ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಗರ: ಬಂಡಾಯ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಕಣಕ್ಕೆ

By Mahesh
|
Google Oneindia Kannada News

ಸಾಗರ(ಶಿವಮೊಗ್ಗ), ಏಪ್ರಿಲ್ 19: ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭೆ ಕ್ಷೇತ್ರದ ಟಿಕೆಟ್ ರಾಜಕೀಯ ತಾರಕಕ್ಕೇರಿ, ಬೇಳೂರು ಗೋಪಾಲಕೃಷ್ಣರಿಗೆ ಮಾರಕವಾಗಿದ್ದು ಎಲ್ಲರಿಗೂ ಗೊತ್ತೇ ಇದೆ.

ಭಾರತೀಯ ಜನತಾ ಪಕ್ಷದಿಂದ ಈ ಕ್ಷೇತ್ರದ ಟಿಕೆಟ್ ಹರತಾಳು ಹಾಲಪ್ಪ ಅವರಿಗೆ ಸಿಕ್ಕಿದೆ. ಇದರಿಂದ ಮನನೊಂದು ಕಣ್ಣೀರಿಟ್ಟಿದ್ದ ಮಾಜಿ ಶಾಸಕ ಗೋಪಾಲಕೃಷ್ಣ ಅವರು ಕೊನೆಗೆ ಬಂಡಾಯವೆದ್ದಿದ್ದಾರೆ.ಸಾಗರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಿಸಿದ್ದಾರೆ.

Beluru Gopalakrishna

ಟಿಕೆಟ್ ಗಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಬೇಳೂರು ಗೋಪಾಲ ಕೃಷ್ಣ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಹರತಾಳು ಹಾಲಪ್ಪರಿಗೆ ಟಿಕೆಟ್ ನೀಡಿರುವ ಹಿನ್ನಲೆಯಲ್ಲಿ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಗೋಪಾಲಕೃಷ್ಣ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರು.

ವಿಡಿಯೋ: ಟಿಕೆಟ್ ಸಿಗದೆ ಕಣ್ಣೀರಿಟ್ಟ ರಾಜಕಾರಣಿಗಳ ಪಟ್ಟಿವಿಡಿಯೋ: ಟಿಕೆಟ್ ಸಿಗದೆ ಕಣ್ಣೀರಿಟ್ಟ ರಾಜಕಾರಣಿಗಳ ಪಟ್ಟಿ

ಗೋಪಾಲಕೃಷ್ಣ ಅವರು ಬೆಂಬಲಿಗರ ಜತೆ ಸಭೆ ನಡೆಸಿ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಏಪ್ರಿಲ್ 22 ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಸಾಗರದಲ್ಲಿ ಸಚಿವ ಕಾಗೋಡು ತಿಮ್ಮಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಹರತಾಳು ಹಾಲಪ್ಪ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬೇಳೂರು ಗೋಪಾಲಕೃಷ್ಣ ಕೂಡ ಸ್ಪರ್ಧಿಸುತ್ತಿರುವುದರಿಂದ ಚುನಾವಣಾ ಕಣ ರಂಗೇರಲಿದೆ.

English summary
Elections 2018 :Former MLA Beluru Gopalakrishna has announced that he will contest from Saagra Assembly Constituency as BJP rebel candidate. Haratal Halappa (BJP) and Kagodu Thimmappa (Congress) other major candidates in the fray.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X