ಡಾ.ನಿರ್ಮಲಾನಂದ ಶ್ರೀಗಳ ವಿರುದ್ಧ ಮಾತನಾಡಲಾರೆ: ಈಶ್ವರಪ್ಪ
ಶಿವಮೊಗ್ಗ, ಸೆಪ್ಟೆಂಬರ್.16: ಕಾರ್ಯಕ್ರಮವೊಂದರಲ್ಲಿ ಆದಿಚುಂಚನಗಿರಿ ಮಠಾಧೀಶರಾದ ಡಾ.ನಿರ್ಮಲಾನಂದ ಶ್ರೀಗಳು 36 ಶಾಸಕರನ್ನು ಇಟ್ಟುಕೊಂಡು ಸರ್ಕಾರ ರಚನೆ ಮಾಡುವುದರ ಹಿಂದೆ ದೈವ ಶಕ್ತಿ ಇದೆ. ಇದನ್ನ ಕೆಡವಲು ಹೋದವರು ಕೇವಲ ಒಬ್ಬರಿಗೆ ಮಾಡುವ ದ್ರೋಹವಲ್ಲ ಅದು ದೈವಕ್ಕೆ ಮಾಡುವ ಮೋಸ ಎಂದು ಹೇಳಿಕೆ ನೀಡಿದ್ದರು.
ಈ ಕುರಿತು ಈಶ್ವರಪ್ಪ ಅವರ ಬಳಿ ಮಾಧ್ಯಮದವರು ಪ್ರಸ್ತಾಪಿಸಿದಾಗ ಸ್ವಾಮಿಗಳ ಬಗ್ಗೆ ನನಗೆ ಅಪಾರ ಗೌರವವಿದೆ. ಅವರ ವಿರುದ್ಧ ಮಾತನಾಡಲಾರೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೆಡಿಪಿ ಸಭೆ ಮುಗಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ ಶಕ್ತಿ ಇದ್ದರೆ ಸರ್ಕಾರ ಉಳಿಸಿಕೊಳ್ಳಲಿ.

ರಾಜ್ಯ ಬಿಜೆಪಿಯು ಕಿಂಗ್ ಪಿನ್ ಗಳನ್ನು ಬಳಸಿಕೊಂಡು ಸರ್ಕಾರವನ್ನ ಬೀಳಿಸತೊಡಗಿದೆ ಎಂಬ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರ ಸ್ವಾಮಿ ಅವರಿಗೆ ಶಕ್ತಿ ಇದ್ದರೆ ಸರ್ಕಾರ ಉಳಿಸಿಕೊಳ್ಳಿ. ಇಲ್ಲವೆಂದಾದರೆ ಬೇರೆಯವರ ಮೇಲೆ ಆಪಾದನೆ ಮಾಡುವುದನ್ನು ಬಿಡಲಿ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ಸರ್ಕಾರ ಉರುಳಲಿದೆ ಎಂದು ನಮ್ಮ ಪಕ್ಷದ ನಾಯಕರು ಹೇಳಿಲ್ಲ. ಆದರೆ ಎರಡು ದಿನ ಕಾದು ನೋಡಿ ಎಂದಿದ್ದು ರಾಜ್ಯ ಸರ್ಕಾರದಲ್ಲಿ ಏನೇನು ಆಗುತ್ತೆ ಎಂಬುದರ ಬಗ್ಗೆ ಹೇಳಿದ್ದು, ಕಾಂಗ್ರೆಸ್ ನವರು ಕಾಂಗ್ರೆಸ್ ನ ಪಾಲುದಾರಿಕೆ ಇರುವ ಸರ್ಕಾರಕ್ಕೆ ಯಾವ್ಯಾವ ರೀತಿಯ ತೊಂದರೆ ಕೊಡುತ್ತಿದ್ದಾರೆಂದು ನಾನಂತು ಇತಿಹಾಸದಲ್ಲಿಯೇ ನೋಡಿರಲಿಲ್ಲ.
ಕಾಂಗ್ರೆಸ್ ನಲ್ಲಿ ಕಾಂಗ್ರೆಸ್ ನವರೇ ಗುಂಪುಗಾರಿಕೆ ನಡೆಸುತ್ತಿದ್ದಾರೆ. ಹಾಗಾಗಿ ಈ ಸರ್ಕಾರ ಬಿದ್ದು ಹೋಗುತ್ತದೆ ಎಂಬ ನಿರೀಕ್ಷೆಯಲ್ಲಿ ಜನ ಇದ್ದಾರೆ. ರಾಜ್ಯ ಸರ್ಕಾರವನ್ನು ಬಿಜೆಪಿ ಪಕ್ಷ ಉರುಳಿಸಲು ಪ್ರಯತ್ನ ಪಡುವುದಿಲ್ಲ. ಆದರೆ ಅದಾಗೆ ಪಥನಗೊಂಡರೆ ಅದಕ್ಕೆ ನಾವು ಜವಬ್ದಾರರಲ್ಲ ಎಂದು ಈಶ್ವರಪ್ಪ ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications