ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ DRDO ಸಂಶೋಧನಾ ಕೇಂದ್ರ: ಉನ್ನತ ವಿಜ್ಞಾನಿಗಳ ತಂಡ ಭೇಟಿ
ಶಿವಮೊಗ್ಗ, ಸೆಪ್ಟೆಂಬರ್ 30: ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ DRDO ಸಂಶೋಧನಾ ಕೇಂದ್ರ ಸ್ಥಾಪನೆಗೆ ಪ್ರಯತ್ನಗಳು ನಡೆದಿದ್ದು, ಈ ಕುರಿತು ಹಿರಿಯ ವಿಜ್ಞಾನಿಗಳ ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಸಹ್ಯಾದ್ರಿ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಆರಂಭಿಸುವ ಬಗ್ಗೆ ರಕ್ಷಣಾ ಸಚಿವರು ಈಗಾಗಲೇ ಸಮ್ಮತಿ ಸೂಚಿಸಿದ್ದು, ಪ್ರಾಥಮಿಕ ಪ್ರಕ್ರಿಯೆಗಳು ಆರಂಭವಾಗಿದೆ. ಈ ಸಂಬಂಧ ಉನ್ನತ ಮಟ್ಟದ ವಿಜ್ಞಾನಿಗಳನ್ನೊಳಗೊಂಡ ತಪಾಸಣಾ ತಂಡವು, ಇಂದು ಕುವೆಂಪು ವಿಶ್ವವಿದ್ಯಾಲಯ ಮತ್ತು ಸಹ್ಯಾದ್ರಿ ಕಾಲೇಜಿಗೆ ಭೇಟಿ ನೀಡಿ, ಅಲ್ಲಿರುವ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದೆ.
ಈ ಕುರಿತು ಮಂಜೂರಾತಿ ನೀಡುವ ಸಂಬಂಧ ಅಗತ್ಯ ಶಿಫಾರಸ್ಸನ್ನು ಮಾಡಲಿದೆ. ಇನ್ನು ಇದಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದ್ದು, ಇದರ ಯೋಜನಾ ವೆಚ್ಚ 30 ಕೋಟಿ ರೂ. ಎಂದು ಅಂದಾಜಿಸಿದ್ದು, ಇದರ ಸಂಪೂರ್ಣ ಯೋಜನಾ ವೆಚ್ಚವನ್ನು ಕೇಂದ್ರ ಸರ್ಕಾರ ಒದಗಿಸಲಿದೆ.

ಸಂಶೋಧನಾ ಕೇಂದ್ರವು ಪ್ರಾರಂಭವಾಗುವುದರಿಂದ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ಸಂಶೋಧನಾ ಕೇಂದ್ರ ಆರಂಭಕ್ಕೆ ಸಂಬಂಧಿಸಿದಂತೆ DRDO ಅಧ್ಯಕ್ಷ ಡಾ.ಕೆ ಪಾಠಕ್ ಸೇರಿದಂತೆ ಉನ್ನತ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ.ವೀರಭದ್ರಪ್ಪ, ಕುಲಸಚಿವರಾದ ಡಾ.ಎಸ್.ಎಸ್ ಪಾಟೀಲ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮತ್ತಿತರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications