ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿ ಪ್ರಧಾನಿಯಾದ್ರೆ ದೇವೇಗೌಡ್ರು ದೇಶ ಬಿಡ್ತೀನಿ ಅಂದಿದ್ರು, ಬಿಟ್ಟಿದ್ದಾರಾ?: ಈಶ್ವರಪ್ಪ ವಾಗ್ದಾಳಿ

|
Google Oneindia Kannada News

Recommended Video

Lok Sabha Elections 2019: ದೇವೇಗೌಡರಿಗೆ ಪ್ರಶ್ನೆ ಕೇಳಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಏ.12: ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ಈ ಹಿಂದೆ ಹೇಳಿದ್ದರು ದೇಶಬಿಟ್ಟಿದ್ದಾರಾ ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದು ದೇವೇಗೌಡರು ಹೇಳಿದ್ದರು, ಆದರೆ ಅವರು ಇಲ್ಲೇ ಇದ್ದಾರೆ. ಈಗ ಅವರ ಪುತ್ರ ರೇವಣ್ಣ ಅವರು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಹೇಳಿದ್ದಾರೆ ಅದೂ ಕೂಡ ಸತ್ಯಕ್ಕೆ ದೂರವಾಗಿದ್ದು ಎಂದರು.

ದೇವೇಗೌಡ-ಸಿದ್ದರಾಮಯ್ಯ ಹಾವು-ಮುಂಗುಸಿ ಇದ್ದಂತೆ ಅಂದ ಈಶ್ವರಪ್ಪದೇವೇಗೌಡ-ಸಿದ್ದರಾಮಯ್ಯ ಹಾವು-ಮುಂಗುಸಿ ಇದ್ದಂತೆ ಅಂದ ಈಶ್ವರಪ್ಪ

ರೇವಣ್ಣ ಅವರದ್ದೂ ಏನೂ ನಡೆಯುವುದಿಲ್ಲ, ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಎರಡಂಕಿಯನ್ನೂ ಮುಟ್ಟಲ್ಲ, ರೇವಣ್ಣ ಅವರ ಮಾತೂ ಸತ್ಯವಾಗಲ್ಲ ಅಪ್ಪನಂತೆ ಸುಳ್ಳು ಹೇಳುವುದನ್ನು ಮಗ ಬಿಡಬೇಕು ಎಂದು ಹೇಳಿದರು.

Eshwarappa asks is Deve gowda left the country after 2014 election

ಎರಡು ಸ್ಥಾನ ಉಳಿಸಿಕೊಳ್ಳಲಿ ಸಾಕು: ದೇವೇಗೌಡರಿಗೆ ಈಶ್ವರಪ್ಪ ಟಾಂಗ್ಎರಡು ಸ್ಥಾನ ಉಳಿಸಿಕೊಳ್ಳಲಿ ಸಾಕು: ದೇವೇಗೌಡರಿಗೆ ಈಶ್ವರಪ್ಪ ಟಾಂಗ್

ಯಾರ ಕಡೆಗೆ ದಂಡ ಇರುತ್ತೋ ಅವರ ಮಾತು ನಡೆಯುತ್ತದೆ. ಮೋದಿಯ ಶಕ್ತಿ ಗೊತ್ತಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮೋದಿಯವರನ್ನು ಹೊಗಳಿದ್ದಾರೆ ಎಂದು ನುಡಿದರು.

English summary
Lok sabha elections 2019: BJP MLA KS Eshwarappa asks that Is Deve gowda left the country after 2014 Lok sabha elections. Deve gowda said that he will left the country if Narendra Modi become Prime minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X