ಶಿವಮೊಗ್ಗದಲ್ಲಿ ದೀಪಾವಳಿ ಪಟಾಕಿ ಮಾರಾಟ ಶುರು: ಎಷ್ಟಿದೆ ರೇಟು?
ಶಿವಮೊಗ್ಗ, ನವೆಂಬರ್ 2: ದೀಪಾವಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಆರಂಭವಾಗಿದೆ. ನಗರದ ಎರಡು ಕಡೆಯಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಬಗೆಬಗೆ ಪಟಾಕಿಗಳು ಮಾರುಕಟ್ಟ್ಟೆಗೆ ಬಂದಿವೆ. ಆದರೆ ಪಟ್ರೋಲ್, ಡಿಸೇಲ್ ದರ ಏರಿಕೆಯಿಂದಾಗಿ ಪಟಾಕಿಗಳ ಬೆಲೆಯು ತುಸು ಹೆಚ್ಚಳವಾಗಿದೆ.
ಶಿವಮೊಗ್ಗದ ನೆಹರೂ ಕ್ರೀಡಾಂಗಣ ಮತ್ತು ಸೈನ್ಸ್ ಮೈದಾನದಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಬಗೆ ಬಗೆ ಪಟಾಕಿಗಳನ್ನು ಮಳಿಗೆಗಳಲ್ಲಿ ಇರಿಸಲಾಗಿದೆ.
ಗ್ರೀನ್ ಪಟಾಕಿ ಲೇಬಲ್
ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಹಸಿರು ಪಟಾಕಿ ಮಾರಾಟ ಮಾಡುವಂತೆ ಸರ್ಕಾರ ಸೂಚಿಸಿದೆ. ಕಳೆದ ವರ್ಷ ಹಬ್ಬಕ್ಕೆ ಒಂದೆರಡು ದಿನ ಮೊದಲು ಹಸಿರು ಪಟಾಕಿ ಮಾರಾಟ ಮಾಡುವಂತೆ ಸರ್ಕಾರ ಸೂಚಿಸಿದ್ದರಿಂದ, ವ್ಯಾಪಾರಿಗಳು ನಷ್ಟ ಅನುಭವಿಸಿದ್ದರು. ಆದ್ದರಿಂದ ಈ ಭಾರಿ ಸಂಪೂರ್ಣ ಹಸಿರು ಪಟಾಕಿಗಳನ್ನು ಮಾರಾಟಕ್ಕೆ ಇರಿಸಲಾಗಿದೆ. ಗ್ರಾಹಕರು ಕೂಡ ಹಸಿರು ಪಟಾಕಿಯನ್ನೇ ಕೇಳಿ ಖರೀದಿಸುತ್ತಿದ್ದಾರೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಬಗೆ ಬಗೆ ಪಟಾಕಿ, ರೇಟು ದುಬಾರಿ
ಈ ಬಾರಿಯೂ ಹತ್ತಾರು ವೆರೈಟಿ ಪಟಾಕಿಗಳನ್ನು ಮಾರಾಟಕ್ಕೆ ಇಡಲಾಗಿದೆ. ಮಕ್ಕಳು ಇಷ್ಟಪಡುವ ವಿವಿಧ ಪಟಾಕಿಗಳಿಗೆ ಸ್ವಲ್ಪ ಡಿಮಾಂಡ್ ಇದೆ. ಬಗೆಬಗೆಯ ಪಿಸ್ತೂಲುಗಳನ್ನು ಇರಿಸಲಾಗಿದ್ದು, ಮಕ್ಕಳ ಕಣ್ಸೆಳೆಯಲಿವೆ. ಇನ್ನು, ಕಳೆದ ಬಾರಿಗಿಂತಲೂ ಈ ಬಾರಿ ಪಟಾಕಿ ಬೆಲೆ ಸ್ವಲ್ಪ ಹೆಚ್ಚಳವಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಶೇ.10ರಷ್ಟು ದರ ಏರಿಕೆಯಾಗಿರುವ ಕುರಿತು ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಮಾರಾಟಗಾರರು ಕಡಿಮೆ, ಗ್ರಾಹಕರು ಇಳಿಮುಖ
ಪೆಟ್ರೋಲ್, ಡಿಸೇಲ್ ದರ ಹೆಚ್ಚಳದ ಬಿಸಿ ಪಟಾಕಿಗೂ ತಟ್ಟಿದೆ. ತಮಿಳುನಾಡು ಸೇರಿದಂತೆ ವಿವಿಧೆಡೆಯಿಂದ ಪಟಾಕಿ ತರಿಸಲಾಗಿದೆ. ಡಿಸೇಲ್ ದರದ ಏರಿಕೆಯಿಂದಾಗಿ ಪಟಾಕಿ ಸಾಗಣೆ ವೆಚ್ಚ ದುಬಾರಿಯಾಗಿದೆ. ಇದು ಕೂಡ ಗ್ರಾಹಕರ ಜೇಬು ಸುಡಲಿದೆ. ಕೋವಿಡ್ ಮತ್ತು ಲಾಕ್ ಡೌನ್'ನಿಂದಾಗಿ ಪಟಾಕಿ ಉದ್ಯಮದ ಮೇಲೆ ಭಾರಿ ಪೆಟ್ಟು ಬಿದ್ದಿದೆ. ಪಟಾಕಿ ಖರೀದಿ ಮಾಡುವವರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಇದರ ಪರಿಣಾಮ ಶಿವಮೊಗ್ಗದಲ್ಲಿ ಪಟಾಕಿ ಮಾರಾಟಗಾರರ ಸಂಖ್ಯೆಯು ಕುಸಿತ ಕಾಣುತ್ತಿದೆ. ಈ ಭಾರಿ ನೆಹರೂ ಸ್ಟೇಡಿಯಂನಲ್ಲಿ 11 ಮಳಿಗೆಗಳು ಮಾತ್ರ ಇದ್ದಾವೆ. ಕಳೆದ ವರ್ಷ ಸುಮಾರು 15 ಮಳಿಗೆಗಳಿದ್ದವು. ಗ್ರಾಹಕರ ಸಂಖ್ಯೆಯು ಇಳಿಮುಖವಾಗಿದೆ ಎಂದು ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಿರೀಕ್ಷೆಯಂತೆ ಗ್ರಾಹಕರು ಪಟಾಕಿ ಖರೀದಿಗೆ ಬರುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

ಸುರಕ್ಷತಾ ಕ್ರಮಗಳು ಹೆಚ್ಚಳಕ್ಕೆ ಆಗ್ರಹ
ಪಟಾಕಿ ಮಳಿಗೆ ಬಾಡಿಗೆ ಪಡೆಯಲು ಮಹಾನಗರ ಪಾಲಿಕಗೆ ನಿಗದಿತ ಶುಲ್ಕ ಪಾವತಿಸಬೇಕು. ಆ ಬಳಿಕ ಸುರಕ್ಷತ ಕ್ರಮಗಳನ್ನು ಅನುಸರಿಸಿ ಮಳಿಗೆಗಳನ್ನು ಒದಗಿಸಲಾಗುತ್ತದೆ. ಅಗ್ನಿ ಅವಘಡ ಸಂಭವಿಸಿದರೆ ಬೆಂಕಿ ನಿಯಂತ್ರಿಸಲು ಪ್ರತಿ ಮಳಿಗೆಯ ಮುಂದೆ ನೀರಿನ ಡ್ರಮ್ ಇಡಲಾಗಿದೆ. ಒಂದು ಬಕೆಟ್'ನಲ್ಲಿ ಮರಳು ಮತ್ತು ನೀರು ಇಡಲಾಗಿದೆ. ಆದರೆ ಪ್ರತ್ಯೇಕವಾಗಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಕೆಲವು ವ್ಯಾಪಾರಿಗಳು ಆಗ್ರಹಿಸಿದ್ದಾರೆ. ವಿದ್ಯುತ್ ದೀಪದ ಸಂಪರ್ಕವು ಕಡಿಮೆ ಎಂಬ ಆರೋಪವು ಕೇಳಿ ಬಂದಿವೆ.
ದೀಪಾವಳಿ ಸಮೀಪದಲ್ಲಿದ್ದರೂ ಜನರು ಪಟಾಕಿ ಖರೀದಿಗೆ ನಿರಾಸಕ್ತಿ ತೋರಿದ್ದಾರೆ. ಇದು ವ್ಯಾಪಾರಿಗಳನ್ನು ಚಿಂತೆಗೀಡು ಮಾಡಿದೆ. ಬುಧವಾರದಿಂದ ಪಟಾಕಿ ಖರೀದಿ ಬಿರುಸು ಪಡೆಯುವ ಸಾದ್ಯತೆ ಇದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications