'ಗೀತಾ ಶಿವರಾಜ್ಕುಮಾರ್ ರಾಜಕೀಯಕ್ಕೆ ಬಂದು ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ'
ಶಿವಮೊಗ್ಗ, ಏಪ್ರಿಲ್ 02: ಡಾ. ರಾಜ್ಕುಮಾರ್ ಅವರಿಗೆ ನಾವೆಲ್ಲಾ ಗೌರವ ಕೊಡುತ್ತೇವೆ. ಇಲ್ಲಿ ಇರುವವರೆಲ್ಲಾ ಗೌರವ ಕೊಡುತ್ತೇವೆ. ಬಂಗಾರಪ್ಪ ಅವರನ್ನು ಸಹ ಅತ್ಯಂತ ಪುಣ್ಯಾತ್ಮ ಎಂದು ಸ್ಮರಿಸುತ್ತೇವೆ. 80ರ ದಶಕದಲ್ಲಿ ರಾಜ್ ಕುಮಾರ್ ಅವರು ರಾಜಕೀಯಕ್ಕೆ ಬರಬೇಕು ಎಂದು ಹೋರಾಟಗಳು ನಡೆಯುತ್ತಿದ್ದವು. ಎ.ಕೆ ಸುಬ್ಬಯ್ಯ ಸೇರಿ ಎಲ್ಲರೂ ಕರೆದಿದ್ದರು.
ಆದರೆ ರಾಜ್ಕುಮಾರ್ ನಾನು ಮತ್ತು ನನ್ನ ಕುಟುಂಬ ಎಂದೂ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿದ್ದರು. ಇವರತ್ತು ಇವರು ರಾಜಕೀಯಕ್ಕೆ ಬಂದು ಆ ಕುಟುಂಬದ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ಮಾಜಿ ಶಾಸಕ ಹರತಾಳು ಹಾಲಪ್ಪ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಕೂಡ ಚುನಾವಣೆಗೆ ನಿಂತಿದ್ದರು. ಆ ಬಳಿಕ ಅವರನ್ನು ಕ್ಷೇತ್ರದಲ್ಲಿ ನೋಡಿಯೇ ಇಲ್ಲ. ನಾನಂತೂ ನೋಡಿಲ್ಲ. ನೀವು ನೋಡಿದ್ದೀರಾ. ಹಾಗಾಗಿ ರಾಜ್ಕುಮಾರ್ ಕುಟುಂಬಕ್ಕೆ ನಾವು ಗೌರವ ನೀಡುತ್ತೇವೆ, ಬಂಗಾರಪ್ಪ ಅವರ ಕುಟುಂಬಕ್ಕೆ ಗೌರವ ಕೊಡುತ್ತೇವೆ. ಆದರೆ ರಾಜಕೀಯವಾಗಿ ಆ ಅಭ್ಯರ್ಥಿಯನ್ನು ನಾವು ಬೆಂಬಲಿಸುವ ಪ್ರಶ್ನೆಯೇ ಇಲ್ಲ.. ಬೆಂಬಲಿಸಬಾರದು ಎಂದರು.
ಅವರನ್ನು ಗೆಲ್ಲಿಸಿದರೆ ಸಮಸ್ಯೆಗಳು ಬಗೆಹರಿಯುವುದಿಲ್ಲ. ಹೀಗಾಗಿ ರಾಘವೇಂದ್ರ ಅವನ್ನು ಗೆಲ್ಲಿಸಿಕೊಳ್ಳೋಣ. ಕೆಲಸ ಮಾಡಿಸಿಕೊಳ್ಳೋಣ. ಕ್ಷೇತ್ರದ ಅಭಿವೃದ್ಧಿಯನ್ನು ಸಾಧಿಸೋಣ. ರಾಘಣ್ಣ ನಮ್ಮ ಹತ್ತಿರದ ಅಭ್ಯರ್ಥಿ, ಅವರು ಕೆಲಸ ಮಾಡಿಲ್ಲ ಎಂದರೆ ಅವರ ಮನೆಯ ಬಳಿ ಹೋಗಿ ಗಲಾಟೆ ಮಾಡಲು, ಕೂತು ಮಾತನಾಡಲು ಅವಕಾಶ ಇದೆ. ಆದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಭೇಟಿಯಾಗಲು ಸಾಧ್ಯವಿದೆಯೇ..? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಮನೆಗೆ ಹೋಗಿ ನಮ್ಮ ಸಮಸ್ಯೆಗೆ ಪರಿಹಾರ ಕೇಳುವುದು ಹೇಗೆ. ದೊಡ್ಡ ಗೇಟ್ ಹಾಕಿರುತ್ತಾರೆ. ದೊಡ್ಡ ನಾಯಿಗಳನ್ನು ಬಿಟ್ಟಿರುತ್ತಾರೆ. ಈ ವಿಚಾರವನ್ನು ನಾನು ನೋಡಿದ್ದೇನೆ ಎಂದು ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ವಿರುದ್ಧ ವ್ಯಂಗ್ಯವಾಡಿದರು.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications