ರಜೆ ಅನುಭವಿಸಿದ್ದೀರಿ, ಈಗ ಚೆನ್ನಾಗಿ ಕಲಿಯಿರಿ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಶಿವಮೊಗ್ಗ, ಜನವರಿ 20: ಈಗಾಗಲೇ ನೀವು ಬಹಳಷ್ಟು ರಜೆಯನ್ನು ಅನುಭವಿಸಿದ್ದೀರಿ. ಈಗ ಒಳ್ಳೆಯ ಶಾಲೆಯಲ್ಲಿ ಓದುವ ಭಾಗ್ಯ ನಿಮಗೆ ದೊರೆತಿದ್ದು, ಚೆನ್ನಾಗಿ ಕಲಿಯಿರಿ ಎಂದು ಶಾಲಾ ಮಕ್ಕಳಿಗೆ ಪ್ರಾಥಮಿಕ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರೆ ನೀಡಿದರು.
ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಹೊಸದಾಗಿ ಆರಂಭಿಸಲಾಗಿರುವ ಸ್ಮಾರ್ಟ್ ಕ್ಲಾಸ್ ವೀಕ್ಷಿಸಿ ಅವರು ಮಾತನಾಡಿದರು. ಜೂನ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಇನ್ನುಳಿದ 4-5 ತಿಂಗಳಲ್ಲಿ ಕೇವಲ ಓದಿನ ಕಡೆಗೆ ಮಾತ್ರ ಗಮನ ನೀಡಿ ಎಂದು ತಿಳಿ ಹೇಳಿದರು.
ಚೆನ್ನಾಗಿ ಕಲಿತರೆ ನಿಮಗೆ ಮಾತ್ರವಲ್ಲ, ನಿಮ್ಮ ತಂದೆ-ತಾಯಂದಿರಿಗೆ, ಶಿಕ್ಷಕರಿಗೆ ಎಲ್ಲರಿಗೂ ಸಂತೋಷ. ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣ ಎಸ್ಎಸ್ಎಲ್ಸಿಗೆ ಕೊನೆಯಾಗಬಾರದು, ಮುಂದೆಯೂ ಛಲದಿಂದ ಕಲಿಯಬೇಕು. ಶಾಲೆಗೆ ಉತ್ತಮ ಫಲಿತಾಂಶವನ್ನು ತನ್ನಿ ಎಂದು ಹಾರೈಸಿದರು.

ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಅವರು ಸ್ಮಾರ್ಟ್ ಕ್ಲಾಸ್ ಯೋಜನೆ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಒಟ್ಟು 45 ಶಾಲೆಗಳಲ್ಲಿ ಡಿಜಿಟಲ್ ಕ್ಲಾಸ್ ರೂಂ ಸಜ್ಜುಗೊಳಿಸಲಾಗಿದೆ. ಅತ್ಯಾಧುನಿಕ ಡಿಜಿಟಲ್ ಕ್ಲಾಸ್ನಲ್ಲಿ ಇಂಟರ್ ಆ್ಯಕ್ಟೀವ್ ಬೋರ್ಡ್, ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್, ಸಿಸಿ ಕ್ಯಾಮರಾ ಸೇರಿದಂತೆ ಎಲ್ಲಾ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಡಿಜಿಟಲ್ ಕ್ಲಾಸ್ರೂಂ ಬಳಕೆ ಬಗ್ಗೆ ಈಗಾಗಲೇ 300 ಶಿಕ್ಷಕರಿಗೆ ತರಬೇತಿಯನ್ನು ಸಹ ನೀಡಲಾಗಿದೆ ಎಂದು ಹೇಳಿದರು. ಸ್ಮಾರ್ಟ್ ಕ್ಲಾಸ್ನಿಂದಾಗಿ ನಮ್ಮ ಕಲಿಕೆಗೆ ಅನುಕೂಲವಾಗಿದೆ. ಪ್ರಾಯೋಗಿಕವಾಗಿ ನೋಡಿ ತಿಳಿದುಕೊಳ್ಳಲು ಸಾಧ್ಯವಾಗಿದೆ.

ವಿಡಿಯೋಗಳು ನಮ್ಮ ಕಲಿಕೆಯನ್ನು ಸುಲಭಗೊಳಿಸಿದೆ. ಇಂತಹ ಶಾಲೆಯಲ್ಲಿ ಕಲಿಯುತ್ತಿರುವುದು ಹೆಮ್ಮೆ ತಂದಿದೆ ಎಂದು ಏಳನೇ ತರಗತಿ ವಿದ್ಯಾರ್ಥಿನಿ ವೇದಿಕಾ ಸಚಿವರೊಂದಿಗೆ ಅನುಭವ ಹಂಚಿಕೊಂಡರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಪ್ರಮುಖರಾದ ಎಸ್.ಎನ್. ಚನ್ನಬಸಪ್ಪ.ಇದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications