ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: "ಸಿಂಗದೂರು ದೇವಾಲಯ ಮುಜರಾಯಿಗೆ ಸೇರಿಸಿದರೆ ಉಗ್ರ ಹೋರಾಟ"

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 9: ಮಲೆನಾಡಿನ ಸುಪ್ರಸಿದ್ಧ ದೇವಾಲಯವಾದ ಶ್ರೀ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿಗೆ ಸೇರಿಸಬೇಕು ಎಂದು ಕೆಲವರು ಆಗ್ರಹಿಸಿದ್ದು, ಇದನ್ನು ಸಾಗರ ತಾಲ್ಲೂಕಿನ ನಾಗರಿಕ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

"ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಶತಮಾನಗಳ ಐತಿಹಾಸಿಕ ಹಿನ್ನೆಲೆ ಇದ್ದು, ಸಾವಿರಾರು ಸಂಖ್ಯೆಯಲ್ಲಿ ಪ್ರತಿನಿತ್ಯ ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು ಕಳೆದ 30 ವರ್ಷಗಳಿಂದ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ್ದಾರೆ'' ಎಂದು ನಾಗರಿಕ ವೇದಿಕೆ ಸದಸ್ಯರು ತಿಳಿಸಿದರು.

ಶಿವಮೊಗ್ಗ: ನರಸೀಪುರದ ನಾಟಿ ಔಷಧ ವಿತರಣೆಗೆ ಮತ್ತೆ ನಿರ್ಬಂಧ, ಹೊರಗಿನವರಿಗೆ ಪ್ರವೇಶವಿಲ್ಲಶಿವಮೊಗ್ಗ: ನರಸೀಪುರದ ನಾಟಿ ಔಷಧ ವಿತರಣೆಗೆ ಮತ್ತೆ ನಿರ್ಬಂಧ, ಹೊರಗಿನವರಿಗೆ ಪ್ರವೇಶವಿಲ್ಲ

"ಸಿಗಂದೂರು ಚೌಡೇಶ್ವರಿ ಟ್ರಸ್ಟ್ ಮೂಲಕ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದಾರೆ. ದೇವಸ್ಥಾನಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಆಗಮಿಸುವ ಭಕ್ತರ ವಾಜ್ಯಗಳನ್ನು ನ್ಯಾಯಸಮ್ಮತವಾಗಿ ಬಗೆಹರಿಸಲಾಗುತ್ತಿದೆ'' ಎಂದು ವೇದಿಕೆಯ ಪ್ರಮುಖರು ಹೇಳಿದರು.

Shivamogga: A Fight If The Siganduru Temple Is Added To Muzarai Dept: Sagara Citizen Forum

"ಪ್ರತಿವರ್ಷ 1500 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ದೇವಸ್ಥಾನದ ಅಭಿವೃದ್ಧಿಯನ್ನು ಸಹಿಸದ ಕೆಲವರು ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವಹಿಸಬೇಕು ಎಂದಿದ್ದು, ಒಂದು ವೇಳೆ ಮುಜರಾಯಿ ಇಲಾಖೆಗೆ ದೇವಸ್ಥಾನವನ್ನು ಸೇರಿಸಲು ಮುಂದಾದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ'' ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ನಾಗರಿಕ ವೇದಿಕೆ ಅಧ್ಯಕ್ಷ ರಾಜಶೇಖರ್, ಷಣ್ಮುಖ ಲಕ್ಷ್ಮಣ್, ಬಂಗಾರಪ್ಪ, ಸತೀಶ್, ಕುಮಾರ್, ವಿನಾಯಕ ಇದ್ದರು.

English summary
The Sagara citizen forum has strongly opposed the Added of the Siganduru Chowdeshwari Temple in the Sagara Taluk to the Muzarai department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X