ಸೇನೆಗೆ ಸೇರಬಯಸುವ ಯುವಕರಿಗೆ ಮಾಜಿ ಸೈನಿಕರಿಂದ ಶಿವಮೊಗ್ಗದಲ್ಲಿ ಉಚಿತ ತರಬೇತಿ
ಶಿವಮೊಗ್ಗ, ಮಾರ್ಚ್ 16: ಸೇನೆ ಸೇರಬೇಕು, ಗಡಿಯಲ್ಲಿ ನಿಂತು ದೇಶ ಸೇವೆ ಮಾಡಬೇಕು ಅನ್ನುವ ಗುರಿ ಹೊಂದಿರುವ ಮಲೆನಾಡಿನ ಯುವಕರಿಗೆ, ಶಿವಮೊಗ್ಗದ ಮಾಜಿ ಯೋಧರ ತಂಡವೊಂದು ಉಚಿತ ತರಬೇತಿ ನೀಡುತ್ತಿದೆ. ಸೂಕ್ತ ಮಾರ್ಗದರ್ಶನ ನೀಡಿ ಸೇನಾ ನೇಮಕಾತಿ ರ್ಯಾಲಿಗೆ ಕಳುಹಿಸುತ್ತಿದೆ.
ಶಿವಮೊಗ್ಗದ ಮನೆ ಮನೆಯಲ್ಲೂ ಯೋಧರಿರಬೇಕು ಅನ್ನುವ ಸದುದ್ದೇಶದಿಂದ, ಮಾಜಿ ಯೋಧರ ತಂಡ, ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್ ಸ್ಥಾಪಿಸಿದೆ. ಆಕಾಂಕ್ಷಿಗಳಿಗೆ ಉಚಿತವಾಗಿ ಸೇನಾ ತರಬೇತಿ ನೀಡುತ್ತಿದೆ. ಇವರ ಗರಡಿಯಲ್ಲಿ ಪಳಗಿದವರು ಈಗ ಗಡಿಯಲ್ಲಿ ದೇಶ ಕಾಯುತ್ತಿದ್ದಾರೆ.

ಉಡುಪಿ ನೇಮಕಾತಿಗೆ ಸಿದ್ಧ
ಮಾರ್ಚ್ 17ರಿಂದ ಉಡುಪಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. ಇದಕ್ಕೆ ಶಿವಮೊಗ್ಗದಲ್ಲಿ ಆಕಾಂಕ್ಷಿಗಳಿಗೆ ಉಚಿತವಾಗಿ ತರಬೇತಿ ನೀಡಲಾಯಿತು. ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ವಿವಿಧೆಡೆಯಿಂದ ಆಕಾಂಕ್ಷಿಗಳು ತರಬೇತಿಗೆ ಬಂದಿದ್ದರು. ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ದೈಹಿಕ ತರಬೇತಿ, ಜಿಲ್ಲಾ ತರಬೇತಿ ಕೇಂದ್ರದಲ್ಲಿ ಪರೀಕ್ಷೆಗೆ ಬೇಕಿರುವ ಪೂರ್ವ ಸಿದ್ಧತಾ ತರಬೇತಿ ನೀಡಲಾಯಿತು.

ಹೇಗಿರುತ್ತೆ? ಏನೇನೆಲ್ಲ ತರಬೇತಿ ಇರುತ್ತೆ?
ಆಕಾಂಕ್ಷಿಗಳಿಗೆ ಹದಿನೈದು ದಿನ ತರಬೇತಿ ನೀಡಲಾಯಿತು. ‘ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ದೈಹಿಕ ಸಾಮರ್ಥ್ಯ ಹೆಚ್ಚಿಸುವ ವಿವಿಧ ವ್ಯಾಯಾಮಗಳನ್ನು ಹೇಳಿ ಕೊಡಲಾಗುತ್ತಿದೆ. ನೇಮಕಾತಿಗೆ ಅಗತ್ಯವಿರುವ ರನ್ನಿಂಗ್, ಹೈಜಂಪ್ ಸೇರಿದಂತೆ ವಿವಿಧ ತರಬೇತಿ ನೀಡಲಾಗುತ್ತಿದೆ' ಎಂದು ಮಾಜಿ ಯೋಧ, ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್ ನ ಸಂಸ್ಥಾಪಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ತೇಜಸ್ವಿ ಹೇಳಿದರು.

ಲಿಖಿತ ಪರೀಕ್ಷೆಗೆ ಅಗತ್ಯವಿರುವ ತರಬೇತಿ
ಮಾಜಿ ಯೋಧರಾದ ಕಿಶೋರ್ ಭೈರಾಪುರ ಮತ್ತು ಸುಭಾಷ್ ಚಂದ್ರ ತೇಜಸ್ವಿ ಅವರು ದೈಹಿಕ ತರಬೇತಿ ನೀಡುತ್ತಾರೆ. ಇವರ ಜೊತೆಗೆ ರಜೆಗಾಗಿ ಊರಿಗೆ ಬಂದಿರುವ ಯೋಧರು ಕೂಡ ಕೈ ಜೋಡಿಸಿದ್ದಾರೆ. ದೈಹಿಕ ತರಬೇತಿ ಜೊತೆಗೆ ವಿವಿಧ ಕಾಲೇಜುಗಳ ಉಪನ್ಯಾಸಕರಿಂದ ಲಿಖಿತ ಪರೀಕ್ಷೆಗೆ ಅಗತ್ಯವಿರುವ ತರಬೇತಿ ನೀಡಲಾಯಿತು.
‘ಇಲ್ಲಿ ಬಂದ ಮೇಲೆ ನಮ್ಮ ಆತ್ಮವಿಶ್ವಾಸ ಹೆಚ್ಚಾಗಿದೆ. ಸೇನಾ ನೇಮಕಾತಿ ರ್ಯಾಲಿಯಲ್ಲಿ ಮುಂಚೂಣಿ ಕಾಯ್ದುಕೊಳ್ಳುವ ಭರವಸೆ ಮೂಡಿದೆ' ಎಂದು ಶಿಬಿರಾರ್ಥಿ ಉಡುಪಿಯ ಗೌತಮ್ ಹೇಳಿದರೆ, ‘ತರಬೇತಿಯ ಜೊತೆಗೆ ನಮ್ಮ ದಾಖಲೆಗಳನ್ನು ಪರಿಶೀಲಿಸಿ, ಸರಿಪಡಿಸಲಾಗಿದೆ. ಮೈ ಮೇಲೆ ಹಚ್ಚೆ ಇದ್ದವರಿಗೆ ತೆಗೆಸಿದ್ದಾರೆ. ಎಲ್ಲ ಬಗೆಯಲ್ಲಿ ನಾವು ಸನ್ನದ್ಧರಾಗಿದ್ದೇವೆ. ಆಯ್ಕೆ ಆಗುತ್ತೇವೆ ಎಂಬ ಭರವಸೆಯಲ್ಲಿದ್ದೇವೆ' ಎಂದು ಶಿಬಿರಾರ್ಥಿ ರಿಪ್ಪನ್ಪೇಟೆಯ ರವಿರಾಜ್ ತರಬೇತಿ ಅನುಭವ ಹಂಚಿಕೊಂಡರು.

26 ಯುವಕರು ಈಗ ಯೋಧರು
2019ರಲ್ಲಿ ಗದಗದಲ್ಲಿ ಸೇನಾ ನೇಮಕಾತಿ ರ್ಯಾಲಿ ನಡೆಯಿತು. ಮಾಜಿ ಯೋಧರಾದ ಕಿಶೋರ್ ಭೈರಾಪುರ, ಸುಭಾಷ್ ಚಂದ್ರ ತೇಜಸ್ವಿ ಅವರು ಈ ರ್ಯಾಲಿಗಾಗಿ ಆನಂದಪುರದ ಮುರುಘಾ ಮಠದ ಆವರಣದಲ್ಲಿ ಉಚಿತ ತರಬೇತಿ ನೀಡಿದ್ದರು. ಈ ತರಬೇತಿಯಲ್ಲಿ ಭಾಗವಹಿಸಿದ್ದವರ ಪೈಕಿ 26 ಮಂದಿ ಸೇನೆಗೆ ನೇಮಕವಾಗಿದ್ದಾರೆ. ದೇಶದ ವಿವಿಧೆಡೆ ಇವರನ್ನು ನಿಯೋಜಿಸಲಾಗಿದೆ.
ಈಗ ಉಡುಪಿ ರ್ಯಾಲಿಗೆ ತರಬೇತಿ ನೀಡಲಾಗಿದ್ದು, ಹೆಚ್ಚಿನ ಪ್ರಮಾಣದ ಆಕಾಂಕ್ಷಿಗಳು ಆಯ್ಕೆಯಾಗುವ ನಿರೀಕ್ಷೆ ಇದೆ ಅನ್ನುತ್ತಾರೆ ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್ ನ ಸಂಸ್ಥಾಪಕ ಕಿಶೋರ್ ಭೈರಾಪುರ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications