ಭದ್ರಾವತಿಯಲ್ಲಿ ಎರಡು ಪ್ರತ್ಯೇಕ ಅಹಿತಕರ ಘಟನೆ, ಬಿಗುವಿನ ವಾತಾವರಣ
ಶಿವಮೊಗ್ಗ, ನವೆಂಬರ್, 14: ಎರಡು ಪ್ರತ್ಯೇಕ ಅಹಿತಕರ ಘಟನೆಯಲ್ಲಿ ಭದ್ರಾವತಿಯಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಜಗಳವಾಗಿದ್ದು, ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಲಾಗಿದೆ. ಮತ್ತೊಂದೆಡೆ ಮತ್ತೊಬ್ಬ ಯುವಕನ ಕೈಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ.
ಸ್ಟೇಟಸ್ ವಿಚಾರವಾಗಿ ಕಿರಿಕ್
ಮೊದಲನೇ ಗಲಾಟೆ ಪಟ್ಟಣದ ಗಾಂಧಿ ಸರ್ಕಲ್ನಲ್ಲಿ ಸಂಭವಿಸಿದೆ. ಹರೀಶ್, ಗೌತಮ್ ಮತ್ತು ಜಹೀರ್ ಎಂಬುವವರ ನಡುವೆ ಗಲಾಟೆ ಆಗಿದೆ. ಜಹೀರ್ ಸೋಶಿಯಲ್ ಮೀಡಿಯಾದಲ್ಲಿ ಗೌತಮ್ ಎಂಬಾತನ ಸ್ಟೇಟಸ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದ ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಈ ಹಿನ್ನೆಲೆ ಭಾನುವಾರ ರಾತ್ರಿ ಕಲ್ಲಿನಿಂದ ಹೊಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಗೌತಮ್ ಮತ್ತು ಹರೀಶ್, ಜಹೀರ್ ಮೇಲೆ ಕಲ್ಲು ತೂರಿದ್ದಾರೆ. ಆಗ ಜಗಳ ಆಗಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ತಕ್ಷಣ ಗಾಯಗೊಂಡಿದ್ದ ಮೂವರನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರೀಶ್, ಗೌತಮ್ ಮತ್ತು ಜಹೀರ್ ಬಹಳ ದಿನಗಳಿಂದ ಸ್ನೇಹಿತರಾಗಿದ್ದರು. ಇದು ಕೋಮು ಗಲಭೆಯಲ್ಲ. ತನಿಖೆ ನಡೆಯುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆ ಮುಂಭಾಗ ಯುವಕನಿಗೆ ಚಾಕು ಇರಿತ
ಇನ್ನೊಂದು ಘಟನೆ ಸರಕಾರಿ ಆಸ್ಪತ್ರೆ ಮುಂಭಾಗದಲ್ಲಿ ನಡೆದಿದ್ದು, ರಿಜ್ವಾನ್ ಎಂಬಾತನಿಗೆ ಚಾಕುವಿನಿಂದ ಚುಚ್ಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಯಾವ ಕಾರಣಕ್ಕಾಗಿ ಕೃತ್ಯ ಎಸಗಲಾಗಿದೆ ಎನ್ನುವುದು ಇನ್ನು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಬಳಿಕ ಆಸ್ಪತ್ರೆಯ ಬಳಿ ಸೇರಿದ್ದ ಉದ್ರಿಕ್ತ ಗುಂಪನ್ನು ಪೊಲೀಸರು ಚದುರಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಭದ್ರಾವತಿ ಪಟ್ಟಣದಲ್ಲಿ ಪರಿಸ್ಥಿತಿ ತಿಳಿಯಾಗಿದೆ. ಮುಂಜಾಗ್ರತ ಕ್ರಮವಾಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications