ಶಿವಮೊಗ್ಗದಲ್ಲಿ ಎಕ್ಸ್ ರೇ ಕೋಣೆವರೆಗೆ ಪತಿಯ ಕಾಲು ಹಿಡಿದು ಎಳೆದೊಯ್ದ ಪತ್ನಿ
ಶಿವಮೊಗ್ಗ, ಜೂನ್ 2: ಬದುಕುವುದು ಸಾವಿಗಿಂತ ಕಷ್ಟವೇ ಎಂದೆನಿಸುವಂಥ ಘಟನೆ ಶಿವಮೊಗ್ಗದ ಮೆಗಾನ್ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ಬಗ್ಗೆ ವಿಡಿಯೋ ಹರಿದಾಡುತ್ತಿದ್ದು, ಹಿರಿಯ ಮಹಿಳೆಯೊಬ್ಬರು ತಮ್ಮ ಪತಿಯನ್ನು ಎಕ್ಸ್ ರೇ ಕೋಣೆಯೊಳಗೆ ಕರೆದೊಯ್ಯುತ್ತಿರುವ ರೀತಿ ಮನ ಕಲಕುವಂತಿದೆ.
ಆ ವಿಡಿಯೋದಲ್ಲಿರುವ ಮಹಿಳೆ ಹೆಸರು ಫಮೀದಾ. ಎಕ್ಸ್ ರೇ ಕೋಣೆಯೊಳಗೆ ಪತಿಯನ್ನು ಕರೆದೊಯ್ಯಬೇಕು, ಒಂದು ವ್ಹೀಲ್ ಛೇರೋ, ಸ್ಟ್ರೆಚರೋ ಕೊಡಿ ಎಂದು ಮೆಗಾನ್ ಆಸ್ಪತ್ರೆಯಲ್ಲಿ ಕೇಳಿಕೊಂಡಿದ್ದಾರೆ. ಆದರೆ ಸಿಬ್ಬಂದಿ ನಿರಾಕರಿಸಿದ್ದಾರೆ. ಆ ನಂತರ ನಡೆದ ಘಟನೆ ವಿಡಿಯೋ ಆಗಿದ್ದು, ಸರಕಾರಿ ಆಸ್ಪತ್ರೆಯ ದೈನೇಸಿ ಸ್ಥಿತಿಯನ್ನು ತೆರೆದಿಟ್ಟುತ್ತಿದೆ.[ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಛಾವಣಿ ಕುಸಿದು ಮೂರು ದಿನದ ಮಗುವಿಗೆ ಗಾಯ]

ಆಸ್ಪತ್ರೆ ಸಿಬ್ಬಂದಿಯ ಧೋರಣೆಯಿಂದ ಕಂಗೆಟ್ಟು, ತನ್ನ ಪತಿ ಅಮೀರ್ ಸಾಬ್ ರ ಕಾಲನ್ನು ಹಿಡಿದು ದರದರ ಎಕ್ಸ್ ರೇ ಕೋಣೆವರೆಗೆ ಎಳೆದೊಯ್ದಿದ್ದಾರೆ ಫಮೀದಾ. "ಈ ವಿಡಿಯೋ ಎರಡು ದಿನದ ಹಿಂದಿನದು. ನನ್ನ ಗಮನಕ್ಕೆ ಈ ಘಟನೆ ಬಂದಿದ್ದು, ಆಂತರಿಕ ತನಿಖೆಗೆ ಆದೇಶಿಸಿದ್ದೇನೆ. ಆಸ್ಪತ್ರೆಯಲ್ಲಿ ಸ್ಟ್ರೆಚರ್ ಅಥವಾ ವ್ಹೀಲ್ ಛೇರ್ ಗೆ ಕೊರತೆ ಇಲ್ಲ" ಎಂದು ಆಸ್ಪತ್ರೆ ನಿರ್ದೇಶಕ ಡಾ ಸುಶೀಲ್ ಕುಮಾರ್ ತಿಳಿಸಿದ್ದಾರೆ.['ಮೊದಲು ರೋಗಿಗಳಿಗೆ ಟ್ರೀಟ್ ಮೆಂಟ್ ನಂತರವೇ ಪೇಮೆಂಟ್']
ಅಂದಹಾಗೆ ಕರ್ನಾಟಕ ಸರಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. ಮೇ ಇಪ್ಪತ್ಮೂರರಂದು ಕೋಲಾರ ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್ ನಲ್ಲಿ ಛಾವಣಿ ಕುಸಿದು ಐದು ದಿನದ ಮಗು ಹಾಗೂ ತಾಯಿಗೆ ಗಾಯವಾಗಿತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications