ಸಮಿತಿಯು ಇದಕ್ಕೆ ಜವಾಬ್ದಾರಿಯಾಗಿರುವುದು ಎಂದು ಡಿಸಿ ತಿಳಿಸಿದ್ದಾರೆ.
ತಪಾಸಣೆ ತೀವ್ರಗೊಳಿಸಿ: ಪ್ರಸಕ್ತ ಸಾಲಿನಲ್ಲಿ ಮೇ ಅಂತ್ಯದವರೆಗೆ ಅಕ್ರಮ ಮರಳು ಸಾಗಾಣಿಕೆ ಸಂಬಂಧ 16 ವಾಹನಗಳನ್ನು ಜಪ್ತಿ ಮಾಡಲಾಗಿದೆ. 1.48ಲಕ್ಷ ರೂ. ದಂಡ ವಸೂಲು ಮಾಡಲಾಗಿದೆ. ಮರಳು ಸಾಗಾಣಿಕೆಯಿಂದ 24.23ಲಕ್ಷ ರೂ. ರಾಜಧನ ಸಂಗ್ರಹಿಸಲಾಗಿದೆ. ಹೆಚ್ಚುವರಿ ನಿಯತಕಾಲಿಕ ಪಾವತಿ ಮೊತ್ತ ರೂ.2.61ಕೋಟಿ ರೂ. ಸಂಗ್ರಹಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆಯಿಂದ 8ಲಕ್ಷ ರೂ. ರಾಜಧನ ದಂಡ ಪಡೆಯಲಾಗಿದೆ. ಕಟ್ಟಡ ಕಲ್ಲುಗಣಿಗಾರಿಕೆಯಿಂದ 8.78 ಲಕ್ಷ ರೂ. ರಾಜಧನ ಪಡೆಯಲಾಗಿದ್ದು, ಕಟ್ಟಡ ಕಲ್ಲು ಅಕ್ರಮ ಗಣಿಗಾರಿಕೆ ಮತ್ತು ಸಾಗಾಣಿಕೆಯಿಂದ 3.96ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಶ್ಮಿ ಮಾಹಿತಿ ನೀಡಿದರು.

ಅನಧಿಕೃತವಾಗಿ ಮರಳುಗಾರಿಕೆ, ಅಕ್ರಮ ಗಣಿಗಾರಿಕೆಯನ್ನು ತಡೆಯಲು ತಪಾಸಣೆಯನ್ನು ತೀವ್ರಗೊಳಿಸಬೇಕು ಮತ್ತು ಸರ್ಕಾರಿ ಆಸ್ತಿ ಕಳ್ಳತನದ ಮೊಕದ್ದಮೆಯನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಳ್ಳಕೊಳ್ಳದಿಂದ ಮರಳು ತೆಗೆಯಲು ಬ್ಲಾಕ್ ಗುರುತಿಸುವ ಕುರಿತು ತಾಲೂಕು ಮಟ್ಟದ ಸಮಿತಿಯಿಂದ ಶಿಫಾರಸು ಬಂದರೆ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಪರಿಶೀಲಿಸಿ ಅಧಿಸೂಚನೆ ಹೊರಡಿಸಲಿದೆ ಎಂದರು.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications