ಮುಂಗಾರು ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತ ಸಜ್ಜು: ಶಿವಮೊಗ್ಗ ಡಿಸಿ
ಶಿವಮೊಗ್ಗ, ಜೂನ್ 2: ಮುಂಗಾರಿನ ಅವಧಿಯಲ್ಲಿ ಉಂಟಾಗಬಹುದಾದ ಎಲ್ಲಾ ಸಂಭಾವ್ಯ ಅಪಾಯಗಳನ್ನು ಎದುರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ ಮುಂಗಾರು ಅವಧಿಯಲ್ಲಿ ಉಂಟಾಗಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ, ಈ ಬಾರಿ ಮೊದಲೇ ಎಲ್ಲಾ ಸಿದ್ಧತೆಗಳನ್ನು ನಡೆಸಬೇಕು. ಜಿಲ್ಲಾಡಳಿತದ ಬಳಿ ಲಭ್ಯವಿರುವ ಬೋಟು, ರಕ್ಷಣಾ ಕವಚಗಳು, ಎಲ್ಲಾ ಸಾಧನ-ಸಲಕರಣೆಗಳನ್ನು ಪರಿಶೀಲಿಸಬೇಕು ಎಂದರು.

ಅತಿವೃಷ್ಟಿಯಿಂದ ಹಾನಿಗೊಳಗಾಗುವ ಗ್ರಾಮಗಳನ್ನು ಈಗಲೇ ಗುರುತಿಸಬೇಕು. ತಾಲ್ಲೂಕಿನಲ್ಲಿ ಲಭ್ಯವಿರುವ ರಕ್ಷಣಾ ಸಾಮಾಗ್ರಿ, ಸಲಕರಣೆಗಳ ಪಟ್ಟಿಯನ್ನು ಸಿದ್ಧಪಡಿಸಿ, ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಮಳೆಗೆ ಸುಲಭವಾಗಿ ಕುಸಿಯಬಹುದಾದ ಮನೆ, ಕಟ್ಟಡಗಳನ್ನು ಗುರುತಿಸಿ ತೆರವು ಅಥವಾ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಡಳಿತದ ವತಿಯಿಂದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ 6 ಬೋಟುಗಳು, 25 ರಕ್ಷಣಾ ಕವಚಗಳು, ಮುರಿದು ಬೀಳುವ ಮರಗಳನ್ನು ತೆರವುಗೊಳಿಸಲು 50 ಟ್ರೀ ಕಟ್ಟರ್ ಗಳನ್ನು ನೀಡಲಾಗಿದೆ. ಇದರೊಂದಿಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಲು ಹಲವಾರು ಸಾಹಸಿ ಸಂಘ ಸಂಸ್ಥೆಗಳು ಮುಂದೆ ಬಂದಿದ್ದು, ಎಲ್ಲರ ಸಹಕಾರವನ್ನು ಪಡೆಯಬೇಕು. ಇದಕ್ಕಾಗಿ ಸಂಘ-ಸಂಸ್ಥೆಗಳ ವಿವರ, ಅವರಲ್ಲಿ ಲಭ್ಯವಿರುವ ರಕ್ಷಣಾ ಸಲಕರಣೆಗಳ ವಿವರಗಳನ್ನು ಪಟ್ಟಿ ಮಾಡಬೇಕು ಎಂದರು.

ಪ್ರವಾಹ ನೀರು ಸುಲಭವಾಗಿ ನುಗ್ಗಬಹುದಾದ ತಗ್ಗು ಪ್ರದೇಶದಲ್ಲಿರುವ ಜನರಿಗೆ ಈಗಾಗಲೇ ಸೂಚನೆಗಳನ್ನು ನೀಡಬೇಕು. ಒಂದು ವೇಳೆ ಜನರನ್ನು ತುರ್ತಾಗಿ ಸ್ಥಳಾಂತರಿಸುವ ಸಂದರ್ಭ ಬಂದರೆ ಅವರಿಗೆ ತಾತ್ಕಾಲಿಕ ಪುನರ್ವಸತಿಗಾಗಿ ಎಲ್ಲಾ ತಾಲೂಕುಗಳಲ್ಲಿ ಈಗಲೇ ಗುರುತಿಸಿ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಾಳಿ, ಮಳೆಗೆ ಉರುಳಿ ಬೀಳುವ ವಿದ್ಯುತ್ ಕಂಬಗಳನ್ನು ತಕ್ಷಣ ದುರಸ್ತಿ ಮಾಡಲು ಸಿದ್ದತೆ ಮಾಡಬೇಕು. ಇದಕ್ಕಾಗಿ ಅಗತ್ಯ ಪ್ರಮಾಣದ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು, ತಂತಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಮಳೆಯಿಂದ ಸಾವು-ನೋವುಗಳು ಸಂಭವಿಸದಂತೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಹೇಳಿದರು.
ಅತಿವೃಷ್ಟಿ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಕೆರೆಯಲ್ಲಿ ಆಯೋಜಿಸಲಾಗಿರುವ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮತ್ತಿತರರು ಇದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications