ಕುವೆಂಪು ವಿವಿ ಘಟಿಕೋತ್ಸವ: ಸರ್ಕಾರಿ ಶಾಲೆಯಲ್ಲಿ ಓದಿದ್ದ ವಿದ್ಯಾರ್ಥಿನಿಗೆ 11 ಚಿನ್ನದ ಪದಕ
ಶಿವಮೊಗ್ಗ, ಜೂನ್ 17: ಕುವೆಂಪು ವಿಶ್ವ ವಿದ್ಯಾನಿಲಯದ 31 ಮತ್ತು 32ನೇ ಘಟಿಕೋತ್ಸವದಲ್ಲಿ ಕನ್ನಡ ಭಾರತಿ ವಿಭಾಗದ ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದು ಚಿನ್ನದ ಬೇಟೆಯಾಡಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಅತ್ಯಧಿಕ ಸ್ವರ್ಣ ಪದಕ ಬಹುಮಾನಗಳಿಗೆ ಪಾತ್ರವಾಗಿರುವುದು ವಿಶೇಷವಾಗಿದೆ.
ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ನಡೆದ 31 ಮತ್ತು 32ನೇ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಸನ್ಮಾನಿಸಿದರು.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಈ ಭಾರಿಯು ವಿದ್ಯಾರ್ಥಿನಿಯರು ಚಿನ್ನದ ಬೇಟೆ ಮುಂದುವರೆಸಿದ್ದು, ಅತಿ ಹೆಚ್ಚು ಚಿನ್ನದ ಪದಕ ಮತ್ತು ನಗದು ಪುರಸ್ಕಾರಗಳನ್ನು ವಿದ್ಯಾರ್ಥಿನಿಯರಿಗೆ ಬಾಚಿಕೊಂಡಿದ್ದಾರೆ.
2019-20 ಸಾಲಿನ ಶೈಕ್ಷಣಿಕ ಘಟಿಕೋತ್ಸವದಲ್ಲಿ ಕನ್ನಡ ಭಾರತಿ ವಿಭಾಗದ ಪ್ರಣೀತಾ ಎಂ. ಟಿ. ಅವರು ಒಟ್ಟು 8 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆದಿದ್ದಾರೆ. ಇನ್ನು 2020-21 ನೇ ಸಾಲಿನ ಘಟಿಕೋತ್ಸವದಲ್ಲಿ ಕನ್ನಡ ಭಾರತಿ ವಿಭಾಗದ ದಿವ್ಯಾ ಹೆಚ್. ಎನ್. ಒಟ್ಟು 11 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನಗಳನ್ನು ಪಡೆದಿದ್ದಾರೆ.

ಕೂಲಿ ಕಾರ್ಮಿಕನ ಮಗಳಿಗೆ 11 ಚಿನ್ನ
ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ಮುಕ್ಕಾಲು ಎಕರೆ ಜಮೀನು ಹೊಂದಿರುವ ಕೃಷಿ ಕೂಲಿ ಕಾರ್ಮಿಕನ ಮಗಳಾದ ದಿವ್ಯಾ ಸರ್ಕಾರಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದ್ದರು. ಇದೀಗ ಎಂಎ ಕನ್ನಡ ವಿಭಾಗದಲ್ಲಿ 11 ಸ್ವರ್ಣ ಪದಕ ಹಾಗೂ 2 ನಗದು ಬಹುಮಾನ ಪಡೆದಿದ್ದಾರೆ. ಮನೆಯವರ ಮತ್ತಷ್ಟು ಗುರುಗಳ ಸಹಕಾರವೇ ನನ್ನ ಸಾಧನೆಗೆ ಕಾರಣ. ನಮ್ಮ ತಂದೆ ನಾಗರಾಜ್, ಅಮ್ಮ ಭವಾನಿ. ನಮ್ಮೂರು ಹಣಗೆರೆಕಟ್ಟೆ. ನಾಲ್ವರು ಹೆಣ್ಣುಮಕ್ಕಳಲ್ಲಿ ನಾನು ಮೂರನೆಯವಳು. ಇಬ್ಬರು ಅಕ್ಕಂದಿರಿಗೆ ವಿವಾಹವಾಗಿದೆ. ಅವರಿಗೂ ನಾನು ಎಂಎ ಓದಬೇಕೆಂಬ ಆಸೆಯಿತ್ತು. ಅದನ್ನು ನಾನು ಈಡೇರಿಸಿದ್ದೇನೆ ದಿವ್ಯಾ ತಮ್ಮ ಕುಟುಂಬದ ಹಿನ್ನಲೆ ಹೇಳಿಕೊಂಡಿದ್ದಾರೆ.

ಕೆಎಎಸ್ ಮಾಡುವ ಹಂಬಲ
ಭವಿಷ್ಯದ ಬಗ್ಗೆ ಮಾತನಾಡಿ, ಅಪ್ಪ ಅಮ್ಮ ಕಷ್ಟಪಟ್ಟು ಕೂಲಿ ಕೆಲಸ ಮಾಡಿ ನನ್ನನ್ನ ಓದಿಸಿದ್ದಾರೆ. ನನಗೆ ಇಷ್ಟೊಂದು ಪದಕಗಳು ಬರುತ್ತವೆ ಎಂಬ ನಿರೀಕ್ಷೆ ಇರಲಿಲ್ಲ. ಆದರೆ, ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ಮುಂದೆ ಪಿಎಚ್ಡಿ ಮಾಡಬೇಕೆಂಬ ಗುರಿ ಇಟ್ಟುಕೊಂಡಿದ್ದೇನೆ. ಎಸ್ಐ ಆಗಬೇಕೆಂಬ ಆಸೆಯಿದೆ, ಕೆಎಎಸ್ ಮಾಡಬೇಕೆಂಬ ಬಯಕೆಯೂ ಇದೆ. ನನ್ನ ಸಾಧನೆಗೆ ನಮ್ಮ ತಂದೆ, ತಾಯಿ ಹಾಗೂ ವಿವಿಯ ಅಧ್ಯಾಪಕ ವರ್ಗದವರು ಕಾರಣರಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು ಅರ್ಪಿಸುತ್ತೇನೆ" ಎಂದರು.

8 ಚಿನ್ನದ ಪದಕ ಪಡೆದ ಭರತನಾಟ್ಯ ಕಲಾವಿದೆ
ಬುಕ್ ಬ್ರಹ್ಮದಲ್ಲಿ ನಿರೂಪಕಿಯಾಗಿ ಮತ್ತು ಸಾಮಾಜಿಕ ಜಾಲಾತಾಣದ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಪ್ರಣಿತಾ ಎನ್.ಪಿ ಕನ್ನಡ ವಿಭಾಗದಲ್ಲಿ 8 ಚಿನ್ನದ ಪದಕ ಹಾಗೂ 2 ನಗದು ಬಹುಮಾನ ಪಡೆದಿದ್ದಾರೆ. ಕೊಪ್ಪ ತಾಲೂಕಿನ ಹರಿಹರ ಪುರದ ಕೃಷಿ ಕುಟುಂಬದಿಂದ ಬಂದಿದ್ದ ಪ್ರಣಿತಾ ಭರತಾ ನಾಟ್ಯದಲ್ಲಿ ಪ್ರವೀಣೆಯಾಗಿದ್ದಾರೆ.
"ಪರೀಕ್ಷೆಯಲ್ಲಿ ರ್ಯಾಂಕ್ ಪಡೆಯಬೇಕೆಂದ ಉದ್ದೇಶದಿಂದ ಓದಿಲ್ಲ. ತರಗತಿಯಲ್ಲಿ ಶ್ರದ್ಧೆಯಿಂದ ಪಾಠ ಕೇಳಿದ್ದೇನೆ. 8 ಸ್ವರ್ಣ ಪದಕ ಪಡೆಯಲು ಮನೆಯವರು, ಗುರುಗಳ ಸಹಕಾರ ಕಾರಣ. ಇದಕ್ಕಿಂತ ಹೆಚ್ಚಾಗಿ ಕುವೆಂಪು ವಿವಿಯಲ್ಲಿ ಅತ್ಯುತ್ತಮ ಗ್ರಂಥಾಲಯವಿದೆ. ಈ ಗ್ರಂಥಾಲಯ ನನ್ನ ಸಾಧನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಅಧ್ಯಯನ ಸಾಮಗ್ರಿಗಳು ಸಾಕಷ್ಟಿದ್ದು ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವಷ್ಟು ವಿಷಯ ಈ ಗ್ರಂಥಾಲಯದಲ್ಲಿ ಸಿಗುತ್ತದೆ. ನಮ್ಮ ತಂದೆ ತಾಯಿ ಓದು ಎಂದು ಎಂದೂ ಹೇಳುತ್ತಿರಲಿಲ್ಲ. ಒತ್ತಡವೂ ಇರಲಿಲ್ಲ. ಸ್ವರ್ಣ ಪದಕ ಸಿಗುತ್ತೆ ಎಂಬ ನಂಬಿಕೆಯೂ ಇರಲಿಲ್ಲ. ಆದರೆ, ಆಸಕ್ತಿ ಮತ್ತು ಆತ್ಮಸ್ಥೈರ್ಯದಿಂದ ಅಧ್ಯಯನ ನಡೆಸಿದ್ದೆ. ಅದು ಫಲ ಕೊಟ್ಟಿದೆ ಎಂದು ಪ್ರಣೀತಾ ಹೇಳಿದರು.

ಕನ್ನಡ ಬದುಕು ಕಲಿಸುತ್ತದೆ
"ಕನ್ನಡ ಭಾಷೆಯ ಬಗ್ಗೆ ಕೀಳರಿಮೆ ಖಂಡಿತ ಬೇಡ. ನಾನು ಕನ್ನಡ ಭಾಷೆಯನ್ನೇ ತೆಗೆದುಕೊಂಡು ಓದಿದ್ದೇನೆ. ಪದವಿಯಲ್ಲೂ ಕನ್ನಡವನ್ನೇ ಮುಖ್ಯ ಭಾಷೆಯನ್ನಾಗಿ ಓದಿದ್ದೇನೆ. ಕನ್ನಡ ನನಗೆ ಬದುಕನ್ನು ಪ್ರೀತಿಸಲು ಕಲಿಸುತ್ತದೆ. ನಾನು ಕನ್ನಡ ಅಧ್ಯಾಪಕಿ ಆಗಬೇಕು ಎಂಬ ಆಸೆ ಹೊಂದಿದ್ದೇನೆ" ಎಂದು ಪ್ರಣೀತಾ ತಿಳಿಸಿದರು.
"ರ್ಯಾಂಕ್ ಪಡೆದವರಿಗೆ ಉದ್ಯೋಗ ಸಿಕ್ಕೇ ಸಿಗುತ್ತೆ ಎಂಬ ನಂಬಿಕೆ ಬೇಡ. ಸರಕಾರಿ ಉದ್ಯೋಗವಲ್ಲದೇ ಬೇರೆ ಬೇರೆ ಕಡೆ ವಿಫುಲವಾದ ಅವಕಾಶಗಳು ನನಗಿವೆ. ಅಂಕಗಳಿಗಿಂತ ನಮ್ಮ ಕ್ರಿಯಾಶೀಲತೆ ಮತ್ತು ತಿಳಿವಳಿಕೆ ಉದ್ಯೋಗ ದೊರಕಿಸಿ ಕೊಡುವಲ್ಲಿ ಸಹಾಯ ಮಾಡುತ್ತವೆ. ಹಾಗಾಗಿಯೇ ಯುವಕರು ಕೇವಲ ಅಂಕಗಳ ಹಿಂದೆ ಬೀಳದೆ, ಕ್ರೀಡೆ, ಕರಕುಶಲ, ಮಾತಿನ ಜಾಣ್ಮೆ, ವ್ಯಕ್ತಿತ್ವ ರೂಪಿಸಿಕೊಳ್ಳಬೇಕು "ಎಂದು ಪ್ರಣೀತಾ ಕಿವಿಮಾತು ಹೇಳಿದರು.
(ಒನ್ಇಂಡಿಯಾ ಸುದ್ದಿ)
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications