ಧಗಧಗನೆ ಹೊತ್ತಿ ಉರಿದ ಟ್ರಾಕ್ಟರ್: ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ, ಜನವರಿ 06: ಕರೆಂಟ್ ವೈರುಗಳು ಟ್ರಾಕ್ಟರ್ ಗೆ ತಗುಲಿ ಟ್ರ್ಯಾಕ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಟ್ರ್ಯಾಕ್ಟರ್ ಜತೆಗೆ ಸಾವಿರಗಟ್ಟಲೆ ಬೆಲೆ ಬಾಳುವ ಹುಲ್ಲು ಕೂಡ ಸುಟ್ಟು ಭಸ್ಮವಾದ ಘಟನೆ ಶನಿವಾರ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಹೊಳೆ ಬಸ್​ ಸ್ಟಾಪ್​ ಹತ್ತಿರದ ಎನ್​ಸಿಸಿ ಕಚೇರಿ ಪಕ್ಕದ ರಸ್ತೆಯಲ್ಲಿ, ಘಟನೆ ನಡೆದಿದೆ. ಮಹಾವೀರ ಗೋಶಾಲೆಗೆ ತೆಗೆದುಕೊಂಡು ಹೋಗುತ್ತಿದ್ದ ಹುಲ್ಲು ಬೆಂಕಿಗಾಹುತಿಯಾಗಿದೆ. ಬಿ.ಹೆಚ್.ರಸ್ತೆಯಿಂದ ಗೋಶಾಲೆಗೆ ತೆರಳುವ ರೋಡ್​​ನಲ್ಲಿ ಕರೆಂಟ್​ ವೈರ್​​ಗಳು ಕೆಳಗೆ ಜೋತು ಬಿದ್ದಿವೆ.

ಟ್ರಾಕ್ಟರ್ ರಸ್ತೆಗೆ ಎಂಟ್ರಿ ಕೊಡುತ್ತಿದ್ದಂತೆ, ಹುಲ್ಲಿಗೆ ವೈರ್ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕ್ಷಣಾರ್ಧದಲ್ಲೇ ತಪ್ಪಿತು ಭಾರೀ ಅನಾಹುತ: ಹುಲ್ಲಿಗೆ ಬೆಂಕಿ ಹೊತ್ತುಕೊಂಡಿದ್ದನ್ನು ಸ್ಥಳೀಯರು ತಿಳಿಸುತ್ತಿದ್ದಂತೆ, ಟ್ರಾಕ್ಟರ್ ಚಾಲಕ ಎಚ್ಚೆತ್ತುಕೊಂಡಿದ್ದಾನೆ. ಕೂಡಲೇ ಟ್ರಾಕ್ಟರ್​​ ಟ್ರಾಲಿ ಮತ್ತು ಎಂಜಿನ್ ಬೇರ್ಪಡಿಸಿದ್ದಾನೆ. ಇನ್ನು, ಟ್ರಾಕ್ಟರ್​ ನಿಲ್ಲಿಸಿದ ಜಾಗದ ಪಕ್ಕದಲ್ಲೇ ಅಂಗನವಾಡಿ ಕೇಂದ್ರವಿದೆ. ವಿಷಯ ಗೊತ್ತಾಗುತ್ತಿದ್ದಂತೆ ಪೋಷಕರು ಸ್ಥಳದಲ್ಲಿ ಜಮಾಯಿಸಿದರು.

Electricity wire causes burn tractor

ಬೆಂಕಿ ಹೊತ್ತುಕೊಂಡ ವಿಚಾರ ಗೊತ್ತಾಗುತ್ತಿದ್ದಂತೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದರು. ಪುರಲೆಯ ಉಮೇಶ್​ ಅವರಿಗೆ ಸೇರಿದ ಟ್ರಾಕ್ಟರ್​ನಲ್ಲಿ, ಗೋಶಾಲೆಗೆ ತೆಗೆದುಕೊಂಡು ಹೋಗುತ್ತಿದ್ದ, ಸುಮಾರು 20 ಸಾವಿರ ಮೌಲ್ಯದ ಹುಲ್ಲು ಸುಟ್ಟು ಭಸ್ಮವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+