ಶಾಲೆಗೆ ಭೇಟಿ, ವಿದ್ಯಾರ್ಥಿಯಾದ ಜಿಲ್ಲಾಧಿಕಾರಿ
ಶಿವಮೊಗ್ಗ, ಡಿಸೆಂಬರ್. 13 : ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಯಾದರು. ಸರ್ಕಾರಿ ಶಾಲೆಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ವರದಿ ನೀಡುವಂತೆ ಸೂಚನೆ ನೀಡಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಹೊಸನಗರ ತಾಲೂಕಿನ ನಿರೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿದರು. ಶಾಲೆಯಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.

1 ನೇ ತರಗತಿಯಿಂದ 5 ನೇ ತರಗತಿಯವರೆಗೆ ಶಿಕ್ಷಣ ಪಡೆಯಲು ಅವಕಾಶ ಇರುವ ಈ ಶಾಲೆಯಲ್ಲಿ ಪರಿಸರ ಸಂರಕ್ಷಣೆ, ಉದ್ಯಾನವನ, ಸಾಹಸ ಕ್ರೀಡೆ, ಔಷಧಿ ಗಿಡಗಳ ಉದ್ಯಾನವನ, ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ಪರಿಶೀಲನೆ ನಡೆಸಿದರು.
ನಲಿ-ಕಲಿ ತರಗತಿಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲನೆ ನಡೆಸಿದರು. ಮಕ್ಕಳ ಜೊತೆ ಮಾತುಕತೆ ನಡೆಸಿದರು. ಶಿಕ್ಷಕರಿಂದ ಮಾಹಿತಿ ಸಂಗ್ರಹಿಸಿದರು.

ಕನ್ನಡ ಮತ್ತು ಆಂಗ್ಲ ಭಾಷೆಯ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ನೀಡಿದ್ದ ನಿರ್ದೇಶನದಂತೆ ಪ್ರತಿ ದಿನ ಒಬ್ಬ ವಿದ್ಯಾರ್ಥಿಯಿಂದ ಒಂದು ಗಾದೆ ಮಾತು, ಒಂದು ಆಂಗ್ಲ ಪದವನ್ನು ಸಂಗ್ರಹಿಸಿ ಬೆಳಗಿನ ಪ್ರಾರ್ಥನೆಯ ಸಮಯದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಹೇಳಿಸುವಂತಹ ವ್ಯವಸ್ಥೆಗೆ ಬಗ್ಗೆ ಮಾಹಿತಿ ಪಡೆದರು.
ಮಕ್ಕಳು ನಡೆಸಿದ ಸಾಹಸ ಚಟುವಟಿಕೆಗಳು, ಸಾಂಸ್ಕೃತಿಕ ಚಟುವಟಿಕೆಗಳನ್ನು ವೀಕ್ಷಿಸಿದರು. ಬಿಸಿಯೂಟ ತಯಾರು ಮಾಡುವ ಹಾಗೂ ವಿತರಣೆ ಮಾಡುವ ಕೊಠಡಿಯನ್ನು ಪರಿಶೀಲಿಸಿ, ಅಡುಗೆಯವರಿಂದ ಮಾಹಿತಿ ಸಂಗ್ರಹಿಸಿದರು.
ಶಾಲೆಗೆ ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದ್ದಲ್ಲಿ ವರದಿ ನೀಡಿದರೆ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications