ಶರಾವತಿ ಯೋಜನೆ ಅನ್ನೋದು ತುಘಲಕ್ ದರ್ಬಾರ್ ಇದ್ದಂತೆ
ಶಿವಮೊಗ್ಗ, ಜುಲೈ 14: ಶರಾವತಿ ನೀರನ್ನು ಬೆಂಗಳೂರಿಗೆ ಒಯ್ಯುವ ಪ್ರಯತ್ನ ತುಘಲಕ್ ದರ್ಬಾರ್ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಶ್ರೀಗಳು ನುಡಿದರು.
ಸಾಗರದ ಶ್ರೀರಾಘವೇಶ್ವರ ಭವನದಲ್ಲಿ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮಾರ್ಗದರ್ಶನ ಸಭೆಯಲ್ಲಿ ಮಾತನಾಡಿದ ಅವರು, ನಾಡಿನ ನೆಲ- ಜಲ ರಕ್ಷಣೆಗೆ ಶ್ರೀಮಠ ದಶಕಗಳಿಂದಲೂ ಶ್ರಮಿಸುತ್ತಿದೆ ಎಂದು ಹೇಳಿದರು.
ನಿಸರ್ಗದ ಮೇಲೆ ದೌರ್ಜನ್ಯವನ್ನು ಸಹಿಸೆವು. ಈ ಹುಚ್ಚು ಯೋಜನೆಗೆ ಶ್ರೀಮಠದ ಖಡಾಖಂಡಿತ ವಿರೋಧವಿದೆ. ಶರಾವತಿ ವಿಚಾರದಲ್ಲಿ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟರೆ, ಶ್ರೀಮಠ ಹಾಗೂ ಶ್ರೀಮಠದ ಕಾರ್ಯಕರ್ತರು ಇದನ್ನು ವಿರೋಧಿಸಲು ನೂರು ಹೆಜ್ಜೆ ಮುಂದಿಡುತ್ತಾರೆ ಎಂದು ಶ್ರೀಗಳು ಘೋಷಿಸಿದರು.

ಎಲ್ಲ ಪ್ರದೇಶಗಳ ಜನರ ಬದುಕಿನ ಬಗೆಗೂ ನಮಗೆ ಗೌರವಿದೆ. ಆದರೆ ದೇವರು ಅಲ್ಲಲ್ಲಿಗೆ ಅಲ್ಲಲ್ಲೇ ಸಂಪತ್ತು ಕರುಣಿಸಿದ್ದಾನೆ. ಅದು ಅಲ್ಲೇ ಸದ್ಬಳಕೆಯಾಗಬೇಕು ಎಂದು ಶ್ರೀಗಳು ಅಭಿಪ್ರಾಯಪಟ್ಟರು.
ಶರಾವತಿ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎನ್ನುವುದು ಶ್ರೀಮಠದ ದೃಢ ನಿರ್ಧಾರ. ಪ್ರಕೃತಿಗೆ ಹಾನಿ ಮಾಡುವ ಯಾವ ಕಾರ್ಯವನ್ನೂ ನಾವು ಒಪ್ಪುವುದಿಲ್ಲ. ಇದು ಯಾರ ಒಳಿತಿಗೂ ಇರುವ ಯೋಜನೆಯಲ್ಲ ಎಂದು ರಾಘವೇಶ್ವರ ಶ್ರೀಗಳು ಸ್ಪಷ್ಟ ಪಡಿಸಿದರು.
ಶರಾವತಿ ನೀರನ್ನು ಬೆಂಗಳೂರಿಗೆ ತರುವ ಪ್ರಸ್ತಾವಿತ ಯೋಜನೆ ಅವೈಜ್ಞಾನಿಕ ಹಾಗೂ ಅತಾರ್ಕಿಕ. ವಿಶ್ವದಲ್ಲೇ ಅಪರೂಪದ ಜೀವವೈವಿಧ್ಯ ತಾಣ ಎನಿಸಿದ ಪಶ್ಚಿಮಘಟ್ಟ ಪರಿಸರಕ್ಕೆ ಈ ಯೋಜನೆ ಮಾರಕ. ಕಾರ್ಯಸಾಧುವಲ್ಲದ ಈ ಪ್ರಸ್ತಾವಿತ ಯೋಜನೆಯನ್ನು ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಎಂದು ರಾಘವೇಶ್ವರ ಶ್ರೀಗಳು ಹಿಂದೆಯೂ ಒತ್ತಾಯಿಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications