Get Updates
Get notified of breaking news, exclusive insights, and must-see stories!

ಶರಾವತಿ ಯೋಜನೆ ಅನ್ನೋದು ತುಘಲಕ್ ದರ್ಬಾರ್ ಇದ್ದಂತೆ

ಶಿವಮೊಗ್ಗ, ಜುಲೈ 14: ಶರಾವತಿ ನೀರನ್ನು ಬೆಂಗಳೂರಿಗೆ ಒಯ್ಯುವ ಪ್ರಯತ್ನ ತುಘಲಕ್ ದರ್ಬಾರ್ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಶ್ರೀಗಳು ನುಡಿದರು.

ಸಾಗರದ ಶ್ರೀರಾಘವೇಶ್ವರ ಭವನದಲ್ಲಿ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮಾರ್ಗದರ್ಶನ ಸಭೆಯಲ್ಲಿ ಮಾತನಾಡಿದ ಅವರು, ನಾಡಿನ ನೆಲ- ಜಲ ರಕ್ಷಣೆಗೆ ಶ್ರೀಮಠ ದಶಕಗಳಿಂದಲೂ ಶ್ರಮಿಸುತ್ತಿದೆ ಎಂದು ಹೇಳಿದರು.

ನಿಸರ್ಗದ ಮೇಲೆ ದೌರ್ಜನ್ಯವನ್ನು ಸಹಿಸೆವು. ಈ ಹುಚ್ಚು ಯೋಜನೆಗೆ ಶ್ರೀಮಠದ ಖಡಾಖಂಡಿತ ವಿರೋಧವಿದೆ. ಶರಾವತಿ ವಿಚಾರದಲ್ಲಿ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟರೆ, ಶ್ರೀಮಠ ಹಾಗೂ ಶ್ರೀಮಠದ ಕಾರ್ಯಕರ್ತರು ಇದನ್ನು ವಿರೋಧಿಸಲು ನೂರು ಹೆಜ್ಜೆ ಮುಂದಿಡುತ್ತಾರೆ ಎಂದು ಶ್ರೀಗಳು ಘೋಷಿಸಿದರು.

Diverting Sharavathi water into Bengaluru is like Tughalak Durbar: Raghaveshwara Swamiji

ಎಲ್ಲ ಪ್ರದೇಶಗಳ ಜನರ ಬದುಕಿನ ಬಗೆಗೂ ನಮಗೆ ಗೌರವಿದೆ. ಆದರೆ ದೇವರು ಅಲ್ಲಲ್ಲಿಗೆ ಅಲ್ಲಲ್ಲೇ ಸಂಪತ್ತು ಕರುಣಿಸಿದ್ದಾನೆ. ಅದು ಅಲ್ಲೇ ಸದ್ಬಳಕೆಯಾಗಬೇಕು ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಶರಾವತಿ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎನ್ನುವುದು ಶ್ರೀಮಠದ ದೃಢ ನಿರ್ಧಾರ. ಪ್ರಕೃತಿಗೆ ಹಾನಿ ಮಾಡುವ ಯಾವ ಕಾರ್ಯವನ್ನೂ ನಾವು ಒಪ್ಪುವುದಿಲ್ಲ. ಇದು ಯಾರ ಒಳಿತಿಗೂ ಇರುವ ಯೋಜನೆಯಲ್ಲ ಎಂದು ರಾಘವೇಶ್ವರ ಶ್ರೀಗಳು ಸ್ಪಷ್ಟ ಪಡಿಸಿದರು.

ಶರಾವತಿ ನೀರನ್ನು ಬೆಂಗಳೂರಿಗೆ ತರುವ ಪ್ರಸ್ತಾವಿತ ಯೋಜನೆ ಅವೈಜ್ಞಾನಿಕ ಹಾಗೂ ಅತಾರ್ಕಿಕ. ವಿಶ್ವದಲ್ಲೇ ಅಪರೂಪದ ಜೀವವೈವಿಧ್ಯ ತಾಣ ಎನಿಸಿದ ಪಶ್ಚಿಮಘಟ್ಟ ಪರಿಸರಕ್ಕೆ ಈ ಯೋಜನೆ ಮಾರಕ. ಕಾರ್ಯಸಾಧುವಲ್ಲದ ಈ ಪ್ರಸ್ತಾವಿತ ಯೋಜನೆಯನ್ನು ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಎಂದು ರಾಘವೇಶ್ವರ ಶ್ರೀಗಳು ಹಿಂದೆಯೂ ಒತ್ತಾಯಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+