ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ತವರು ಕ್ಷೇತ್ರದಿಂದ ಜಮಾತ್ ‌ಗೆ ಹೋಗಿದ್ರಾ 16 ಮಂದಿ?

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 09: ಮುಖ್ಯಮಂತ್ರಿಗಳ ಕ್ಷೇತ್ರ ಶಿಕಾರಿಪುರದಿಂದ ತಬ್ಲಿಘಿ ಜಮಾತ್ ‌ಗೆ ಯಾರೂ ಹೋಗಿಲ್ಲ ಎನ್ನುವ ಮಾತು ಈವರೆಗೂ ಕೇಳಿಬರುತ್ತಿತ್ತು. ಆದರೆ 16ಕ್ಕೂ ಹೆಚ್ಚು ಜನರು ದೆಹಲಿಗೆ ತೆರಳಿದ್ದರು ಎನ್ನುವುದು ಇದೀಗ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಹಮದಾಬಾದ್ ನಿಂದ ಚಿತ್ರದುರ್ಗ ಮಾರ್ಗದಲ್ಲಿ ಬುಧವಾರ ಶಿವಮೊಗ್ಗ ಆಗಮಿಸುತ್ತಿದ್ದ ಎರಡು ಖಾಸಗಿ ಬಸ್‌ ಅನ್ನು ಅಲ್ಲಿನ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ, ಬಸ್‌ನಲ್ಲಿದ್ದ 33 ಜನರೂ ಜಮಾತ್ ‌ಗೆ ತೆರಳಿದ್ದರು. ಅದರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆದು ಬಿಡುಗಡೆಗೊಂಡ ದಾಖಲೆಯೂ ಇದೆ.

Did 16 People Went For Dehli Jamath From Shikharipura

ಈ ತಂಡದಲ್ಲಿ ಪಟ್ಟಣದ 16 ಜನರಿದ್ದಾರೆ ಎನ್ನುವುದು ಪೊಲೀಸರು ನಡೆಸಿದ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನಡೆಸಿದ ವಿಚಾರಣೆ ವೇಳೆ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಬೇಕು, ಇನ್ನೆಷ್ಟು ಜನರು ಜಮಾತ್ ‌ಗೆ ತೆರಳಿದ್ದರು ಎನ್ನುವ ಕುರಿತು ತನಿಖೆ ನಡೆಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

English summary
Video of police questioning people who came from dehli viral in social media. It is said that 16 people from shikharipura went for dehli jamath,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X