ಶಿವಮೊಗ್ಗದಲ್ಲಿ ಡಿಆರ್ಡಿಓ ಪ್ರಯೋಗಾಲಯ ಸ್ಥಾಪನೆಗೆ ಕೇಂದ್ರದ ಒಪ್ಪಿಗೆ
ಶಿವಮೊಗ್ಗ, ಸೆಪ್ಟೆಂಬರ್ 18: ಶಿವಮೊಗ್ಗದಲ್ಲಿ ಡಿಆರ್ಡಿಓದ ಸ್ವತಂತ್ರ ಪ್ರಯೋಗಾಲಯ ಸ್ಥಾಪನೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಈ ಪ್ರಯೋಗಾಲಯ ನಿರ್ಮಾಣವಾಗಲಿದೆ.
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ್ದರು. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಪ್ರಯೋಗಾಲಯ ಸ್ಥಾಪನೆ ಮಾಡಬೇಕು ಎಂದು ಮನವಿ ಸಲ್ಲಿಸಿದರು.
ವಿಜಯೇಂದ್ರ ಸೂಪರ್ ಸಿಎಂ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು!
ಡಿಆರ್ಡಿಓ ಸಂಶೋಧನಾ ಘಟಕವನ್ನು ಕುವೆಂಪು ವಿಶ್ವವಿದ್ಯಾಲಯ ಆವರಣದಲ್ಲಿ ಸ್ಥಾಪನೆ ಮಾಡಲು ಕೇಂದ್ರ ಒಪ್ಪಿಗೆ ನೀಡಿದೆ. ಯಡಿಯೂರಪ್ಪ ಅವರು, ಸಾಕಷ್ಟು ಸಂಖ್ಯೆಯ ತಂತ್ರಜ್ಞರು ಮತ್ತು ವಿಜ್ಞಾನಿಗಳ ತಂಡವನ್ನು ಹೊಂದಿರುವ ಪ್ರಯೋಗಾಲು ಸ್ಥಾಪನೆ ಆಗಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಶಿವಮೊಗ್ಗ:12 ಪಾರಂಪರಿಕ ಕಟ್ಟಡಗಳ 3ಡಿ ಡಿಜಿಟಲೀಕರಣ ಕಾರ್ಯಕ್ಕೆ ಚಾಲನೆ
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಿಲಿಟರಿ ಬಳಕೆಗಾಗಿ ನೈಸರ್ಗಿಕ ಪರಿಹಾರ ಕ್ರಮಗಳನ್ನು ಅನ್ವೇಷಣೆ ಮಾಡಬಹುದಾಗಿದೆ. ಪ್ರಯೋಗಾಲಯದ ನಿರ್ಮಾಣಕ್ಕೆ ಅಗತ್ಯವಾದ ಭೂಮಿ ಮುಂತಾದ ಮೂಲ ಸೌಕರ್ಯಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆ.
ಶಿವಮೊಗ್ಗ: ನರಸೀಪುರದ ನಾಟಿ ಔಷಧ ವಿತರಣೆಗೆ ಮತ್ತೆ ನಿರ್ಬಂಧ, ಹೊರಗಿನವರಿಗೆ ಪ್ರವೇಶವಿಲ್ಲ
ಶಿವಮೊಗ್ಗ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ತವರು ಜಿಲ್ಲೆ. ಅವರು ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ಶಾಸಕರು. ಯಡಿಯೂರಪ್ಪ ಪುತ್ರ ಬಿ. ವೈ. ರಾಘವೇಂದ್ರ ಶಿವಮೊಗ್ಗ ಕ್ಷೇತ್ರದ ಸಂಸದರು.