ಆಗಸ್ಟ್ 17ಕ್ಕೆ ಹರತಾಳು ಹಾಲಪ್ಪ ಅತ್ಯಾಚಾರ ಕೇಸ್ ತೀರ್ಪು
ಶಿವಮೊಗ್ಗ, ಆಗಸ್ಟ್ 08 : ಒಂದು ದಿನ ಕೂಡಾ ಜೈಲು ವಾಸ ಅನುಭವಿಸದೆ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಹಾರಿ ಜಾಮೀನು ಪಡೆದು ಆರಾಮಾಗಿರುವ ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಆಗಸ್ಟ್ 17ರ ತನಕ ಕೋರ್ಟ್ ತಲೆಬಿಸಿಯಿಲ್ಲ.
ಶಿವಮೊಗ್ಗ 2 ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಏಳೆಂಟು ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಇಂದು ತೀರ್ಪು ನೀಡುವ ನಿರೀಕ್ಷೆಯಿತ್ತು. ಆದರೆ, ತೀರ್ಪನ್ನು ಆಗಸ್ಟ್ 17ಕ್ಕೆ ಕಾಯ್ದಿರಿಸಿದೆ.
ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಕಾಯ್ದಿರಿಸಿದೆ. 2009 ರ ನವೆಂಬರ್ 26 ರಂದು ಸಂತ್ರಸ್ಥ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಅಂದು ಸಚಿವರಾಗಿದ್ದ ಹಾಲಪ್ಪ ರಾಜೀನಾಮೆ ನೀಡಿದ್ದರು. ಐ.ಪಿ.ಸಿ. ಸೆಕ್ಷನ್ 376, 342, 506, 341 ಹಾಗೂ 34 ರ ಅಡಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸಿದ್ದರು.

ಮಾಜಿ ಸಚಿವ ಹರತಾಳು ಹಾಲಪ್ಪ ಅತ್ಯಾಚಾರ ಪ್ರಕರಣವನ್ನು ಸಹಮತದ ಸೆಕ್ಸ್ ಎಂದು ಸಿಐಡಿ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂಬ ಸುದ್ದಿಗೆ ಹೊಸ ತಿರುವು ಸಿಕ್ಕಿತ್ತು. ಹಾಲಪ್ಪ ನಡೆಸಿದ್ದು ಅತ್ಯಾಚಾರ ಎಂದು ಹೈದರಾಬಾದಿನ ಲ್ಯಾಬ್ ವರದಿ ನೀಡಿದ್ದು, ಎರಡೆರಡು ಬಾರಿ ಪರೀಕ್ಷೆ ನಡೆಸಿ ದೃಢಪಡಿಸಲಾಗಿದೆ ಎಂದು ಸಿಐಡಿ ಮೂಲಗಳು ಹೇಳಿದ್ದವು.
ಸಿಐಡಿ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ 2009ರ ನವೆಂಬರ್ 27ರಂದು ರಾತ್ರಿ ಹಾಲಪ್ಪ ತನ್ನ ಗೆಳೆಯ ವೆಂಕಟೇಶಮೂರ್ತಿಯ ಪತ್ನಿ ಚಂದ್ರಾವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬುದು ಉಲ್ಲೇಖಿಸಲಾಗಿದೆ. ಈ ಐಪಿಸಿ ಸೆಕ್ಷನ್ 376ರ ಅನ್ವಯ ಆರೋಪಪಟ್ಟಿಯನ್ನು ಬೆಂಗಳೂರು ಸಿಐಡಿ ಪತ್ತೆ ನಿರೀಕ್ಷಕ ಎಂ ಎಸ್ ಕೌಲಪುರೆ ಅವರು ಸಲ್ಲಿಸಿದ್ದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications