ಕೊರೊನಾ ಸೋಂಕಿತ ಸ್ವಾಮೀಜಿಗೆ ಆಯುರ್ವೇದ ಚಿಕಿತ್ಸೆ ಕೊಡಿಸಲು ಶಿವಮೊಗ್ಗ ಜಿಲ್ಲಾಡಳಿತ ಸಮ್ಮತಿ

ಶಿವಮೊಗ್ಗ, ಜೂನ್ 17: ತಮಗೆ ಆಯುರ್ವೇದ ಚಿಕಿತ್ಸೆ ಕೊಡಿಸಬೇಕೆಂದು ಈಚೆಗೆ ಮನವಿ ಮಾಡಿದ್ದ ಕೊರೊನಾ ಸೋಂಕಿತ ಸ್ವಾಮೀಜಿಯೊಬ್ಬರಿಗೆ ಸ್ಪಂದಿಸಿರುವ ಶಿವಮೊಗ್ಗ ಜಿಲ್ಲಾಡಳಿತ, ಆಯುಷ್ ಇಲಾಖೆ ಆರೋಗ್ಯ ಮಂತ್ರಾಲಯ ಸಲಹೆ ಪಡೆದು ಅಧಿಕೃತವಾಗಿ ಸ್ವಾಮೀಜಿಗೆ ಆಯುರ್ವೇದ ಚಿಕಿತ್ಸೆ ಕೊಡಿಸಲು ಮುಂದಾಗಿದೆ.

Recommended Video

      ಕೇರಳ ನಂತರ ಒಡಿಶಾದಲ್ಲಿ ಎರಡು ಆನೆಗಳ ಸಾವು | Orissa | Oneindia Kannada

      ಈ ಕುರಿತು ಸ್ವಾಮೀಜಿ ಅವರು ಮಾಧ್ಯಮ ಪ್ರಕಟಣೆ ನೀಡಿದ್ದಾರೆ. "ನನ್ನ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿ, ನನಗೆ ಆಯುರ್ವೇದ ಚಿಕಿತ್ಸೆ ಪಡೆಯಲು ಅವಕಾಶ ನೀಡಿದೆ. ನಾಲ್ಕೈದು ದಿನಗಳ ಹಿಂದೆಯೇ ಆಯುರ್ವೇದ ಚಿಕಿತ್ಸೆ ಕೊಡಿಸುವಂತೆ ಪ್ರಧಾನ ಮಂತ್ರಿ, ಮುಖ್ಯಮಂತ್ರಿಗಳಾದಿಯಾಗಿ ಜಿಲ್ಲಾಡಳಿತಕ್ಕೂ ಮನವಿ ಸಲ್ಲಿಸಿದ್ದೆ. ಈ ಮನವಿಯನ್ನು ಪುರಸ್ಕರಿಸಲು ಕಾನೂನು ತೊಡಕುಗಳ ಕಾರಣ ಜಿಲ್ಲಾಡಳಿತ ಹಿಂದೇಟು ಹಾಕಿತ್ತು. ಇದೀಗ ಆಯುರ್ವೇದ ಚಿಕಿತ್ಸೆ ಆರಂಭಿಸಲು ಅನುಮತಿ ನೀಡಿದೆ" ಎಂದು ತಿಳಿಸಿದ್ದಾರೆ.

      ಜಿಲ್ಲಾ ಆಯುಷ್ ಅಧಿಕಾರಿ ಡಾ. ಎ.ಎಸ್.ಪುಷ್ಪ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಅವರ ಸೂಚನೆ ಮೇರೆಗೆ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಆಯುಷ್ ಇಲಾಖೆಯಲ್ಲಿ ಹಿರಿಯ ವೈದ್ಯಾಧಿಕಾರಿ ಡಾ.ಸಿ.ಎ.ಹಿರೇಮಠ ಅವರು ಇಂದು ತಪಾಸಣೆ ಮಾಡಿ ಆಯುರ್ವೇದ ಚಿಕಿತ್ಸೆ ನೀಡಲು ಆರಂಭಿಸಿದ್ದಾರೆ.

      Shivamogga District Administration Agreed Ayurvedic Treatment To Swamiji Infected With Coronavirus

      "ನಮ್ಮ ದೇಶದ ಸನಾತನ ಪರಂಪರೆಯಲ್ಲಿ ಬಂದಿರುವ, ಮಹರ್ಷಿ ಪ್ರಣೀತ ಆಯುರ್ವೇದ ಚಿಕಿತ್ಸೆಗೆ ಅನುವು ಮಾಡಿಕೊಟ್ಟಿದೆ. ರಾಜ್ಯದಲ್ಲಿ ಇದೇ ಮೊದಲು ಕೊರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆಗೆ ಮುಂದಾಗಿದ್ದು ಸಂತಸದ ವಿಷಯವಾಗಿದೆ" ಎಂದು ಸ್ವಾಮೀಜಿ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+