ವೀರಪುತ್ರರ ನಾಡು ಈಸೂರಿನ ಇತಿಹಾಸ ನಿಮಗೆಷ್ಟು ಗೊತ್ತು?
ಶಿವಮೊಗ್ಗ, ಆಗಸ್ಟ್ 13: "ಏಸೂರು ಕೊಟ್ಟರು ಈಸೂರು ಕೊಡೆವು" ಎಂದು ಭಾರತದಲ್ಲಿ ಮೊಟ್ಟಮೊದಲ ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು. 1942ರಲ್ಲಿ ಮಹಾತ್ಮ ಗಾಂಧೀಜಿ ಅವರು ಬ್ರಿಟಿಷರೇ "ಭಾರತ ಬಿಟ್ಟು ತೊಲಗಿ" "ಮಾಡು ಇಲ್ಲವೇ ಮಡಿ" ಎಂದು ಘೋಷಣೆಯೊಂದಿಗೆ ಕ್ವಿಟ್ ಇಂಡಿಯಾ ಚಳವಳಿ ಆರಂಭಿಸಿದರು.
ಆಗ ಈ ಚಳವಳಿಯಲ್ಲಿ ಈಸೂರು ಗ್ರಾಮ ಮೇಲುಗೈ ಸಾಧಿಸಿದೆ ಎಂದರು ತಪ್ಪಾಗಲಾರದು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಈಸೂರು ಗ್ರಾಮದ ಜನರು ಬ್ರಿಟಿಷರಿಗೆ ಸೆಡ್ಡು ಹೊಡೆದು, ಅವರೊಂದಿಗೆ ಕಾದಾಡಿ ವೀರ ಮರಣ ಹೊಂದಿದವರು.
ಈಸೂರಿನಲ್ಲಿ 1942 ರಲ್ಲಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿಸಲಾಯಿತು. ಪ್ರತಿ ದಿನ ಗ್ರಾಮದ ದೇವರು ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಭೆ ಸೇರಿ ಊರ ಬೀದಿಗಳಲ್ಲಿ ವಂದೇ ಮಾತರಂ, ಭಾರತ ಮಾತಕೀ ಜೈ ಘೋಷಣೆಯೊಂದಿಗೆ ಮೆರವಣಿಗೆ ನಡೆಸುತ್ತಿದ್ದರು.
ಬ್ರಿಟಿಷ್ ಕಂದಾಯ ಅಧಿಕಾರಿಗಳು ಕಂದಾಯ ಕಟ್ಟುವಂತೆ ಬಂದು ಊರಿನ ಗ್ರಾಮಸ್ಥರಿಗೆ ಕೇಳಿದಾಗ ಅವರ ಲೆಕ್ಕ ಪುಸ್ತಕವನ್ನು ಕಸಿದುಕೊಂಡು, ಗಾಂಧಿ ಟೋಪಿ ಧರಿಸುವಂತೆ ಹೇಳಿದರು. ಅವರು ಧರಿಸದೇ ವಾಪಸ್ಸು ಹೋಗಿ ಶಿಕಾರಿಪುರದ ಅಮಲ್ದಾರ್ ಗೆ ದೂರು ನೀಡಿದರು.
ಇದರಿಂದ ಈಸೂರಿನ ಜನತೆ ಊರ ದ್ವಾರ ಬಾಗಿಲಿಗೆ "ಬೇಜವಾಬ್ದಾರಿ ಸರ್ಕಾರಿ ಅಧಿಕಾರಿಗಳಿಗೆ ಈಸೂರಿನಲ್ಲಿ ಪ್ರವೇಶವಿಲ್ಲ" ಎಂದು ನಾಮ ಫಲಕವನ್ನು ಹಾಕಿದರು. ಸಾಹುಕಾರ್ ಜಯಣ್ಣರನ್ನು ಅಮಲ್ದಾರ್ ಆಗಿ, ಕೆ.ಜಿ ಮಲ್ಲಯ್ಯ ಅವರನ್ನು ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಆಗಿ ನೇಮಕ ಮಾಡಿಕೊಂಡು ಜವಾಬ್ದಾರಿ ಸರ್ಕಾರವನ್ನು ರಚಿಸಿಕೊಂಡರು. ಹೀಗೆ ಮುಂದುವರಿದ ವಿಷಯ ಹೇಗೆಲ್ಲಾ ತಿರುವು ಪಡೆದುಕೊಂಡಿತು ಮುಂದೆ ಓದಿ.....

ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾದ ಘಟನೆ
ಸಾಹುಕಾರ್ ಜಯಣ್ಣರನ್ನು ಅಮಲ್ದಾರ್ ಆಗಿ, ಕೆ.ಜಿ ಮಲ್ಲಯ್ಯ ಅವರನ್ನು ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಆಗಿ ನೇಮಕ ಮಾಡಿಕೊಂಡ ವಿಷಯ ತಿಳಿದ ಶಿಕಾರಿಪುರದ ಅಮಲ್ದಾರ್ ಚೆನ್ನಕೃಷ್ಣಪ್ಪ ಮತ್ತು ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಕೆಂಚೇಗೌಡ ಅವರು 28/09/1942 ರಂದು ಸ್ವಾತಂತ್ರ್ಯ ಗ್ರಾಮ ಈಸೂರಿಗೆ ಬಂದು ದ್ವಾರ ಬಾಗಿಲಿಗೆ ಹಾಕಿದ ನಾಮ ಫಲಕ ಮತ್ತು ಹೂವಿನ ತೋರಣಗಳನ್ನು ಕಿತ್ತು ಹಾಕಿದರು.
ನಂತರ ದೇವಸ್ಥಾನದ ಹತ್ತಿರ ಬಂದು ಜನರನ್ನು ಹಿಂಸೆ ಮಾಡತೊಡಗಿದರು. ಪೊಲೀಸ್ ಅಧಿಕಾರಿ ಕೆಂಚೇಗೌಡ ಜನರ ಮೇಲೆ ಲಾಠಿ ಚಾರ್ಜ್ ಮಾಡಿದರು. ಆದರೂ ಶಾಂತವಾಗಿದ್ದ ಯುವಕರ ತಂಡ ಅದನ್ನು ಸಹಿಸಿಕೊಂಡು ಸುಮ್ಮನಿದ್ದರು. ಆದರೆ ಇಷ್ಟಕ್ಕೆ ಸುಮ್ಮನಿರದ ಪೊಲೀಸ್ ಕೆಂಚೇಗೌಡ ಜನರ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದರು.
ಗುಂಡು ಊರ ಹಿರಿಯರಿಗೆ ತಗುಲಿ ಸ್ಥಳದಲ್ಲಿಯೇ ಕುಸಿದು ಬಿದ್ದರು. ಇದರಿಂದ ಸಿಟ್ಟಿಗೆದ್ದ ಯುವಕರು ಪೊಲೀಸ್ ಕೆಂಚೇಗೌಡ ಮತ್ತು ಅಮಲ್ದಾರ್ ಚೆನ್ನಕೃಷ್ಣಪ್ಪ ಅವರನ್ನು ಹೊಡೆದು ಹಾಕಿದರು. ಆಗ ಅವರ ಪ್ರಾಣ ಪಕ್ಷಿ ಹಾರಿ ಹೋಯಿತು. ಈ ಘಟನೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿ ಆಯಿತು.

ಸ್ಮಶಾನವಾದ ಈಸೂರು ಗ್ರಾಮ
ಈ ಘಟನೆಯಿಂದ ಬ್ರಿಟಿಷ್ ಸರ್ಕಾರ ಮಿಲಿಟರಿ ಪಡೆಯೊಂದಿಗೆ ಈಸೂರು ಗ್ರಾಮಕ್ಕೆ ಆಗಮಿಸಿದರು. ಈ ಸುದ್ದಿ ತಿಳಿದು ಇಡೀ ಊರಿಗೆ ಊರೇ ತಲೆ ಮರಿಸಿಕೊಂಡಿತು. ಈಸೂರು ಗ್ರಾಮದ ಮನೆ ಮನೆಗೆ ಬೀಗ ಹಾಕಿಕೊಂಡು ಇಡೀ ಊರು ಸ್ಮಶಾನದಂತಾಗಿತ್ತು.
ಪೊಲೀಸ್ ಅಧಿಕಾರಿಗಳು ಆರೋಪಿಗಳ ಪಟ್ಟಿ ಸಿದ್ಧ ಮಾಡಿ 11 ಜನರಿಗೆ ಮರಣದಂಡನೆ, 13 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲು ನಿರ್ಧರಿಸಿದರು.

ಗಲ್ಲಿಗೇರಿದವರು
ಆ ನಂತರ ಕೆ.ಗುರಪ್ಪ ಬಿನ್ ಈಶ್ವರಪ್ಪ ಕುಮಾರ್ ಅವರನ್ನು 8-03-1943 ರಲ್ಲಿ ಗಲ್ಲಿಗೇರಿಸಲಾಯಿತು. ಜಿನಹಳ್ಳಿ ಮಲ್ಲಪ್ಪ ಇವರನ್ನು 8-03-1943 ರಲ್ಲಿ ಗಲ್ಲಿಗೇರಿಸಲಾಯಿತು. ಸೂರ್ಯನಾರಯಣಾಚಾರ್ ಬಿನ್ ಪಂಪಪ್ಪಚಾರ್ ಇವರನ್ನು 09-03-1943 ರಲ್ಲಿ ಗಲ್ಲಿಗೇರಿಸಲಾಯಿತು.
ಇವರಲ್ಲಿ ಬಡಕಳ್ಳಿ ಹಾಲಪ್ಪ ಬಿನ್ ಬಸಪ್ಪ ಹಾಗೂ ಅಂಗಡಿ ಹಾಲಪ್ಪ ಎಂಬವರು ತಲೆಮರೆಸಿಕೊಂಡಿದರು. ಅವರ ಬದಲು ಬಿ.ಹಾಲಪ್ಪ ಅವರನ್ನು 9-03-1943 ರಲ್ಲಿ ಗಲ್ಲಿಗೇರಿಸಲಾಯಿತು.
ಗೌಡ್ರ ಶಂಕ್ರಪ್ಪ ಬಿನ್ ಹೊಳಿಯಪ್ಪ 10-03-43 ರಲ್ಲಿ ಇವರನ್ನು ಅಪರಾಧಿಗಳು ಎಂದು ಗಲ್ಲಿಗೇರಿಸಲಾಯಿತು. ಇನ್ನೂ 23 ಜನರಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಲಾಯಿತು.
ಇದರಲ್ಲಿ ಮಹಿಳೆಯರು ಇದ್ದರು. ಇವರಲ್ಲಿ ಜೀವಂತವಾಗಿ ಇರುವವರು ಎಸ್.ಎಸ್ ಹುಚ್ಚರಾಯಪ್ಪನವರು ಮಾತ್ರ. ಅವರು ಇನ್ನೂ ಈಸೂರು ಗ್ರಾಮದ ತಮ್ಮ ಸ್ವಗೃಹದಲ್ಲಿ ಇದ್ದಾರೆ.

ನಿರ್ಲಕ್ಷ್ಯ ತಾಳಿದ ಸರ್ಕಾರ
"ಈಸೂರು ಗ್ರಾಮ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಎಲ್ಲಾ ಗ್ರಾಮಗಳಂತೆ ಈ ಗ್ರಾಮವೂ ಸಾಮಾನ್ಯವಾಗಿದೆ. ಇದು ಇಡೀ ರಾಜ್ಯದಲ್ಲಿಯೇ ಒಂದು ಮಾದರಿ ಗ್ರಾಮವಾಗಿ ಅಭಿವೃದ್ಧಿಯಾಗಬೇಕು. ಈ ಗ್ರಾಮಕ್ಕೆ ಒಂದು ಸೈನಿಕ ಶಾಲೆ ಸೇರಿದಂತೆ ಅನೇಕ ಬೇಡಿಕೆಗಳನ್ನು ಇಡಲಾಗಿದ್ದು, ಈವರೆಗೂ ಈ ಬಗ್ಗೆ ಯಾವುದೇ ರಾಜಕಾರಣಿಗಳಾಗಲಿ, ಸರ್ಕಾರವಾಗಲಿ ಗಮನಹರಿಸಿಲ್ಲ" ಎಂದು ಇಲ್ಲಿನ ಜನರು ವಿಷಾದಿಸಿದ್ದಾರೆ.
ಒಟ್ಟಿನಲ್ಲಿ ಈಸೂರಿನ ಹೋರಾಟದ ಚರಿತ್ರೆ ಭಾರತದ ಇತಿಹಾಸದಲ್ಲಿ ಒಂದು ಮೆಲುಗೈ ಸಾಧಿಸಿದೆ. ಸ್ವಾತಂತ್ರ್ಯ ಹೋರಾಟದ ಕಿಚ್ಚು, ಸ್ವಾಭಿಮಾನ, ದೇಶಾಭಿಮಾನ, ಶಾಂತಿ- ಕ್ರಾಂತಿ ಎರಡೂ ಚಿಂತನೆಗಳ ಮೂಲಕ ಬ್ರಿಟೀಷರ ಆಡಳಿತಕ್ಕೆ ವಿರುದ್ಧವಾಗಿ ಮೊಟ್ಟ ಮೊದಲ ಸ್ವಾತಂತ್ರ್ಯ ಘೊಷಿಸಿಕೊಂಡ ವೀರಪುತ್ರರ ನಾಡು ಈಸೂರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications