Shivamogga Airport: ಪ್ರಧಾನಿ ಮೋದಿ ಭೇಟಿಗೂ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಪ್ರಯೋಗ , ವಿಡಿಯೋ ವೈರಲ್
ಉದ್ಘಾಟನೆಗೂ ಮೊದಲೇ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ವಾಯು ಸೇನೆಯ ವಿಮಾನವೊಂದು ಬಂದಿಳಿದಿದ್ದು, ಇದನ್ನು ನೋಡಿದ ಅಲ್ಲಿನ ಜನರು ಸಂತಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ, ಫೆಬ್ರವರಿ, 21: ಶಿವಮೊಗ್ಗದ ಸೋಗಾನೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಉದ್ಘಾಟಿಸಲಿದ್ದಾರೆ. ಹಾಗೆಯೇ ಮೋದಿಯವರ ವಿಮಾನವೇ ಮೊದಲು ಇಲ್ಲಿ ಲ್ಯಾಂಡ್ ಆಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಇತ್ತೀಚೆಗಷ್ಟೇ ಮಾಹಿತಿಯನ್ನು ನೀಡಿದ್ದರು. ಆದರೆ ಇದೀಗ ಉದ್ಘಾಟನೆಗೂ ಮೊದಲೇ ಮಂಗಳವಾರ (ಫೆಬ್ರವರಿ 21) ಮಧ್ಯಾಹ್ನ ಈ ವಿಮಾಣ ನಿಲ್ದಾಣಕ್ಕೆ ಮೊದಲ ವಿಮಾನ ಬಂದಿಳಿದಿದೆ.
Flight trials are underway at #ShivamoggaAirport ahead of #PMModi's visit on February 27. The PM will be inaugurating the airport during his visit. #Karnataka govt has decided to name the airport after #Kuvempu. pic.twitter.com/eCKd0pkUrR
— Mahesh Chitnis (@Mahesh_Chitnis) February 21, 2023
ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಬಂದಿಳಿದಿದೆ. ವಾಯು ಸೇನೆಯ ಬೋಯಿಂಗ್ 737 - 7HI ಮಾದರಿಯ ವಿಮಾನ ಆಗಮಿಸಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ವಿಮಾನ ದೆಹಲಿಯಿಂದ ಹೊರಟಿದ್ದು, 2:30ಕ್ಕೆ ಶಿವಮೊಗ್ಗದಲ್ಲಿನ ನೂತನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಬೋಯಿಂಗ್ ವಿಮಾನ ಬರುತ್ತಿಂದತೆಯೇ ಅಲ್ಲಿನ ಸುತ್ತಮುತ್ತಲಿನ ಪ್ರದೇಶದ ಜನರು ಕಿಕ್ಕಿರಿದು ಆಗಮಿಸಿದ್ದಾರೆ. ಹಾಗೆಯೇ ಅಲ್ಲಿನ ಭದ್ರತಾ ಸಿಬ್ಬಂದಿ ಮತ್ತು ಗ್ರಾಮದ ಜನರು ವಿಮಾನವನ್ನು ಕಂಡು ಸಂತೋಷ ವ್ಯಕ್ತಪಡಿಸಿದ್ದಾರೆ.

ಕನ್ನಡವೇ ಮಾಯ, ಜನಾಕ್ರೋಶ
ಮಲೆನಾಡಿನ ಭಾಗದಲ್ಲಿ ರಾಜ್ಯ ಸರ್ಕಾರದಿಂದ ಹೊಸ ವಿಮಾನ ನಿಲ್ದಾಣವು ಲೋಕಾರ್ಪಣೆಗೆ ಸಿದ್ಧವಾಗಿದೆ. ಆದರೆ ಈ ವಿಮಾನ ನಿಲ್ದಾಣದ ಒಳಗಡೆ ಕನ್ನಡ ಕಣ್ಮರೆಯಾಗಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಮಾನ ನಿಲ್ದಾಣವು ಕೆಲವೇ ದಿನಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಳ್ಳಲಿದೆ. ರಾಜ್ಯ ಬಿಜೆಪಿ ಸರ್ಕಾರ ಹೆಚ್ಚು ಕಾಳಜಿ ವಹಿಸಿ ಈ ನಿಲ್ದಾಣ ಸ್ಥಾಪಿಸಿದೆ ಎನ್ನಲಾಗಿದೆ. ಆದರೆ ಈ ವಿಮಾನ ನಿಲ್ದಾಣ ಕನ್ನಡ ಭಾಷೆ ವಿಚಾರದಲ್ಲಿ ರಾಜ್ಯ ಸರ್ಕಾರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಕನ್ನಡ ನೆಲದಲ್ಲಿ ನಿರ್ಮಾಣವಾದ ಈ ವಿಮಾನ ನಿಲ್ದಾಣದ ಒಳಗಡೆ ಕನ್ನಡ ನಾಮಫಲಕಗಳು ಒಂದೂ ಇಲ್ಲ ಎಂಬುದೇ ಬೇಸರದ ಸಂಗತಿಯಾಗಿದೆ. ಇನ್ನು ಜನರ ಆಕ್ರೋಶ ನಂತರ ಈ ವಿಮಾಣ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಲು ನಿರ್ಧರಿಸಲಾಗಿದೆ.

ಇಂತಹ ರಾಷ್ಟ್ರಕವಿ ಅವರ ಹೆಸರಿರುವ ವಿಮಾನ ನಿಲ್ದಾಣದಲ್ಲಿ ಕನ್ನಡ ನಾಮ ಫಲಕವೇ ಇಲ್ಲದಿದ್ದರೆ ಹೇಗೆ? ಎಂದು ಪ್ರಶ್ನಿಸುವ ಮೂಲಕ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ಪ್ರಾದೇಶಿಕ ಭಾಷೆಗಳಿಗೆ ಮನ್ನಣೆ ಸಿಗಬೇಕು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಕನ್ನಡಿಗರು ಆಗ್ರಹಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications